ಪರೀಕ್ಷೆ ಬರೆಯಲು ಸ್ವಗ್ರಾಮಕ್ಕೆ ಬಂದು ಬೈಕ್ನಲ್ಲಿ ಹೋಗುತ್ತಿದ್ದಾಗ ದುರ್ಘಟನೆ
ಮಂಡ್ಯ: ಪರೀಕ್ಷೆ ಬರೆಯಲು ರಜೆ ಮೇಲೆ ಬಂದಿದ್ದ ಯೋಧನ ಮೇಲೆ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕಾರಿಮನೆ ಗೇಟ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.
ತಾಲ್ಲೂಕಿನ ಸಾತನೂರು ಗ್ರಾಮದ ಬೀರೇಶ್ವರ ಬಡಾವಣೆಯ ನರಸಯ್ಯ ಅವರ ಪುತ್ರ ಮಿಲ್ಟಿç ಕುಮಾರ್ (೩೪) ಮೃತ ಯೋಧ.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ ಮಿಲ್ಟಿç ಕುಮಾರ್ ಅವರು ಮಂಡ್ಯದಲ್ಲಿ ಪರೀಕ್ಷೆ ಬರೆಯುವ ಸಲುವಾಗಿ ಸ್ವಗ್ರಾಮ ಸಾತನೂರಿಗೆ ಬಂದಿದ್ದರು. ಭಾನುವಾರ ಮಧ್ಯಾಹ್ನ ತಂದೆಯೊAದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್ನಲ್ಲಿ ಬರುತ್ತಿದ್ದ ವೇಳೆ ಕಾರಿಮನೆ ಗೇಟ್ ಬಳಿ ಬೈಕ್ ಸವಾರನೊಬ್ಬ ದೊಡ್ಡ ಗುಂಡಿಯೊAದನ್ನು ತಪ್ಪಿಸಲು ತನ್ನ ಬೈಕನ್ನು ಎಡಕ್ಕೆ ಚಲಿಸಿದ್ದಾನೆ. ಈ ವೇಳೆ ಹಿಂದೆ ಬರುತ್ತಿದ್ದ ಕುಮಾರ್ ಅವರ ಬೈಕ್ ಮುಂದೆ ಹೋಗುತ್ತಿದ್ದ ಬೈಕ್ಗೆ ತಗುಲಿ ಕುಮಾರ್ ನೆಲಕ್ಕೆ ಉರುಳಿದ್ದಾರೆ. ಈ ಸಂದರ್ಭ ಕಾಯಿ ಮೊಟ್ಟೆ ತುಂಬಿಕೊಂಡು ಮಂಡ್ಯ ಕಡೆಗೆ ಬರುತ್ತಿದ್ದ ಲಾರಿ ಕುಮಾರ್ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದರು.
ಕುಮಾರ್ ಅವರ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…