ಜಿಲ್ಲೆಗಳು

ಪರೀಕ್ಷೆ ಬರೆಯಲು ಬಂದಿದ್ದ ಯೋಧ ಲಾರಿ ಹರಿದು ಸಾವಿನ ಮನೆಯತ್ತ

ಪರೀಕ್ಷೆ ಬರೆಯಲು ಸ್ವಗ್ರಾಮಕ್ಕೆ ಬಂದು ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರ್ಘಟನೆ

ಮಂಡ್ಯ: ಪರೀಕ್ಷೆ ಬರೆಯಲು ರಜೆ ಮೇಲೆ ಬಂದಿದ್ದ ಯೋಧನ ಮೇಲೆ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕಾರಿಮನೆ ಗೇಟ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.
ತಾಲ್ಲೂಕಿನ ಸಾತನೂರು ಗ್ರಾಮದ ಬೀರೇಶ್ವರ ಬಡಾವಣೆಯ ನರಸಯ್ಯ ಅವರ ಪುತ್ರ ಮಿಲ್ಟಿç ಕುಮಾರ್ (೩೪) ಮೃತ ಯೋಧ.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ ಮಿಲ್ಟಿç ಕುಮಾರ್ ಅವರು ಮಂಡ್ಯದಲ್ಲಿ ಪರೀಕ್ಷೆ ಬರೆಯುವ ಸಲುವಾಗಿ ಸ್ವಗ್ರಾಮ ಸಾತನೂರಿಗೆ ಬಂದಿದ್ದರು. ಭಾನುವಾರ ಮಧ್ಯಾಹ್ನ ತಂದೆಯೊAದಿಗೆ ಸಾತನೂರಿನಿಂದ ಮಂಡ್ಯಕ್ಕೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಕಾರಿಮನೆ ಗೇಟ್ ಬಳಿ ಬೈಕ್ ಸವಾರನೊಬ್ಬ ದೊಡ್ಡ ಗುಂಡಿಯೊAದನ್ನು ತಪ್ಪಿಸಲು ತನ್ನ ಬೈಕನ್ನು ಎಡಕ್ಕೆ ಚಲಿಸಿದ್ದಾನೆ. ಈ ವೇಳೆ ಹಿಂದೆ ಬರುತ್ತಿದ್ದ ಕುಮಾರ್ ಅವರ ಬೈಕ್ ಮುಂದೆ ಹೋಗುತ್ತಿದ್ದ ಬೈಕ್‌ಗೆ ತಗುಲಿ ಕುಮಾರ್ ನೆಲಕ್ಕೆ ಉರುಳಿದ್ದಾರೆ. ಈ ಸಂದರ್ಭ ಕಾಯಿ ಮೊಟ್ಟೆ ತುಂಬಿಕೊಂಡು ಮಂಡ್ಯ ಕಡೆಗೆ ಬರುತ್ತಿದ್ದ ಲಾರಿ ಕುಮಾರ್ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದರು.
ಕುಮಾರ್ ಅವರ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

andolanait

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

40 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

47 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

52 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

57 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

1 hour ago