ಜಿಲ್ಲೆಗಳು

ನಕಲಿ ಆಧಾರ್ ಕಾರ್ಡ್ ಸೃಷ್ಟಿ ಜಾಲ ಸಕ್ರಿಯ?

ಬೆಂಗಳೂರು, ಚಾಮರಾಜನಗರ, ಪರಿಯಾಪಟ್ಟಣದಲ್ಲಿ ಪತ್ತೆಯಾಗ್ದಿ ನಕಲಿ ಕಾರ್ಡ್ ಜಾಲv

ವರದಿ : ಬಿ.ಎನ್.ಧನಂಜಯಗೌಡ

ಮೈಸೂರು : ಶಂಕಿತ ಉಗ್ರ ಶಾರಿಖ್ ನಕಲಿ ಆಧಾರ್ ಕಾರ್ಡ್ ಅನ್ನು ಬಳಸಿಕೊಂಡು ಮೈಸೂರಿನಲ್ಲಿ ಬಾಡಿಗೆ ಮನೆ ಪಡೆದಿದ್ದ ಎಂಬ ತನಿಖಾ ಅಂಶವನ್ನು ಗಮನಿಸಿದರೆ, ರಾಜ್ಯದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸುವ ಜಾಲ ಸಕ್ರಿಯವಾಗಿದೆಯೇ? ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಇನ್ನು ನಕಲಿ ಕಾರ್ಡ್ ಸೃಷ್ಟಿಯಲ್ಲಿ ರಾಜ್ಯವೂ ಎರಡನೇ ಸ್ಥಾನದಲ್ಲಿ ಇದೆ ಎಂದು ಕೆಲವು ಪೊಲೀಸ್ ಮೂಲಗಳು ಹೇಳುತ್ತಿವೆ.

ಹಾಗಾದ್ರೆ ನಕಲಿ ಆಧಾರ್ ಕಾರ್ಡ್ ಸೃಷ್ಟಿ ಹೇಗೆ ?

  • ಮೊದಲಿಗೆ ನಕಲಿ ಆಧಾರ್ ಕಾರ್ಡ್ ಬೇಕಿರುವ ವ್ಯಕ್ತಿಗಳ ಪೋಟೋ ಮತ್ತು ಸ್ವವಿವರ ಸಂಗ್ರಹಿಸುವುದು. ನಕಲಿ ಲೆಟರ್‌ಹೆಡ್ ತಯಾರಿಸಿ ಗೆಜೆಟೆಡ್ ಅಧಿಕಾರಿಗಳ ಮೊಹರು ವಿಳಾಸ ನಮೂದಿಸುವುದು ಪೋಟೋ ಶಾಪ್ ಮೂಲಕ ಆಧಾರ್ ಕಾರ್ಡ್ ಪಡೆಯುವ ವ್ಯಕ್ತಿಗಳ ಹೆಸರು ಉಲ್ಲೇಖಿಸುವುದು. ಆಧಾರ್ ಸೇವಾ ಕೇಂದ್ರಕ್ಕೆ ಅರ್ಜಿ ಸಲ್ಲಿಸಿ, ಕಾರ್ಡ್ ಬಂದ ನಂತರ ಹಣ ನೀಡುವುದು.
  • ಅಕ್ರಮ ಚಟುವಟಿಕೆಗಳಿಗಾಗಿ ಅಸಲಿ ಆಧಾರ್ ಕಾರ್ಡ್ ಕೊಟ್ಟರೆ ಸ್ವವಿವರ ತಿಳಿಯುತ್ತದೆ ಎಂಬ ಕಾರಣಕ್ಕೆ ವೈಯಕ್ತಿಕ ವಿವರಗಳನ್ನು ತಿದ್ದಿ, ಲ್ಯಾಮಿನೇಷನ್ ಮೂಲಕ ನಕಲಿ ಆಧಾರ್ ಕಾರ್ಡ್ ಸೃಷ್ಟಿಸುವುದು.
  • ನಾನಾ ಸೇವಾ ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಮಾಹಿತಿ ಹಂಚಿಕೊಳ್ಳುವುದರಿಂದ ಆಧಾರ ಮಾಹಿತಿ ದುರ್ಬಳಕೆಯಾಗುವ ಸಾಧ್ಯತೆಯೂ ಇದೆ.

ಕೆಲವು ಪ್ರಕರಣಗಳು ಪತ್ತೆ :

  • ಎರಡು ವರ್ಷಗಳ ಹಿಂದೆ ಚಾಮರಾಜನಗರದಲ್ಲೂ ನಕಲಿ ಆಧಾರ್ ಕಾರ್ಡ್ ಸೃಷ್ಟಿಸುವ ಜಾಲ ಪತ್ತೆಯಾಗಿತ್ತು. ೨ ಸಾವಿರ ರೂ.ಪಡೆದು ನಕಲಿ ಆಧಾರ್ ಮಾಡಿಕೊಡುತ್ತಿದ್ದ ಮೂವರು ಆರೋಪಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದರು.
  • ಕಳೆದ ವರ್ಷ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಚಾಲನ ಪರವಾನಿಗಿ ಸೇರಿದಂತೆ ಇನ್ನಿತರ ನಕಲಿ ಕಾರ್ಡ್‌ಗಳನ್ನು ತಯಾರಿಸುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದರು. ರಾಜಸ್ಥಾನ ಮೂಲದ ಕಮಲೇಶ್ ಸೇರಿ ಒಟ್ಟು ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಅವರಿಂದ ಹೆಸರು ವಿಳಾಸವಿಲ್ಲದ ೨೮,೦೦೦ ನಕಲಿ ಚುನಾವಣಾ ಗುರುತಿನ ಚೀಟಿ, ೯,೦೦೦ ನಕಲಿ ಆರ್ಧಾ ಕಾರ್ಡ್‌ಗಳು, ೯,೦೦೦ ಪಾನ್ ಕಾರ್ಡ್‌ಗಳನ್ನು, ೧೨,೨೦೦ ಆರ್‌ಸಿ ಕಾರ್ಡ್‌ಗಳು, ೨ ಪ್ರಿಂಟರ್ ಹಾಗೂ ಕಂಪ್ಯೂಟರ್‌ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
  • ಸುಮಾರು ಆರು ತಿಂಗಳುಗಳ ಹಿಂದೆ ಪಿರಿಯಾಪಟ್ಟಣದಲ್ಲಿಯೂ ೨ ರಿಂದ ೩ ಸಾವಿರ ರೂ.ಪಡೆದು ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಅಂಗಡಿ ಮಾಲೀಕರೊಬ್ಬರನ್ನು ವಶಕ್ಕೆ ಪಡೆಯಲಾಗಿತ್ತು.

ನಕಲಿ ಆಧಾರ್ ಕಾರ್ಡ್ ಬಳಕೆ ಎಲ್ಲಿ ?

  • ವಂಚಿಸುವ ಉದ್ದೇಶದಿಂದ ಬ್ಯಾಂಕ್ ಸಾಲ ಪಡೆಯಲು.
  • ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ವೈಯಕ್ತಿಕ ಮಾಹಿತಿ ತಿದ್ದುವುದು.
  • ಬಾಲ ಕಾರ್ಮಿಕರನ್ನು ವಿವಿಧ ಕೆಲಸಗಳಿಗೆ ಬಳಸಿಕೊಳ್ಳಲು ವಯಸ್ಸನ್ನು ತಿದ್ದುವುದು.
  • ನೆರೆ ದೇಶಗಳಿಗೆ ಅಕ್ರಮವಾಗಿ ನುಸುಳಲು.
  • ಮಾನವ ಕಳ್ಳ ಸಾಗಣೆಗಾಗಿ

ನಕಲಿ ಅಂತ ಗೊತ್ತಾಗುವುದು ಹೇಗೆ?

ಸಾಮಾನ್ಯವಾಗಿ ಹೀಗೆ ಪಡೆಯಲಾಗುವ ನಕಲಿ ಆಧಾರ್ ಕಾರ್ಡ್‌ಗಳನ್ನು ಬಹುತೇಕ ಕಡೆಗಳಲ್ಲಿ ತಕ್ಷಣ ಯುಪಿಐ ಕೋಡ್ ಸ್ಕ್ಯಾನ್ ಮಾಡಿ ಪರಿಶೀಲಿಸುವುದಿಲ್ಲ. ಹೀಗಾಗಿ, ತಕ್ಷಣಕ್ಕೆ ನಕಲಿ ಕಾರ್ಡ್ ಅನ್ನು ಪತ್ತೆ ಮಾಡಲು ಸಾಧ್ಯವಾಗುವುದಿಲ್ಲ. ಅದನ್ನು ಸ್ಕ್ಯಾನ್ ಮಾಡಿ ಪರಿಶೀಲಿಸಿದಾಗ ತಕ್ಷಣ ನಕಲಿ ಎಂದು ಪತ್ತೆ ಮಾಡಬಹುದು.

ಮೈಸೂರಿನಲ್ಲಿ ಇದ್ದ ಎನ್ನಲಾದ ಶಂಕಿತ ಉಗ್ರ ಪ್ರೇಮ್‌ರಾಜ್ ಎಂಬಾತನ ಆಧಾರ್ ಕಾರ್ಡ್ ಡೇಟಾವನ್ನು ದುರ್ಬಳಕೆ ಮಾಡಿಕೊಂಡು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡಿದ್ದ. ಅದನ್ನು ಸ್ಕ್ಯಾನ್ ಮಾಡಿದಾಗ ನಕಲಿ ಎಂಬುದು ಗೊತ್ತಾಗಿದೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳೇನಾದರೂ ನಗರದಲ್ಲಿ ಇವೇಯಾ ಎಂಬ ಬಗ್ಗೆ ನಗರದ ಎಲ್ಲ ಠಾಣೆಗಳ ಪೊಲೀಸರಿಂದ ಮಾಹಿತಿ ಪಡೆಯಲಾಗುವುದು.
-ರಮೇಶ್ ಬಾನೋತ್, ನಗರ ಪೊಲೀಸ್ ಆಯುಕ್ತ, ಮೈಸೂರು.

 

andolana

Recent Posts

ಕಾರ್ಮಿಕನ ಮೇಲೆ ಕಾಡಾನೆ ದಾಳಿ : ಸ್ಥಳದಲ್ಲೇ ಸಾವು

ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ…

15 mins ago

ಮೈಸೂರು ಮೃಗಾಲಯದಲ್ಲಿ 9 ಮಂದಿ ಮಾತ್ರ ಖಾಯಂ ನೌಕರರಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…

1 hour ago

ವಿಪಕ್ಷಗಳ ವಿರೋಧದ ಮಧ್ಯೆ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…

2 hours ago

ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…

2 hours ago

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…

2 hours ago

ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್‌ ಮತ್ತು ಅಜೀವಿಕಾ…

2 hours ago