Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಓದಿರೋದು ಒಂದು ಕೊಡುತ್ತಿದ್ದ ಚಿಕಿತ್ಸೆ ಮತ್ತೊಂದು! ನಕಲಿ ಅಲೋಪತಿ ವೈದ್ಯರಿದ್ದ ಮೂರು ಕ್ಲೀನಿಕ್ ಬಂದ್‌

ಹನೂರು: ತಾಲ್ಲೂಕಿನ ಜನರ ಜೀವದೊಟ್ಟಿಗೆ ಚೆಲ್ಲಾಟ ಆಡುತ್ತಿದ್ದ ನಕಲಿ ಅಲೋಪತಿ ವೈದ್ಯರಿಗೆ ಡಿಎಚ್ ಒ ಡಾ. ವಿಶ್ವೇಶ್ವರಯ್ಯ ಬಿಸಿ‌ ಮುಟ್ಟಿಸಿ ಕ್ಲೀನಿಕ್ ಗಳನ್ನು ಬಂದ್ ಮಾಡಿಸಿರುವ ಘಟನೆ ಕೌದಳ್ಳಿಯಲ್ಲಿ ನಡೆದಿದೆ.
ತಾಲೂಕಿನ ನಕಲಿ ಕ್ಲೀನಿಕ್ ಗಳ ಮೇಲೆ ಡಿಎಚ್ಒ ಡಾ.ವಿಶ್ವೇಶ್ವರಯ್ಯ ಹಾಗೂ ಪ್ರಭಾರ ಟಿಎಚ್ ಒ ಡಾ ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕೌದಳ್ಳಿ ಗ್ರಾಮದಲ್ಲಿ ಇರುವ ಆದಮ್ ಕ್ಲೀನಿಕ್, ಜನತಾ ಕ್ಲೀನಿಕ್ ಹಾಗೂ ದೀಪಾ ಕ್ಲಿನಿಕ್ ಗಳಿಗೆ ನೋಟಿಸ್ ಜಾರಿ ಬಂದ್ ಮಾಡಿಸಿದ್ದಾರೆ‌.
ತಾಲೂಕಿನ ವಿವಿಧಡೆ ನಕಲಿ ಕ್ಲೀನಿಕ್ ಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರು ದೂರಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ‌ಅಜ್ಜೀಪುರ, ರಾಮಾಪುರ ಮತ್ತು ಕೂಡ್ಲೂರು, ಹೂಗ್ಯಂ ಇನ್ನಿತರೆ ಇರುವ ಕ್ಕೀನಿಕ್ ಗಳನ್ನು ಗುರುವಾರ ಅಧಿಕಾರಿಗಳ‌ ತಂಡ ಪರಿಶೀಲನೆ ಮಾಡಲಿದ್ದಾರೆ. ಲೈಸೆನ್ಸ್ ಒಬ್ಬರದ್ದಾದರೇ ಚಿಕಿತ್ಸೆ ಕೊಡುವವರು ಮತ್ತೊಬ್ಬರು, ಆಯುಷ್ ವೈದ್ಯರು ಅಲೋಪತಿ ಚಿಕಿತ್ಸೆ ಕೊಡುತ್ತಿರುವುದು ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!