ಹನೂರು : ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಬುಧವಾರ ಅಜ್ಜೀಪುರ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನಲ್ಲಿ ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದರು ಎಂಬ ದೂರಿನ ಮೇಲೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿಗಳು ನಕಲಿ ಕ್ಲಿನಿಕ್ ಗಳಿಗೆ ಬೀಗ ಹಾಕಿದ್ದಾರೆ.
ಇದೆ ಸಂದರ್ಭದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಡಿ ಎಚ್ ಓ ಡಾಕ್ಟರ್ ವಿಶ್ವೇಶ್ವರಯ್ಯ ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಮೊದಲ ಬಾರಿ ನೋಟೀಸ್ ಕೊಟ್ಟಿದ್ದೇವೆ ಆದರೇ ನೋಟಿಸ್ ಗೆ ಹೆದರದೆ ಮತ್ತೆ ಚಿಕಿತ್ಸೆ ನೀಡುತ್ತಿದ್ದರು ಎಂಬ ಮಾಹಿತಿ ಬಂದ ಮೇಲೆ ಇಂದು ನಕಲಿ ಕ್ಲಿನಿಕ್ ಗಳನ್ನು ಸೀಜ್ ಮಾಡಿದ್ದೇವೆ. ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಅಲ್ಲದೆ ನಮ್ಮ ಸಿ ಎಚ್ ಒ ಹಾಗೂ ಎ ಎನ್ಅ ಎಂ ಅವರನ್ನು ಇಲ್ಲೇ ಉಳಿದು ಸೇವೆ ನೀಡಬೇಕು ಎಂದು ಆದೇಶ ನೀಡಿದ್ದೇವೆ. ಇಲ್ಲಿ ಉಳಿಯಲು ವ್ಯವಸ್ಥೆ ಸಹ ಇದ್ದು ಆರೋಗ್ಯ ಸೇವೆ ಸಿಗಲಿದೆ ಎಂದರು.
ಉಪಕೇಂದ್ರಕ್ಕೆ ಭೇಟಿ : ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದ ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ನೀಡಲು ಸೂಚನೆ ನೀಡಿದರು.
ಇದೆ ಸಂದರ್ಭದಲ್ಲಿ ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ. ಪ್ರಕಾಶ್, ವೈದ್ಯರಾದ ಡಾ. ಮನು, ಸಿ ಎಚ್ ಒ ಸಿದ್ದೇಶ್ ಹಾಗೂ ಆಶಾ ಕಾರ್ಯಕರ್ತರು ಇದ್ದರು
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…