ಹನೂರು : ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಬುಧವಾರ ಅಜ್ಜೀಪುರ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನಲ್ಲಿ ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದರು ಎಂಬ ದೂರಿನ ಮೇಲೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿಗಳು ನಕಲಿ ಕ್ಲಿನಿಕ್ ಗಳಿಗೆ ಬೀಗ ಹಾಕಿದ್ದಾರೆ.
ಇದೆ ಸಂದರ್ಭದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಡಿ ಎಚ್ ಓ ಡಾಕ್ಟರ್ ವಿಶ್ವೇಶ್ವರಯ್ಯ ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಮೊದಲ ಬಾರಿ ನೋಟೀಸ್ ಕೊಟ್ಟಿದ್ದೇವೆ ಆದರೇ ನೋಟಿಸ್ ಗೆ ಹೆದರದೆ ಮತ್ತೆ ಚಿಕಿತ್ಸೆ ನೀಡುತ್ತಿದ್ದರು ಎಂಬ ಮಾಹಿತಿ ಬಂದ ಮೇಲೆ ಇಂದು ನಕಲಿ ಕ್ಲಿನಿಕ್ ಗಳನ್ನು ಸೀಜ್ ಮಾಡಿದ್ದೇವೆ. ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಅಲ್ಲದೆ ನಮ್ಮ ಸಿ ಎಚ್ ಒ ಹಾಗೂ ಎ ಎನ್ಅ ಎಂ ಅವರನ್ನು ಇಲ್ಲೇ ಉಳಿದು ಸೇವೆ ನೀಡಬೇಕು ಎಂದು ಆದೇಶ ನೀಡಿದ್ದೇವೆ. ಇಲ್ಲಿ ಉಳಿಯಲು ವ್ಯವಸ್ಥೆ ಸಹ ಇದ್ದು ಆರೋಗ್ಯ ಸೇವೆ ಸಿಗಲಿದೆ ಎಂದರು.
ಉಪಕೇಂದ್ರಕ್ಕೆ ಭೇಟಿ : ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದ ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ನೀಡಲು ಸೂಚನೆ ನೀಡಿದರು.
ಇದೆ ಸಂದರ್ಭದಲ್ಲಿ ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ. ಪ್ರಕಾಶ್, ವೈದ್ಯರಾದ ಡಾ. ಮನು, ಸಿ ಎಚ್ ಒ ಸಿದ್ದೇಶ್ ಹಾಗೂ ಆಶಾ ಕಾರ್ಯಕರ್ತರು ಇದ್ದರು
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…