ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಹೋಬಳಿಯ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ಅರಣ್ಯ ಸಮೀಪದಲ್ಲಿ ದನ, ಕುರಿಗಳನ್ನು ಮೇಯಿಸುತ್ತಿದ್ದ ರೈತರೊಬ್ಬರಿಗೆ ಚಿರತೆಯು ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಜೆ ನಡೆದಿದೆ.
ದೊಡ್ಡಗಾಡಿಗನಹಳ್ಳಿ ಗ್ರಾಮದ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ರೈತ ವೆಂಕಟೇಶ್ ಅವರು ತಮ್ಮ ಜಮೀನಿನ ಬಳಿ ಇರುವ ಅರಣ್ಯ ಪ್ರದೇಶದ ಹತ್ತಿರ ದನಗಳು ಹಾಗೂ ಕುರಿಗಳನ್ನು ಮೇಯಿಸುತ್ತಿದ್ದರು. ಈ ಸಂದರ್ಭದಲ್ಲಿ ಅರಣ್ಯದ ಪೊದೆಯಲ್ಲಿ ಅವಿತು ಕುಳಿತಿದ್ದ ಚಿರತೆಯು ರೈತ ವೆಂಕಟೇಶ್ ಮೇಲೆ ದಾಳಿ ನಡೆಸಿದೆ. ಪರಿಣಾಮ ತಲೆ ಮತ್ತು ಮುಖದ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಕೂಡಲೇ ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ವೆಂಕಟೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ ಡಾ.ಅನಿತಾ ಭೇಟಿ ನೀಡಿ ಗಾಯಾಳುವಿಗೆ ಧೈರ್ಯ ಹೇಳಿ ಇಲಾಖೆಯ ವತಿಯಿಂದ ಚಿಕಿತ್ಸಾ ವೆಚ್ಚ ಹಾಗೂ ಸೂಕ್ತ ಪರಿಹಾರವನ್ನು ಕೊಡಿಸುವ ಭರವಸೆ ನೀಡಿದ್ದಾರೆ.
ಚಿರತೆ ಸೆರೆಗೆ ಆಗ್ರಹ:
ತಾಲ್ಲೂಕಿನಾದ್ಯಂತ ಚಿರತೆಗಳ ಹಾವಳಿ ಜಾಸ್ತಿಯಾಗಿದೆ. ಅರಣ್ಯ ಇಲಾಖೆಯ ಬಳಿ ಒಂದೆರಡು ಮಾತ್ರ ಬೋನಿವೆ. ಇನ್ನಷ್ಟು ಬೋನುಗಳನ್ನು ತರಿಸಿ ಚಿರತೆ ಹಾವಳಿ ಇರುವ ಕಡೆ ಇಟ್ಟು ಚಿರತೆಗಳನ್ನು ಸೆರೆ ಹಿಡಿದು ರೈತರಲ್ಲಿರುವ ಆತಂಕವನ್ನು ದೂರ ಮಾಡಬೇಕು ಎಂದು ತಾಲ್ಲೂಕು ಕರ್ನಾಟಕ ರಕ್ಷಣಾ ಸೇನೆಯ ಅಧ್ಯಕ್ಷ ಪ್ರಶಾಂತ್ ಅರಣ್ಯಾಧಿಕಾರಿಗಳನ್ನು ಒತ್ತಾಯ ಮಾಡಿದ್ದಾರೆ.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…