ಜಿಲ್ಲೆಗಳು

ಕುರಿ ಮೇಯಿಸುತ್ತಿದ್ದ ರೈತನ‌ ಮೇಲೆ ಚಿರತೆ ದಾಳಿ; ಗಂಭೀರವಾಗಿ ಗಾಯಗೊಂಡ ರೈತ

 

ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಹೋಬಳಿಯ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ಅರಣ್ಯ ಸಮೀಪದಲ್ಲಿ ದನ, ಕುರಿಗಳನ್ನು ಮೇಯಿಸುತ್ತಿದ್ದ ರೈತರೊಬ್ಬರಿಗೆ ಚಿರತೆಯು ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಜೆ ನಡೆದಿದೆ.

ದೊಡ್ಡಗಾಡಿಗನಹಳ್ಳಿ ಗ್ರಾಮದ ವೆಂಕಟೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ರೈತ ವೆಂಕಟೇಶ್ ಅವರು ತಮ್ಮ ಜಮೀನಿನ ಬಳಿ ಇರುವ ಅರಣ್ಯ ಪ್ರದೇಶದ ಹತ್ತಿರ ದನಗಳು ಹಾಗೂ ಕುರಿಗಳನ್ನು ಮೇಯಿಸುತ್ತಿದ್ದರು. ಈ ಸಂದರ್ಭದಲ್ಲಿ ಅರಣ್ಯದ ಪೊದೆಯಲ್ಲಿ ಅವಿತು ಕುಳಿತಿದ್ದ ಚಿರತೆಯು ರೈತ ವೆಂಕಟೇಶ್ ಮೇಲೆ ದಾಳಿ ನಡೆಸಿದೆ. ಪರಿಣಾಮ ತಲೆ ಮತ್ತು ಮುಖದ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ಕೂಡಲೇ ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ವೆಂಕಟೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ತಾಲ್ಲೂಕು ಅರಣ್ಯ ಸಂರಕ್ಷಣಾಧಿಕಾರಿ ಡಾ.ಅನಿತಾ ಭೇಟಿ ನೀಡಿ ಗಾಯಾಳುವಿಗೆ ಧೈರ್ಯ ಹೇಳಿ ಇಲಾಖೆಯ ವತಿಯಿಂದ ಚಿಕಿತ್ಸಾ ವೆಚ್ಚ ಹಾಗೂ ಸೂಕ್ತ ಪರಿಹಾರವನ್ನು ಕೊಡಿಸುವ ಭರವಸೆ ನೀಡಿದ್ದಾರೆ.

ಚಿರತೆ ಸೆರೆಗೆ ಆಗ್ರಹ:
ತಾಲ್ಲೂಕಿನಾದ್ಯಂತ ಚಿರತೆಗಳ ಹಾವಳಿ ಜಾಸ್ತಿಯಾಗಿದೆ. ಅರಣ್ಯ ಇಲಾಖೆಯ ಬಳಿ ಒಂದೆರಡು ಮಾತ್ರ ಬೋನಿವೆ. ಇನ್ನಷ್ಟು ಬೋನುಗಳನ್ನು ತರಿಸಿ ಚಿರತೆ ಹಾವಳಿ ಇರುವ ಕಡೆ ಇಟ್ಟು ಚಿರತೆಗಳನ್ನು ಸೆರೆ ಹಿಡಿದು ರೈತರಲ್ಲಿರುವ ಆತಂಕವನ್ನು ದೂರ ಮಾಡಬೇಕು ಎಂದು ತಾಲ್ಲೂಕು ಕರ್ನಾಟಕ ರಕ್ಷಣಾ ಸೇನೆಯ ಅಧ್ಯಕ್ಷ ಪ್ರಶಾಂತ್ ಅರಣ್ಯಾಧಿಕಾರಿಗಳನ್ನು ಒತ್ತಾಯ ಮಾಡಿದ್ದಾರೆ.

andolana

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

3 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

16 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

16 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

16 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

16 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago