ಜಿಲ್ಲೆಗಳು

ಸಾಲಬಾಧೆಯಿಂದಾಗಿ ರೈತ ಸಾವಿಗೆ ಶರಣು

ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಣ್ಣೇದೊಡ್ಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ.
ಪಣ್ಣೇದೊಡ್ಡಿ ಗ್ರಾಮದ ಲೇ.ಚನ್ನಯ್ಯ ಅವರ ಪುತ್ರ ಸಿ.ಪಿ.ಸುರೇಶ್ (೫೭) ಮೃತಪಟ್ಟ ರೈತ. ಮೃತನಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರಿದ್ದು, ಮೃತ ಸಿ.ಪಿ.ಸುರೇಶ್ ಅವರಿಗೆ ೨೦ ಗುಂಟೆ ಜಮೀನಿದ್ದು, ವ್ಯವಸಾಯ ಮಾಡಲು ಸ್ವಸಹಾಯ ಸಂಘ ಮತ್ತು ಡಿಸಿಸಿ ಬ್ಯಾಂಕ್‌ಗಳಿಂದ ೭೫ ಸಾವಿರ, ಕಾವೇರಿ ಗ್ರಾಮೀಣ ಬ್ಯಾಂಕ್ ೨ ಲಕ್ಷ, ಚಿನ್ನಾಭರಣಗಳನ್ನು ೨ ಲಕ್ಷಕ್ಕೆ ಗಿರಿವಿಯಿಟ್ಟಿದ್ದು ಕೈಸಾಲ ೧ ಲಕ್ಷ ಒಟ್ಟು ೬ ಲಕ್ಷಕ್ಕೂ ಅಧಿಕ ಸಾಲ ಮಾಡಿರುವುದಾಗಿ ತಿಳಿದುಬಂದಿದೆ.
ವ್ಯವಸಾಯದಲ್ಲಿ ನಷ್ಟದ ಜತೆಗೆ ಅಧಿಕ ಕೈಸಾಲ ಮಾಡಿದ್ದ ಹಿನ್ನೆಲೆಯಲ್ಲಿ ಮನನೊಂದ ಸುರೇಶ್ ಕಳೆದ ಎರಡು ದಿನಗಳ ಹಿಂದೆ ತನ್ನ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಈತನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.
ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗಿದ್ದು, ಸುರೇಶ್ ಮೃತಪಟ್ಟಿದ್ದು, ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

andolanait

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

5 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

5 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

9 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

9 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

9 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

9 hours ago