ಜಿಲ್ಲೆಗಳು

ಸಾಲಬಾಧೆಯಿಂದಾಗಿ ರೈತ ಸಾವಿಗೆ ಶರಣು

ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಣ್ಣೇದೊಡ್ಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ.
ಪಣ್ಣೇದೊಡ್ಡಿ ಗ್ರಾಮದ ಲೇ.ಚನ್ನಯ್ಯ ಅವರ ಪುತ್ರ ಸಿ.ಪಿ.ಸುರೇಶ್ (೫೭) ಮೃತಪಟ್ಟ ರೈತ. ಮೃತನಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರಿದ್ದು, ಮೃತ ಸಿ.ಪಿ.ಸುರೇಶ್ ಅವರಿಗೆ ೨೦ ಗುಂಟೆ ಜಮೀನಿದ್ದು, ವ್ಯವಸಾಯ ಮಾಡಲು ಸ್ವಸಹಾಯ ಸಂಘ ಮತ್ತು ಡಿಸಿಸಿ ಬ್ಯಾಂಕ್‌ಗಳಿಂದ ೭೫ ಸಾವಿರ, ಕಾವೇರಿ ಗ್ರಾಮೀಣ ಬ್ಯಾಂಕ್ ೨ ಲಕ್ಷ, ಚಿನ್ನಾಭರಣಗಳನ್ನು ೨ ಲಕ್ಷಕ್ಕೆ ಗಿರಿವಿಯಿಟ್ಟಿದ್ದು ಕೈಸಾಲ ೧ ಲಕ್ಷ ಒಟ್ಟು ೬ ಲಕ್ಷಕ್ಕೂ ಅಧಿಕ ಸಾಲ ಮಾಡಿರುವುದಾಗಿ ತಿಳಿದುಬಂದಿದೆ.
ವ್ಯವಸಾಯದಲ್ಲಿ ನಷ್ಟದ ಜತೆಗೆ ಅಧಿಕ ಕೈಸಾಲ ಮಾಡಿದ್ದ ಹಿನ್ನೆಲೆಯಲ್ಲಿ ಮನನೊಂದ ಸುರೇಶ್ ಕಳೆದ ಎರಡು ದಿನಗಳ ಹಿಂದೆ ತನ್ನ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಈತನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.
ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗಿದ್ದು, ಸುರೇಶ್ ಮೃತಪಟ್ಟಿದ್ದು, ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

andolanait

Recent Posts

ಹುಣಸೂರು: ಕೇವಲ 4 ನಿಮಿಷದಲ್ಲೇ ಕೆಜಿ ಕೆಜಿ ಚಿನ್ನ ದರೋಡೆ

ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…

1 min ago

ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್:‌ ಕಾರಣ ಇಷ್ಟೇ

ಬೀದರ್:‌ 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್‌ ವಿರುದ್ಧ ಎಫ್‌ಐಆರ್‌…

20 mins ago

ಪ್ರೀತಿ ವಿಚಾರವಾಗಿ ಹಲ್ಲೆ: ಮನನೊಂದು ಯುವಕ ಆತ್ಮಹತ್ಯೆ

ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…

48 mins ago

ರಾಷ್ಟ್ರಕವಿ ಕುವೆಂಪು ಕಟ್ಟಿದ ಸಂವಿಧಾನ ಸ್ವಾಗತ ಗೀತೆ

ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…

1 hour ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಚಲನ ಮೂಡಿಸಿದ ಬಿಜೆಪಿ-ಜಾ.ದಳ ಮೈತ್ರಿ ವಿಚಾರ

ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ  ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…

2 hours ago

ಆಟಿಕೆ ಮಾರಾಟಗಾರರ ಸುರಕ್ಷತೆಗೆ ಸರ್ಕಾರಗಳು ಮುಂದಾಗಲಿ

2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…

2 hours ago