ಜಿಲ್ಲೆಗಳು

ಸಾಲಬಾಧೆಯಿಂದಾಗಿ ರೈತ ಸಾವಿಗೆ ಶರಣು

ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಣ್ಣೇದೊಡ್ಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ.
ಪಣ್ಣೇದೊಡ್ಡಿ ಗ್ರಾಮದ ಲೇ.ಚನ್ನಯ್ಯ ಅವರ ಪುತ್ರ ಸಿ.ಪಿ.ಸುರೇಶ್ (೫೭) ಮೃತಪಟ್ಟ ರೈತ. ಮೃತನಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರಿದ್ದು, ಮೃತ ಸಿ.ಪಿ.ಸುರೇಶ್ ಅವರಿಗೆ ೨೦ ಗುಂಟೆ ಜಮೀನಿದ್ದು, ವ್ಯವಸಾಯ ಮಾಡಲು ಸ್ವಸಹಾಯ ಸಂಘ ಮತ್ತು ಡಿಸಿಸಿ ಬ್ಯಾಂಕ್‌ಗಳಿಂದ ೭೫ ಸಾವಿರ, ಕಾವೇರಿ ಗ್ರಾಮೀಣ ಬ್ಯಾಂಕ್ ೨ ಲಕ್ಷ, ಚಿನ್ನಾಭರಣಗಳನ್ನು ೨ ಲಕ್ಷಕ್ಕೆ ಗಿರಿವಿಯಿಟ್ಟಿದ್ದು ಕೈಸಾಲ ೧ ಲಕ್ಷ ಒಟ್ಟು ೬ ಲಕ್ಷಕ್ಕೂ ಅಧಿಕ ಸಾಲ ಮಾಡಿರುವುದಾಗಿ ತಿಳಿದುಬಂದಿದೆ.
ವ್ಯವಸಾಯದಲ್ಲಿ ನಷ್ಟದ ಜತೆಗೆ ಅಧಿಕ ಕೈಸಾಲ ಮಾಡಿದ್ದ ಹಿನ್ನೆಲೆಯಲ್ಲಿ ಮನನೊಂದ ಸುರೇಶ್ ಕಳೆದ ಎರಡು ದಿನಗಳ ಹಿಂದೆ ತನ್ನ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಈತನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.
ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗಿದ್ದು, ಸುರೇಶ್ ಮೃತಪಟ್ಟಿದ್ದು, ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

andolanait

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

10 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

10 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

10 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

11 hours ago