ಜಿಲ್ಲೆಗಳು

ಮಂಡ್ಯ : ಉಪವಾಸ ಸತ್ಯಾಗ್ರಹ ಕೈಬಿಟ್ಟ ರೈತರು

ಮಂಡ್ಯ: ಪ್ರತಿ ಟನ್ ಕಬ್ಬಿಗೆ 4500 ರೂ. ಹಾಗೂ ಪ್ರತಿ ಲೀರ್ ಹಾಲಿಗೆ 40 ರೂ ನಿಗದಿಪಡಿಸುವಂತೆ ಆಗ್ರಹಿಸಿ ಕಳೆದ ಫೆ.15ರಿಂದ ರೈತಸಂಘದ ಕಾರ‍್ಯಕರ್ತರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸೋಮವಾರ ಅಂತ್ಯಗೊಂಡಿದೆ.

ಕಬ್ಬು ಮತ್ತು ಹಾಲಿನ ದರ ನಿಗದಿಗೆ ಒತ್ತಾಯಿಸಿ ರೈತಸಂಘದ ಕಾರ‍್ಯಕರ್ತರು ನ.೭ರಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಹೋರಾಟವು ಫೆ.14ರಂದು ಶತದಿನ ಪೂರೈಸಿದರೂ ಸರಕಾರ ತಮ್ಮ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಫೆ.15ರಿಂದ ಐದು ಮಂದಿ ಕಾರ‍್ಯಕರ್ತರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
ಇವರಲ್ಲಿ ಇಬ್ಬರು ಶನಿವಾರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸ್ವಲ್ಪ ಗುಣಮುಖರಾದ ಬಳಿಕ ಮತ್ತೆ ಧರಣಿ ಸ್ಥಳಕ್ಕೆ ಆಗಮಿಸಿ, ಸತ್ಯಾಗ್ರಹ ಮುಂದುವರೆಸಿದ್ದರು. ಆದರೆ, ಉಪವಾಸ ನಿರತ ಮಲ್ಲನಾಯಕನಕಟ್ಟೆ ವಿಜಯಕುಮಾರ್, ಭೂತನಹೊಸೂರು ಸಂತೋಷ್, ವಿನೋದ್‌ಬಾಬು, ಜಿ.ಮಲ್ಲಿಗೆರೆ ಅಣ್ಣಯ್ಯ, ಗೂಳೂರು ರಾಮಕೃಷ್ಣ ಅವರ ಆರೋಗ್ಯದಲ್ಲಿ ಸೋಮವಾರ ಸ್ವಲ್ಪ ಏರುಪೇರಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಡಿಎಚ್‌ಒ ಡಾ.ಟಿ.ಎನ್.ಧನಂಜಯ, ತಹಸಿಲ್ದಾರ್ ಕುಂ.ಞ. ಅಹಮ್ಮದ್ ಅವರು ಸೋಮವಾರ ಸಂಜೆ ಧರಣಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.
ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ದೇಹದಲ್ಲಿ ಪೊಟ್ಯಾಷಿಯಂ, ಸೋಡಿಯಂ ಪ್ರಮಾಣ ಕಡಿಮೆಯಾಗಿದೆ. ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ಅವರ ಆರೋಗ್ಯದ ದೃಷ್ಟಿಯಿಂದ ದಯವಿಟ್ಟು ಉಪವಾಸ ಕೈಬಿಡಿ. ಮುಖ್ಯಮಂತ್ರಿಯವರು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದ್ದಾರೆ. ನೀವು ಹೋರಾಟ ಮುಂದುವರೆಸಲು ಯಾವುದೇ ಅಡ್ಡಿಯಿಲ್ಲ ಎಂದು ಮನವಿ ಮಾಡಿದರು.
ಸುದೀರ್ಘ ಮಾತುಕತೆ ಬಳಿಕ ಪ್ರತಿಭಟನಾಕಾರರ ಮನವೊಲಿಸಿ, ಅವರಿಗೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ಸ್ವತಃ ತಂಪು ಪಾನೀಯ ಕುಡಿಸಿದರು. ಇದರೊಂದಿಗೆ ಉಪವಾಸ ಸತ್ಯಾಗ್ರಹ ಅಂತ್ಯಗೊಂಡಿತು. ಈ ಸಂದರ್ಭದಲ್ಲಿ ರೈತಸಂಘದ ರಾಜ್ಯ ಸಂಘಟನಾ ಕಾರ‍್ಯದರ್ಶಿ ಎಸ್.ಸಿ.ಮಧುಚಂದನ್, ಸರ್ವೋದಯ ಕರ್ನಾಟಕ ಪಕ್ಷದ ಪ್ರಧಾನ ಕಾರ‍್ಯದರ್ಶಿ ಪ್ರಸನ್ನ ಎನ್.ಗೌಡ ಇತರರು ಹಾಜರಿದ್ದರು.


ಇಂದು ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತನಾಯಕ ದರ್ಶನ್ ಪುಟ್ಟಣ್ಣಯ್ಯ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಸಮಾಲೋಚಿಸಿದ್ದಾರೆ. ಫೆ.24ರೊಳಗೆ ಸಭೆ ಕರೆದು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯವರ ಭರವಸೆಗೆ ಉಪವಾಸ ಸತ್ಯಾಗ್ರಹವನ್ನು ಕೈ ಬಿಡಲಾಗಿದೆ. ಆದರೆ, ಅಹೋರಾತ್ರಿ ಧರಣಿ ಮುಂದುವರೆಯಲಿದೆ.

-ಎಸ್.ಸಿ.ಮಧುಚಂದನ್, ರಾಜ್ಯ ಸಂಘಟನಾ ಕಾರ‍್ಯದರ್ಶಿ, ರೈತಸಂಘ, ಮಂಡ್ಯ

andolanait

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

9 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

10 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

11 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

11 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

11 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

12 hours ago