ಜಿಲ್ಲೆಗಳು

ಮಂಡ್ಯ : ಉಪವಾಸ ಸತ್ಯಾಗ್ರಹ ಕೈಬಿಟ್ಟ ರೈತರು

ಮಂಡ್ಯ: ಪ್ರತಿ ಟನ್ ಕಬ್ಬಿಗೆ 4500 ರೂ. ಹಾಗೂ ಪ್ರತಿ ಲೀರ್ ಹಾಲಿಗೆ 40 ರೂ ನಿಗದಿಪಡಿಸುವಂತೆ ಆಗ್ರಹಿಸಿ ಕಳೆದ ಫೆ.15ರಿಂದ ರೈತಸಂಘದ ಕಾರ‍್ಯಕರ್ತರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸೋಮವಾರ ಅಂತ್ಯಗೊಂಡಿದೆ.

ಕಬ್ಬು ಮತ್ತು ಹಾಲಿನ ದರ ನಿಗದಿಗೆ ಒತ್ತಾಯಿಸಿ ರೈತಸಂಘದ ಕಾರ‍್ಯಕರ್ತರು ನ.೭ರಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಹೋರಾಟವು ಫೆ.14ರಂದು ಶತದಿನ ಪೂರೈಸಿದರೂ ಸರಕಾರ ತಮ್ಮ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಫೆ.15ರಿಂದ ಐದು ಮಂದಿ ಕಾರ‍್ಯಕರ್ತರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
ಇವರಲ್ಲಿ ಇಬ್ಬರು ಶನಿವಾರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸ್ವಲ್ಪ ಗುಣಮುಖರಾದ ಬಳಿಕ ಮತ್ತೆ ಧರಣಿ ಸ್ಥಳಕ್ಕೆ ಆಗಮಿಸಿ, ಸತ್ಯಾಗ್ರಹ ಮುಂದುವರೆಸಿದ್ದರು. ಆದರೆ, ಉಪವಾಸ ನಿರತ ಮಲ್ಲನಾಯಕನಕಟ್ಟೆ ವಿಜಯಕುಮಾರ್, ಭೂತನಹೊಸೂರು ಸಂತೋಷ್, ವಿನೋದ್‌ಬಾಬು, ಜಿ.ಮಲ್ಲಿಗೆರೆ ಅಣ್ಣಯ್ಯ, ಗೂಳೂರು ರಾಮಕೃಷ್ಣ ಅವರ ಆರೋಗ್ಯದಲ್ಲಿ ಸೋಮವಾರ ಸ್ವಲ್ಪ ಏರುಪೇರಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಡಿಎಚ್‌ಒ ಡಾ.ಟಿ.ಎನ್.ಧನಂಜಯ, ತಹಸಿಲ್ದಾರ್ ಕುಂ.ಞ. ಅಹಮ್ಮದ್ ಅವರು ಸೋಮವಾರ ಸಂಜೆ ಧರಣಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.
ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ದೇಹದಲ್ಲಿ ಪೊಟ್ಯಾಷಿಯಂ, ಸೋಡಿಯಂ ಪ್ರಮಾಣ ಕಡಿಮೆಯಾಗಿದೆ. ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ಅವರ ಆರೋಗ್ಯದ ದೃಷ್ಟಿಯಿಂದ ದಯವಿಟ್ಟು ಉಪವಾಸ ಕೈಬಿಡಿ. ಮುಖ್ಯಮಂತ್ರಿಯವರು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದ್ದಾರೆ. ನೀವು ಹೋರಾಟ ಮುಂದುವರೆಸಲು ಯಾವುದೇ ಅಡ್ಡಿಯಿಲ್ಲ ಎಂದು ಮನವಿ ಮಾಡಿದರು.
ಸುದೀರ್ಘ ಮಾತುಕತೆ ಬಳಿಕ ಪ್ರತಿಭಟನಾಕಾರರ ಮನವೊಲಿಸಿ, ಅವರಿಗೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ಸ್ವತಃ ತಂಪು ಪಾನೀಯ ಕುಡಿಸಿದರು. ಇದರೊಂದಿಗೆ ಉಪವಾಸ ಸತ್ಯಾಗ್ರಹ ಅಂತ್ಯಗೊಂಡಿತು. ಈ ಸಂದರ್ಭದಲ್ಲಿ ರೈತಸಂಘದ ರಾಜ್ಯ ಸಂಘಟನಾ ಕಾರ‍್ಯದರ್ಶಿ ಎಸ್.ಸಿ.ಮಧುಚಂದನ್, ಸರ್ವೋದಯ ಕರ್ನಾಟಕ ಪಕ್ಷದ ಪ್ರಧಾನ ಕಾರ‍್ಯದರ್ಶಿ ಪ್ರಸನ್ನ ಎನ್.ಗೌಡ ಇತರರು ಹಾಜರಿದ್ದರು.


ಇಂದು ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತನಾಯಕ ದರ್ಶನ್ ಪುಟ್ಟಣ್ಣಯ್ಯ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಸಮಾಲೋಚಿಸಿದ್ದಾರೆ. ಫೆ.24ರೊಳಗೆ ಸಭೆ ಕರೆದು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯವರ ಭರವಸೆಗೆ ಉಪವಾಸ ಸತ್ಯಾಗ್ರಹವನ್ನು ಕೈ ಬಿಡಲಾಗಿದೆ. ಆದರೆ, ಅಹೋರಾತ್ರಿ ಧರಣಿ ಮುಂದುವರೆಯಲಿದೆ.

-ಎಸ್.ಸಿ.ಮಧುಚಂದನ್, ರಾಜ್ಯ ಸಂಘಟನಾ ಕಾರ‍್ಯದರ್ಶಿ, ರೈತಸಂಘ, ಮಂಡ್ಯ

andolanait

Recent Posts

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

3 mins ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

28 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

31 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

45 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

51 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

4 hours ago