ಜಿಲ್ಲೆಗಳು

ಮಂಡ್ಯ : ಉಪವಾಸ ಸತ್ಯಾಗ್ರಹ ಕೈಬಿಟ್ಟ ರೈತರು

ಮಂಡ್ಯ: ಪ್ರತಿ ಟನ್ ಕಬ್ಬಿಗೆ 4500 ರೂ. ಹಾಗೂ ಪ್ರತಿ ಲೀರ್ ಹಾಲಿಗೆ 40 ರೂ ನಿಗದಿಪಡಿಸುವಂತೆ ಆಗ್ರಹಿಸಿ ಕಳೆದ ಫೆ.15ರಿಂದ ರೈತಸಂಘದ ಕಾರ‍್ಯಕರ್ತರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸೋಮವಾರ ಅಂತ್ಯಗೊಂಡಿದೆ.

ಕಬ್ಬು ಮತ್ತು ಹಾಲಿನ ದರ ನಿಗದಿಗೆ ಒತ್ತಾಯಿಸಿ ರೈತಸಂಘದ ಕಾರ‍್ಯಕರ್ತರು ನ.೭ರಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಹೋರಾಟವು ಫೆ.14ರಂದು ಶತದಿನ ಪೂರೈಸಿದರೂ ಸರಕಾರ ತಮ್ಮ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಫೆ.15ರಿಂದ ಐದು ಮಂದಿ ಕಾರ‍್ಯಕರ್ತರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು.
ಇವರಲ್ಲಿ ಇಬ್ಬರು ಶನಿವಾರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಸ್ವಲ್ಪ ಗುಣಮುಖರಾದ ಬಳಿಕ ಮತ್ತೆ ಧರಣಿ ಸ್ಥಳಕ್ಕೆ ಆಗಮಿಸಿ, ಸತ್ಯಾಗ್ರಹ ಮುಂದುವರೆಸಿದ್ದರು. ಆದರೆ, ಉಪವಾಸ ನಿರತ ಮಲ್ಲನಾಯಕನಕಟ್ಟೆ ವಿಜಯಕುಮಾರ್, ಭೂತನಹೊಸೂರು ಸಂತೋಷ್, ವಿನೋದ್‌ಬಾಬು, ಜಿ.ಮಲ್ಲಿಗೆರೆ ಅಣ್ಣಯ್ಯ, ಗೂಳೂರು ರಾಮಕೃಷ್ಣ ಅವರ ಆರೋಗ್ಯದಲ್ಲಿ ಸೋಮವಾರ ಸ್ವಲ್ಪ ಏರುಪೇರಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಡಿಎಚ್‌ಒ ಡಾ.ಟಿ.ಎನ್.ಧನಂಜಯ, ತಹಸಿಲ್ದಾರ್ ಕುಂ.ಞ. ಅಹಮ್ಮದ್ ಅವರು ಸೋಮವಾರ ಸಂಜೆ ಧರಣಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.
ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ದೇಹದಲ್ಲಿ ಪೊಟ್ಯಾಷಿಯಂ, ಸೋಡಿಯಂ ಪ್ರಮಾಣ ಕಡಿಮೆಯಾಗಿದೆ. ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ಅವರ ಆರೋಗ್ಯದ ದೃಷ್ಟಿಯಿಂದ ದಯವಿಟ್ಟು ಉಪವಾಸ ಕೈಬಿಡಿ. ಮುಖ್ಯಮಂತ್ರಿಯವರು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದ್ದಾರೆ. ನೀವು ಹೋರಾಟ ಮುಂದುವರೆಸಲು ಯಾವುದೇ ಅಡ್ಡಿಯಿಲ್ಲ ಎಂದು ಮನವಿ ಮಾಡಿದರು.
ಸುದೀರ್ಘ ಮಾತುಕತೆ ಬಳಿಕ ಪ್ರತಿಭಟನಾಕಾರರ ಮನವೊಲಿಸಿ, ಅವರಿಗೆ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ಸ್ವತಃ ತಂಪು ಪಾನೀಯ ಕುಡಿಸಿದರು. ಇದರೊಂದಿಗೆ ಉಪವಾಸ ಸತ್ಯಾಗ್ರಹ ಅಂತ್ಯಗೊಂಡಿತು. ಈ ಸಂದರ್ಭದಲ್ಲಿ ರೈತಸಂಘದ ರಾಜ್ಯ ಸಂಘಟನಾ ಕಾರ‍್ಯದರ್ಶಿ ಎಸ್.ಸಿ.ಮಧುಚಂದನ್, ಸರ್ವೋದಯ ಕರ್ನಾಟಕ ಪಕ್ಷದ ಪ್ರಧಾನ ಕಾರ‍್ಯದರ್ಶಿ ಪ್ರಸನ್ನ ಎನ್.ಗೌಡ ಇತರರು ಹಾಜರಿದ್ದರು.


ಇಂದು ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತನಾಯಕ ದರ್ಶನ್ ಪುಟ್ಟಣ್ಣಯ್ಯ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಸಮಾಲೋಚಿಸಿದ್ದಾರೆ. ಫೆ.24ರೊಳಗೆ ಸಭೆ ಕರೆದು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಯವರ ಭರವಸೆಗೆ ಉಪವಾಸ ಸತ್ಯಾಗ್ರಹವನ್ನು ಕೈ ಬಿಡಲಾಗಿದೆ. ಆದರೆ, ಅಹೋರಾತ್ರಿ ಧರಣಿ ಮುಂದುವರೆಯಲಿದೆ.

-ಎಸ್.ಸಿ.ಮಧುಚಂದನ್, ರಾಜ್ಯ ಸಂಘಟನಾ ಕಾರ‍್ಯದರ್ಶಿ, ರೈತಸಂಘ, ಮಂಡ್ಯ

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago