ಜಿಲ್ಲೆಗಳು

ಅವೈಜ್ಞಾನಿಕ ಅಂಡರ್‌ಪಾಸ್ ನಿರ್ಮಾಣ ವಿರೋಧಿಸಿ ರೈತರ ಪ್ರತಿಭಟನೆ : ಇಬ್ಬರ ಬಂಧನ

ಮಂಡ್ಯ : ಅವೈಜ್ಞಾನಿಕ ಅಂಡರ್‌ಪಾಸ್ ನಿರ್ಮಿಸಿರುವುದನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಪೊಲೀಸರು ಲಾಠಿ ಪ್ರಹಾರ ನಡೆಸಿ, ರೈತ ಮುಖಂಡರನ್ನು ಬಂಧಿಸಿರುವ ಘಟನೆ ತಾಲೂಕಿನ ಹನಕೆರೆ ಬಳಿ ನಡೆದಿದೆ.
ರಾಜ್ಯ ರೈತ ಸಂಘದ ಸಂಘಟನಾ ಕಾರ‌್ಯದರ್ಶಿ ಎಸ್.ಸಿ. ಮಧುಚಂದನ್ ಹಾಗೂ ರೈತ ಮುಖಂಡ ಪ್ರಸನ್ನ ಎನ್. ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ತಾಲೂಕಿನ ಹನಕೆರೆ ಬಳಿ ಅಂಡರ್‌ಪಾಸ್ ನಿರ್ಮಿಸದೆ ಸುಮಾರು 600 ಮೀಟರ್ ದೂರದಲ್ಲಿ ನಿರ್ಮಿಸಿರುವುದು ಅವೈಜ್ಞಾನಿಕವಾಗಿದ್ದು, ಹನಕೆರೆ ಬಳಿಯೇ ಅಂಡರ್‌ಪಾಸ್ ನಿರ್ಮಿಸಬೇಕೆಂದು ಒತ್ತಾಯಿಸಿ ರೈತ ಸಂಘದ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಬೆಳಗ್ಗೆ 7 ಗಂಟೆಯಿಂದಲೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರು.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಪೊಲೀಸರು ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸಿ ಮನವೊಲಿಸಲು ಯತ್ನಿಸಿದರು. ಆದರೆ ರೈತರು ಒಪ್ಪಲಿಲ್ಲ.
ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ರೈತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಸುದ್ಧಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ಯತೀಶ್ ಅವರು ರೈತ ಮುಖಂಡರೊಂದಿಗೆ ಚರ್ಚೆ ನಡೆಸಿ ಮನವೊಲಿಸಲು ಯತ್ನಿಸಿದರು.


ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಹ ಅಂಡರ್‌ಪಾಸ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕಾಗಿ 8 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರ ಪ್ರತಿಯನ್ನು ಸಹ ರೈತ ಮುಖಂಡರಿಗೆ ತೋರಿಸಿದರೆ, ಅದನ್ನು ಪಡೆದ ಮಧುಚಂದನ್ ಇತರರು ಪ್ರತಿಯನ್ನು ಹರಿದುಹಾಕಿದ್ದಲ್ಲದೆ, ಅಧಿಕಾರಿಗಳನ್ನು ಏಕವಚನದಲ್ಲಿ ನಿಂಧಿಸಿದರು.
ಇದರಿಂದ ಒಂದು ಹಂತದಲ್ಲಿ ತಾಳ್ಮೆ ಕಳೆದುಕೊಂಡ ಪೊಲೀಸ್ ಅಧಿಕಾರಿಗಳು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೇಳಿಕೊಂಡರಾದರೂ, ಇದಕ್ಕೆ ಪ್ರತಿಭಟನಾನಿರತ ರೈತರು ಒಪ್ಪಲಿಲ್ಲ. ಈ ವೇಳೆ ಕೆಲ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಿಂದ ಪೊಲೀಸ್ ಅಧಿಕಾರಿಗಳು ಗಾಯಗೊಂಡರು.
ತಕ್ಷಣ ಎಚ್ಚೆತ್ತ ಜಿಲ್ಲಾ ಪೊಲೀಸ್ ಅಧೀಕ್ಷ ಎನ್. ಯತೀಶ್ ಪ್ರತಿಭಟನಾನಿರತ ರೈತರನ್ನು ಎಚ್ಚರಿಸಿದರೂ. ಕೇಳದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಕಾರಣ ಲಾಠಿ ಪ್ರಹಾರಕ್ಕೆ ಆದೇಶಿಸಿದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾನಿರತರ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ರೈತರನ್ನು ಚದುರಿಸುವಲ್ಲಿ ಯಶಸ್ವಿಯಾದರು.
ರೈತ ಮುಖಂಡರಾದ ಎಸ್.ಸಿ. ಮಧುಚಂದನ್, ಪ್ರಸನ್ನ ಎನ್. ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಬಳಿಕ ಪರಿಸ್ಥಿತಿ ಶಾಂತವಾಗಿತ್ತು. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಲಾಗುತ್ತಿದೆ.
ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಬೊಮ್ಮೇಶ್, ಜಯರಾಂ, ಚಂದ್ರು, ಜಿ.ಎ. ಶಂಕರ್, ಲಿಂಗಪ್ಪಾಜಿ, ನಾಗರೇವಕ್ಕ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

17 mins ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

19 mins ago

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…

22 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಪೈರೆಸಿ ವಿರುದ್ಧ ಚಿತ್ರೋದ್ಯಮ ಯುದ್ಧ ಸನ್ನದ್ಧ!?

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…

24 mins ago

ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್…

30 mins ago

ಮೈಮುಲ್ ಆಡಳಿತ ಮಂಡಳಿ ಚುನಾವಣೆಯತ್ತ ಎಲ್ಲರ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…

35 mins ago