ಜಿಲ್ಲೆಗಳು

ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ರೈತರ ಒತ್ತಾಯ

ಗುಂಡ್ಲುಪೇಟೆ: ಅರಿಶಿಣಕ್ಕೆ ಮಾರುಕಟ್ಟೆ ಬೆಲೆ ಅಸ್ಥಿರವಾಗಿರುವುದರಿಂದ ಸರ್ಕಾರ ಮಧ್ಯ ಪ್ರವೇಶಿಸಿ ಅರಿಶಿಣವನ್ನು ಎಂಐಎಸ್-ಪಿಎಸ್‌ಎಸ್ ಯೋಜನೆ ಅಡಿಯಲ್ಲಿ ಬೆಂಬಲ ಬೆಲೆಯಲ್ಲಿ ಕೊಂಡು ಅರಿಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಸಲುವಾಗಿ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಂದ ಬಂದಿದ್ದ ಸುಮಾರು 300ಕ್ಕೂ ಹೆಚ್ಚು ಜನ ರೈತರು ಕೆಲವು ನಿರ್ಣಯಳನ್ನು ಕೈಗೊಂಡರು.
ಜಿಲ್ಲಾಧಿಕಾರಿಗಳ ಕಚೇರಿಗೆ ಬೆಳಗಾರರ ಸಮಸ್ಯೆಗಳನ್ನು ಹೊತ್ತು ಮೆರವಣಿಗೆ ಮೂಲಕ ಹೋಗಿ ಮನವಿ ಸಲ್ಲಿಸುವುದು, ಕೃಷಿ ಸಚಿವರ ಬಳಿಗೆ ನಿಯೋಗ ತೆರಳುವುದು. ಪ್ರಧಾನ ಮಂತ್ರಿಗಳನ್ನು ಗಮನ ಸೆಳೆಯಲು ಪತ್ರ ಚಳವಳಿ ಮಾಡುವುದು. ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆರವರ ಬಳಿಗೆ ನಿಯೋಗ ತೆರಳಲು ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ನಾಗಾರ್ಜುನ್ ಕುಮಾರ್, ಚೌಡಹಳ್ಳಿ ಪ್ರಗತಿಪರ ಕೃಷಿಕರು ರಾಜೇಂದ್ರ ಮಾತನಾಡಿದರು. ಅರಿಶಿನ ಬೆಳೆಗಾರರ ಒಕ್ಕೂಟದ ಪದಾಧಿಕಾರಿಗಳಾದ ನಾಗಾರ್ಜುನ ಕುವಾರ್, ಚಿದಾನಂದ ವೀರನಪುರ, ಶಶಿಕುವಾರ್ ದೊಡ್ಡಪ್ಪೂರು, ರಾಜೇಂದ್ರ, ಹುತ್ತೂರು ಸತೀಶ, ತೆರಕಣಾಂಬಿ ಚಂದ್ರು, ಚೌಡಳ್ಳಿ ಸದಾಶಿವ ಮೂರ್ತಿ, ವೀರನಪುರ ನಾಗರಾಜು, ಬೆಳವಾಡಿ ಪ್ರದೀಪ್, ಶಶಿಕುವಾರ್ ರೈತ ಸಂಘದ ಸಂಪತ್ ಕುಂದುಕೆರೆ ಹಾಗೂ ಇತರರು ಹಾಜರಿದ್ದರು.

andolanait

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

10 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

11 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

11 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

12 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

12 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

12 hours ago