ಜಿಲ್ಲೆಗಳು

ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಲು ರೈತರ ಒತ್ತಾಯ

ಗುಂಡ್ಲುಪೇಟೆ: ಅರಿಶಿಣಕ್ಕೆ ಮಾರುಕಟ್ಟೆ ಬೆಲೆ ಅಸ್ಥಿರವಾಗಿರುವುದರಿಂದ ಸರ್ಕಾರ ಮಧ್ಯ ಪ್ರವೇಶಿಸಿ ಅರಿಶಿಣವನ್ನು ಎಂಐಎಸ್-ಪಿಎಸ್‌ಎಸ್ ಯೋಜನೆ ಅಡಿಯಲ್ಲಿ ಬೆಂಬಲ ಬೆಲೆಯಲ್ಲಿ ಕೊಂಡು ಅರಿಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ರೈತರು ಒತ್ತಾಯಿಸಿದ್ದಾರೆ.

ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಸಲುವಾಗಿ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಂದ ಬಂದಿದ್ದ ಸುಮಾರು 300ಕ್ಕೂ ಹೆಚ್ಚು ಜನ ರೈತರು ಕೆಲವು ನಿರ್ಣಯಳನ್ನು ಕೈಗೊಂಡರು.
ಜಿಲ್ಲಾಧಿಕಾರಿಗಳ ಕಚೇರಿಗೆ ಬೆಳಗಾರರ ಸಮಸ್ಯೆಗಳನ್ನು ಹೊತ್ತು ಮೆರವಣಿಗೆ ಮೂಲಕ ಹೋಗಿ ಮನವಿ ಸಲ್ಲಿಸುವುದು, ಕೃಷಿ ಸಚಿವರ ಬಳಿಗೆ ನಿಯೋಗ ತೆರಳುವುದು. ಪ್ರಧಾನ ಮಂತ್ರಿಗಳನ್ನು ಗಮನ ಸೆಳೆಯಲು ಪತ್ರ ಚಳವಳಿ ಮಾಡುವುದು. ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆರವರ ಬಳಿಗೆ ನಿಯೋಗ ತೆರಳಲು ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ನಾಗಾರ್ಜುನ್ ಕುಮಾರ್, ಚೌಡಹಳ್ಳಿ ಪ್ರಗತಿಪರ ಕೃಷಿಕರು ರಾಜೇಂದ್ರ ಮಾತನಾಡಿದರು. ಅರಿಶಿನ ಬೆಳೆಗಾರರ ಒಕ್ಕೂಟದ ಪದಾಧಿಕಾರಿಗಳಾದ ನಾಗಾರ್ಜುನ ಕುವಾರ್, ಚಿದಾನಂದ ವೀರನಪುರ, ಶಶಿಕುವಾರ್ ದೊಡ್ಡಪ್ಪೂರು, ರಾಜೇಂದ್ರ, ಹುತ್ತೂರು ಸತೀಶ, ತೆರಕಣಾಂಬಿ ಚಂದ್ರು, ಚೌಡಳ್ಳಿ ಸದಾಶಿವ ಮೂರ್ತಿ, ವೀರನಪುರ ನಾಗರಾಜು, ಬೆಳವಾಡಿ ಪ್ರದೀಪ್, ಶಶಿಕುವಾರ್ ರೈತ ಸಂಘದ ಸಂಪತ್ ಕುಂದುಕೆರೆ ಹಾಗೂ ಇತರರು ಹಾಜರಿದ್ದರು.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

26 mins ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

30 mins ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

33 mins ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

37 mins ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

42 mins ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

46 mins ago