ಜಿಲ್ಲೆಗಳು

ಕ್ರೀಡೆಗೆ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ

ವಿರಾಜಪೇಟೆ: ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸದಿದ್ದಲ್ಲಿ ನ.೭ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕ್ರೀಡಾಪಟುಗಳ ಪರ ಮಾಜಿ ಅಂತರರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಎಚ್ಚರಿಕೆ ನೀಡಿದರು.

ಪಟ್ಟಣದ ತಹಸಿಲ್ದಾರ್ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಕಳೆದ ೨೦ ವರ್ಷಗಳಿಂದ ಇಲ್ಲಿ ಕ್ರೀಡೆಗೆ ಯಾವುದೇ ಸೌಕರ್ಯಗಳು ಇಲ್ಲ. ನಾವು ಹೊರ ರಾಜ್ಯದಲ್ಲಿ ಕ್ರೀಡೆಯ ತರಬೇತಿ ಪಡೆದೆವು. ಕೊಡಗು ಕ್ರೀಡಾ ಜಿಲ್ಲೆ ಎಂದು ಹೇಳಿಕೊಂಡರೂ ಇಲ್ಲಿ ಕ್ರೀಡೆಗೆ ಅಗತ್ಯ ಸೌಲಭ್ಯವಿಲ್ಲ. ಈ ನಡುವೆ ಇರುವ ತಾಲ್ಲೂಕು ಮೈದಾನವನ್ನು ಪಾರ್ಕಿಂಗ್‌ಗೆ ಒದಗಿಸದೆ ಆಟದ ಮೈದಾನವಾಗಿ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಮುಂದೆ ಪುರಸಭೆಯಲ್ಲಿ ನಡೆಯುವ ಸಭೆಯಲ್ಲಿ ಕ್ರೀಡಾ ಬಜೆಟ್ ಅಳವಡಿಸಿ ಕ್ರೀಡಾ ಚಟುವಟಿಕೆಗಳಿಗೆ ಸೂಕ್ತ ಧನಸಹಾಯ ನೀಡಬೇಕು. ವಿರಾಜಪೇಟೆುಂಲ್ಲಿ ಹಿರಿಯ ನಾಗರಿಕರು, ಮಕ್ಕಳು ಹಾಗೂ ಮಹಿಳೆಯರಿಗೆ ವಾಯುವಿಹಾರಕ್ಕೆ ಉದ್ಯಾನದ ಅಗತ್ಯವಿದ್ದು, ಇದರ ನಿರ್ಮಾಣಕ್ಕೆ ಜಾಗ ಗುರುತಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಟ್ಟಣದ ತೆಲುಗರ ಬೀದಿಯ ಮಾರಿಯಮ್ಮ ದೇವಾಲುಂದಿಂದ ಗಡಿಯಾರ ಕಂಬಕ್ಕಾಗಿ ಮಿನಿ ವಿಧಾನಸೌಧದವರೆಗೆ ಜಾಥಾ ನಡೆಸಲಾಯಿತು. ಏಜಾಸ್ ಅಹಮ್ಮದ್, ರಾಜೇಶ್, ಕೂತಂಡ ಗಣೇಶ್, ವಾಲಿಬಾಲ್ ಆಟಗಾರ ಅಂದಾಯಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

andolana

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

2 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

4 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

4 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

4 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

4 hours ago