ಜಿಲ್ಲೆಗಳು

ಕ್ರೀಡೆಗೆ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ

ವಿರಾಜಪೇಟೆ: ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸದಿದ್ದಲ್ಲಿ ನ.೭ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕ್ರೀಡಾಪಟುಗಳ ಪರ ಮಾಜಿ ಅಂತರರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಎಚ್ಚರಿಕೆ ನೀಡಿದರು.

ಪಟ್ಟಣದ ತಹಸಿಲ್ದಾರ್ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಕಳೆದ ೨೦ ವರ್ಷಗಳಿಂದ ಇಲ್ಲಿ ಕ್ರೀಡೆಗೆ ಯಾವುದೇ ಸೌಕರ್ಯಗಳು ಇಲ್ಲ. ನಾವು ಹೊರ ರಾಜ್ಯದಲ್ಲಿ ಕ್ರೀಡೆಯ ತರಬೇತಿ ಪಡೆದೆವು. ಕೊಡಗು ಕ್ರೀಡಾ ಜಿಲ್ಲೆ ಎಂದು ಹೇಳಿಕೊಂಡರೂ ಇಲ್ಲಿ ಕ್ರೀಡೆಗೆ ಅಗತ್ಯ ಸೌಲಭ್ಯವಿಲ್ಲ. ಈ ನಡುವೆ ಇರುವ ತಾಲ್ಲೂಕು ಮೈದಾನವನ್ನು ಪಾರ್ಕಿಂಗ್‌ಗೆ ಒದಗಿಸದೆ ಆಟದ ಮೈದಾನವಾಗಿ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಮುಂದೆ ಪುರಸಭೆಯಲ್ಲಿ ನಡೆಯುವ ಸಭೆಯಲ್ಲಿ ಕ್ರೀಡಾ ಬಜೆಟ್ ಅಳವಡಿಸಿ ಕ್ರೀಡಾ ಚಟುವಟಿಕೆಗಳಿಗೆ ಸೂಕ್ತ ಧನಸಹಾಯ ನೀಡಬೇಕು. ವಿರಾಜಪೇಟೆುಂಲ್ಲಿ ಹಿರಿಯ ನಾಗರಿಕರು, ಮಕ್ಕಳು ಹಾಗೂ ಮಹಿಳೆಯರಿಗೆ ವಾಯುವಿಹಾರಕ್ಕೆ ಉದ್ಯಾನದ ಅಗತ್ಯವಿದ್ದು, ಇದರ ನಿರ್ಮಾಣಕ್ಕೆ ಜಾಗ ಗುರುತಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಟ್ಟಣದ ತೆಲುಗರ ಬೀದಿಯ ಮಾರಿಯಮ್ಮ ದೇವಾಲುಂದಿಂದ ಗಡಿಯಾರ ಕಂಬಕ್ಕಾಗಿ ಮಿನಿ ವಿಧಾನಸೌಧದವರೆಗೆ ಜಾಥಾ ನಡೆಸಲಾಯಿತು. ಏಜಾಸ್ ಅಹಮ್ಮದ್, ರಾಜೇಶ್, ಕೂತಂಡ ಗಣೇಶ್, ವಾಲಿಬಾಲ್ ಆಟಗಾರ ಅಂದಾಯಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

andolana

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

8 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

8 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

8 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

9 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

9 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

9 hours ago