ಜಿಲ್ಲೆಗಳು

ಕ್ರೀಡೆಗೆ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ

ವಿರಾಜಪೇಟೆ: ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸದಿದ್ದಲ್ಲಿ ನ.೭ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕ್ರೀಡಾಪಟುಗಳ ಪರ ಮಾಜಿ ಅಂತರರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಎಚ್ಚರಿಕೆ ನೀಡಿದರು.

ಪಟ್ಟಣದ ತಹಸಿಲ್ದಾರ್ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ಕಳೆದ ೨೦ ವರ್ಷಗಳಿಂದ ಇಲ್ಲಿ ಕ್ರೀಡೆಗೆ ಯಾವುದೇ ಸೌಕರ್ಯಗಳು ಇಲ್ಲ. ನಾವು ಹೊರ ರಾಜ್ಯದಲ್ಲಿ ಕ್ರೀಡೆಯ ತರಬೇತಿ ಪಡೆದೆವು. ಕೊಡಗು ಕ್ರೀಡಾ ಜಿಲ್ಲೆ ಎಂದು ಹೇಳಿಕೊಂಡರೂ ಇಲ್ಲಿ ಕ್ರೀಡೆಗೆ ಅಗತ್ಯ ಸೌಲಭ್ಯವಿಲ್ಲ. ಈ ನಡುವೆ ಇರುವ ತಾಲ್ಲೂಕು ಮೈದಾನವನ್ನು ಪಾರ್ಕಿಂಗ್‌ಗೆ ಒದಗಿಸದೆ ಆಟದ ಮೈದಾನವಾಗಿ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಮುಂದೆ ಪುರಸಭೆಯಲ್ಲಿ ನಡೆಯುವ ಸಭೆಯಲ್ಲಿ ಕ್ರೀಡಾ ಬಜೆಟ್ ಅಳವಡಿಸಿ ಕ್ರೀಡಾ ಚಟುವಟಿಕೆಗಳಿಗೆ ಸೂಕ್ತ ಧನಸಹಾಯ ನೀಡಬೇಕು. ವಿರಾಜಪೇಟೆುಂಲ್ಲಿ ಹಿರಿಯ ನಾಗರಿಕರು, ಮಕ್ಕಳು ಹಾಗೂ ಮಹಿಳೆಯರಿಗೆ ವಾಯುವಿಹಾರಕ್ಕೆ ಉದ್ಯಾನದ ಅಗತ್ಯವಿದ್ದು, ಇದರ ನಿರ್ಮಾಣಕ್ಕೆ ಜಾಗ ಗುರುತಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಟ್ಟಣದ ತೆಲುಗರ ಬೀದಿಯ ಮಾರಿಯಮ್ಮ ದೇವಾಲುಂದಿಂದ ಗಡಿಯಾರ ಕಂಬಕ್ಕಾಗಿ ಮಿನಿ ವಿಧಾನಸೌಧದವರೆಗೆ ಜಾಥಾ ನಡೆಸಲಾಯಿತು. ಏಜಾಸ್ ಅಹಮ್ಮದ್, ರಾಜೇಶ್, ಕೂತಂಡ ಗಣೇಶ್, ವಾಲಿಬಾಲ್ ಆಟಗಾರ ಅಂದಾಯಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago