ಜಿಲ್ಲೆಗಳು

ಕಬಿನಿ ಡ್ಯಾಂಗೂ ಬಂತು ಚಿರತೆ: 3 ಬೋನ್ ಅಳವಡಿಸಿ ಕಾರ್ಯಾಚರಣೆ

ಚಿರತೆ ಸೆರೆಗೆ 3 ಬೋನ್ ಅಳವಡಿಸಿ ಕಾರ್ಯಾಚರಣೆ

ಮಂಜು ಕೋಟೆ

ಎಚ್.ಡಿ.ಕೋಟೆ: ತಾಲ್ಲೂಕಿನ ಪ್ರವಾಸಿಗರ ತಾಣವಾಗಿರುವ ಕಬಿನಿ ಜಲಾಶಯದಲ್ಲಿ ವಾರದಲ್ಲಿ ನಾಲ್ಕು ಬಾರಿ ಚಿರತೆ ಪ್ರತ್ಯಕ್ಷದಿಂದ ಪ್ರವಾಸಿಗರು ಮತ್ತು ನಿವಾಸಿಗಳು ಆತಂಕದಲ್ಲಿದ್ದಾರೆ.
ಕಬಿನಿ ಜಲಾಶಯದ ಪ್ರಮುಖ 4 ಕ್ರಸ್ಟ್ ಗೇಟ್‌ಗಳ ಸಮೀಪದಲ್ಲಿ ಬುಧವಾರ ರಾತ್ರಿ ಭಾರೀ ಗಾತ್ರದ ಚಿರತೆ ಜಲಾಶುಂದ ಮುಂಭಾಗದಿಂದ ನಡೆದುಕೊಂಡು ಹೋಗಿ ಗೇಟ್ ಸಮೀಪದ ಜಾಲರಿಯಿಂದ ನೀರಿನ ಮಧ್ಯದಲ್ಲಿ ರಾಜಾರೋಷವಾಗಿ ಹೋಗಿದೆ. ಈ ದೃಶ್ಯಾವಳಿಯನ್ನು ಸಮೀಪದ ಪವರ್ ವಿದ್ಯುತ್ ಘಟಕದಲ್ಲಿರುವ ಸಿಸಿ ಕ್ಯಾಮೆರಾದ ಮೂಲಕ ಸೆರೆಹಿಡಿಲಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಜಲಾಶಯದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ನಡುಕು ಉಂಟಾಗಿದೆ. ಜಲಾಶಯಕ್ಕೆ ಪ್ರತಿನಿತ್ಯ ನೂರಾರು ಪ್ರವಾಸಿಗರು ಬರುತ್ತಿರುವುದರಿಂದ ಮುಂಭಾಗದ ಬೃಂದಾವನದ ಖಾಲಿ ಜಾಗದಲ್ಲಿ ಪೊದೆಗಳು ಬೆಳೆದು ನಿಂತಿದ್ದು, ಇಲ್ಲಿಂದ ಚಿರತೆ ದಾಳಿ ನಡೆಸಿದರೆ ಪರಿಸ್ಥಿತಿ ಏನಾಬಹುದು ಎಂದು ಜನರು ಆತಂಕದಲ್ಲಿದ್ದಾರೆ.


ವಾರಕ್ಕೆ ಮೂರರಿಂದ ನಾಲ್ಕು ಬಾರಿ ರಾತ್ರಿ 8 ಗಂಟೆಯಿಂದ 9 ಗಂಟೆ ಒಳಗೆ ಜಲಾಶಯದ ಮುಂಭಾಗದಲ್ಲಿ ಭಾರಿ ಗಾತ್ರದ ಚಿರತೆ ತನ್ನ ಆರ್ಭಟವನ್ನು ತೋರಿಸುತ್ತಿದೆ. ಇದರ ಸಮಗ್ರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿ ಕೆಲಸ ನಿರ್ವಹಿಸುವವರೆಗೂ ಆತಂಕ ಎದುರಾಗಿದೆ. ಆದ್ದರಿಂದ ಚಿರತೆಯನ್ನು ಬಂಧಿಸುವಂತೆ ಅರಣ್ಯ ಇಲಾಖೆಯವರಿಗೆ ಮನವಿ ಮಾಡಲಾಗಿದೆ.

-ಸಂದೀಪ್ ಕುಮಾರ್, ಸೀನಿಯರ್ ಮ್ಯಾನೇಜರ್‌ , ಸುಭಾಷ್ ವಿದ್ಯುತ್ ಘಟಕ


ಜಲಾಶಯ ಮುಂಭಾಗದಲ್ಲಿ ಚಿರತೆ ಪ್ರತ್ಯಕ್ಷದ ಬಗ್ಗೆ ನೀರಾವರಿ ಇಲಾಖೆಯವರು ಮತ್ತು ವಿದ್ಯುತ್ ಘಟಕದವರು ವಿಚಾರ ತಿಳಿಸಿದ್ದಾರೆ. ಚಿರತೆಯನ್ನು ಸೆರೆ ಹಿಡಿಯಲು ಮೂರು ಬೋನ್‌ಗಳನ್ನು ಇಡಲಾಗಿದೆ. ಕಾರ್ಯಾಚರಣೆ ನಡೆಸಲಾಗುವುದು. ಯಾರೂ ಆತಂಕ ಪಡಬಾರದು.
-ಪ್ರಸನ್ನ ಕುಮಾರ್, ಅರಣ್ಯ ಅಧಿಕಾರಿ

 

andolanait

Recent Posts

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

3 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

4 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

4 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

4 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

4 hours ago

ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ: ನಟ ರವಿಚಂದ್ರನ್‌ ವಿಶ್ವಾಸ

ಬೆಂಗಳೂರು: ನಿಮಗೆಲ್ಲಾ ಡಿಬಾಸ್‌, ಆ ಡಿಬಾಸ್‌ ನನಗೆ ಮಗ ನೆನಪಿಟ್ಟುಕೊಳ್ಳಿ. ಇನ್ನೆರಡು ತಿಂಗಳಲ್ಲಿ ದರ್ಶನ್‌ ಹೊರಬರುತ್ತಾರೆ ಎಂದು ನಟ ರವಿಚಂದ್ರನ್‌…

4 hours ago