ಜಿಲ್ಲೆಗಳು

ಕಬಿನಿ ಡ್ಯಾಂಗೂ ಬಂತು ಚಿರತೆ: 3 ಬೋನ್ ಅಳವಡಿಸಿ ಕಾರ್ಯಾಚರಣೆ

ಚಿರತೆ ಸೆರೆಗೆ 3 ಬೋನ್ ಅಳವಡಿಸಿ ಕಾರ್ಯಾಚರಣೆ

ಮಂಜು ಕೋಟೆ

ಎಚ್.ಡಿ.ಕೋಟೆ: ತಾಲ್ಲೂಕಿನ ಪ್ರವಾಸಿಗರ ತಾಣವಾಗಿರುವ ಕಬಿನಿ ಜಲಾಶಯದಲ್ಲಿ ವಾರದಲ್ಲಿ ನಾಲ್ಕು ಬಾರಿ ಚಿರತೆ ಪ್ರತ್ಯಕ್ಷದಿಂದ ಪ್ರವಾಸಿಗರು ಮತ್ತು ನಿವಾಸಿಗಳು ಆತಂಕದಲ್ಲಿದ್ದಾರೆ.
ಕಬಿನಿ ಜಲಾಶಯದ ಪ್ರಮುಖ 4 ಕ್ರಸ್ಟ್ ಗೇಟ್‌ಗಳ ಸಮೀಪದಲ್ಲಿ ಬುಧವಾರ ರಾತ್ರಿ ಭಾರೀ ಗಾತ್ರದ ಚಿರತೆ ಜಲಾಶುಂದ ಮುಂಭಾಗದಿಂದ ನಡೆದುಕೊಂಡು ಹೋಗಿ ಗೇಟ್ ಸಮೀಪದ ಜಾಲರಿಯಿಂದ ನೀರಿನ ಮಧ್ಯದಲ್ಲಿ ರಾಜಾರೋಷವಾಗಿ ಹೋಗಿದೆ. ಈ ದೃಶ್ಯಾವಳಿಯನ್ನು ಸಮೀಪದ ಪವರ್ ವಿದ್ಯುತ್ ಘಟಕದಲ್ಲಿರುವ ಸಿಸಿ ಕ್ಯಾಮೆರಾದ ಮೂಲಕ ಸೆರೆಹಿಡಿಲಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಜಲಾಶಯದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ನಡುಕು ಉಂಟಾಗಿದೆ. ಜಲಾಶಯಕ್ಕೆ ಪ್ರತಿನಿತ್ಯ ನೂರಾರು ಪ್ರವಾಸಿಗರು ಬರುತ್ತಿರುವುದರಿಂದ ಮುಂಭಾಗದ ಬೃಂದಾವನದ ಖಾಲಿ ಜಾಗದಲ್ಲಿ ಪೊದೆಗಳು ಬೆಳೆದು ನಿಂತಿದ್ದು, ಇಲ್ಲಿಂದ ಚಿರತೆ ದಾಳಿ ನಡೆಸಿದರೆ ಪರಿಸ್ಥಿತಿ ಏನಾಬಹುದು ಎಂದು ಜನರು ಆತಂಕದಲ್ಲಿದ್ದಾರೆ.


ವಾರಕ್ಕೆ ಮೂರರಿಂದ ನಾಲ್ಕು ಬಾರಿ ರಾತ್ರಿ 8 ಗಂಟೆಯಿಂದ 9 ಗಂಟೆ ಒಳಗೆ ಜಲಾಶಯದ ಮುಂಭಾಗದಲ್ಲಿ ಭಾರಿ ಗಾತ್ರದ ಚಿರತೆ ತನ್ನ ಆರ್ಭಟವನ್ನು ತೋರಿಸುತ್ತಿದೆ. ಇದರ ಸಮಗ್ರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿ ಕೆಲಸ ನಿರ್ವಹಿಸುವವರೆಗೂ ಆತಂಕ ಎದುರಾಗಿದೆ. ಆದ್ದರಿಂದ ಚಿರತೆಯನ್ನು ಬಂಧಿಸುವಂತೆ ಅರಣ್ಯ ಇಲಾಖೆಯವರಿಗೆ ಮನವಿ ಮಾಡಲಾಗಿದೆ.

-ಸಂದೀಪ್ ಕುಮಾರ್, ಸೀನಿಯರ್ ಮ್ಯಾನೇಜರ್‌ , ಸುಭಾಷ್ ವಿದ್ಯುತ್ ಘಟಕ


ಜಲಾಶಯ ಮುಂಭಾಗದಲ್ಲಿ ಚಿರತೆ ಪ್ರತ್ಯಕ್ಷದ ಬಗ್ಗೆ ನೀರಾವರಿ ಇಲಾಖೆಯವರು ಮತ್ತು ವಿದ್ಯುತ್ ಘಟಕದವರು ವಿಚಾರ ತಿಳಿಸಿದ್ದಾರೆ. ಚಿರತೆಯನ್ನು ಸೆರೆ ಹಿಡಿಯಲು ಮೂರು ಬೋನ್‌ಗಳನ್ನು ಇಡಲಾಗಿದೆ. ಕಾರ್ಯಾಚರಣೆ ನಡೆಸಲಾಗುವುದು. ಯಾರೂ ಆತಂಕ ಪಡಬಾರದು.
-ಪ್ರಸನ್ನ ಕುಮಾರ್, ಅರಣ್ಯ ಅಧಿಕಾರಿ

 

andolanait

Recent Posts

ಬಂಡೀಪುರದಲ್ಲಿ ಹೊಸ ವರ್ಷಾಚರಣೆಗೆ ಕಡಿವಾಣ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…

42 mins ago

ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ಮುಗಿಲುಮುಟ್ಟಿದ ಗೋವಿಂದ ನಾಮಸ್ಮರಣೆ

ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…

1 hour ago

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

4 hours ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

4 hours ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

4 hours ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

4 hours ago