ಜಿಲ್ಲೆಗಳು

ಕಬಿನಿ ಡ್ಯಾಂಗೂ ಬಂತು ಚಿರತೆ: 3 ಬೋನ್ ಅಳವಡಿಸಿ ಕಾರ್ಯಾಚರಣೆ

ಚಿರತೆ ಸೆರೆಗೆ 3 ಬೋನ್ ಅಳವಡಿಸಿ ಕಾರ್ಯಾಚರಣೆ

ಮಂಜು ಕೋಟೆ

ಎಚ್.ಡಿ.ಕೋಟೆ: ತಾಲ್ಲೂಕಿನ ಪ್ರವಾಸಿಗರ ತಾಣವಾಗಿರುವ ಕಬಿನಿ ಜಲಾಶಯದಲ್ಲಿ ವಾರದಲ್ಲಿ ನಾಲ್ಕು ಬಾರಿ ಚಿರತೆ ಪ್ರತ್ಯಕ್ಷದಿಂದ ಪ್ರವಾಸಿಗರು ಮತ್ತು ನಿವಾಸಿಗಳು ಆತಂಕದಲ್ಲಿದ್ದಾರೆ.
ಕಬಿನಿ ಜಲಾಶಯದ ಪ್ರಮುಖ 4 ಕ್ರಸ್ಟ್ ಗೇಟ್‌ಗಳ ಸಮೀಪದಲ್ಲಿ ಬುಧವಾರ ರಾತ್ರಿ ಭಾರೀ ಗಾತ್ರದ ಚಿರತೆ ಜಲಾಶುಂದ ಮುಂಭಾಗದಿಂದ ನಡೆದುಕೊಂಡು ಹೋಗಿ ಗೇಟ್ ಸಮೀಪದ ಜಾಲರಿಯಿಂದ ನೀರಿನ ಮಧ್ಯದಲ್ಲಿ ರಾಜಾರೋಷವಾಗಿ ಹೋಗಿದೆ. ಈ ದೃಶ್ಯಾವಳಿಯನ್ನು ಸಮೀಪದ ಪವರ್ ವಿದ್ಯುತ್ ಘಟಕದಲ್ಲಿರುವ ಸಿಸಿ ಕ್ಯಾಮೆರಾದ ಮೂಲಕ ಸೆರೆಹಿಡಿಲಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಜಲಾಶಯದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ನಡುಕು ಉಂಟಾಗಿದೆ. ಜಲಾಶಯಕ್ಕೆ ಪ್ರತಿನಿತ್ಯ ನೂರಾರು ಪ್ರವಾಸಿಗರು ಬರುತ್ತಿರುವುದರಿಂದ ಮುಂಭಾಗದ ಬೃಂದಾವನದ ಖಾಲಿ ಜಾಗದಲ್ಲಿ ಪೊದೆಗಳು ಬೆಳೆದು ನಿಂತಿದ್ದು, ಇಲ್ಲಿಂದ ಚಿರತೆ ದಾಳಿ ನಡೆಸಿದರೆ ಪರಿಸ್ಥಿತಿ ಏನಾಬಹುದು ಎಂದು ಜನರು ಆತಂಕದಲ್ಲಿದ್ದಾರೆ.


ವಾರಕ್ಕೆ ಮೂರರಿಂದ ನಾಲ್ಕು ಬಾರಿ ರಾತ್ರಿ 8 ಗಂಟೆಯಿಂದ 9 ಗಂಟೆ ಒಳಗೆ ಜಲಾಶಯದ ಮುಂಭಾಗದಲ್ಲಿ ಭಾರಿ ಗಾತ್ರದ ಚಿರತೆ ತನ್ನ ಆರ್ಭಟವನ್ನು ತೋರಿಸುತ್ತಿದೆ. ಇದರ ಸಮಗ್ರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿ ಕೆಲಸ ನಿರ್ವಹಿಸುವವರೆಗೂ ಆತಂಕ ಎದುರಾಗಿದೆ. ಆದ್ದರಿಂದ ಚಿರತೆಯನ್ನು ಬಂಧಿಸುವಂತೆ ಅರಣ್ಯ ಇಲಾಖೆಯವರಿಗೆ ಮನವಿ ಮಾಡಲಾಗಿದೆ.

-ಸಂದೀಪ್ ಕುಮಾರ್, ಸೀನಿಯರ್ ಮ್ಯಾನೇಜರ್‌ , ಸುಭಾಷ್ ವಿದ್ಯುತ್ ಘಟಕ


ಜಲಾಶಯ ಮುಂಭಾಗದಲ್ಲಿ ಚಿರತೆ ಪ್ರತ್ಯಕ್ಷದ ಬಗ್ಗೆ ನೀರಾವರಿ ಇಲಾಖೆಯವರು ಮತ್ತು ವಿದ್ಯುತ್ ಘಟಕದವರು ವಿಚಾರ ತಿಳಿಸಿದ್ದಾರೆ. ಚಿರತೆಯನ್ನು ಸೆರೆ ಹಿಡಿಯಲು ಮೂರು ಬೋನ್‌ಗಳನ್ನು ಇಡಲಾಗಿದೆ. ಕಾರ್ಯಾಚರಣೆ ನಡೆಸಲಾಗುವುದು. ಯಾರೂ ಆತಂಕ ಪಡಬಾರದು.
-ಪ್ರಸನ್ನ ಕುಮಾರ್, ಅರಣ್ಯ ಅಧಿಕಾರಿ

 

andolanait

Recent Posts

ಸಿರಿ ಧಾನ್ಯಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವುದು ಆದ್ಯ ಕರ್ತವ್ಯ: ಕೆ.ಆರ್.‌ನಂದಿನಿ

ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ…

53 seconds ago

ಹೊಸ ವರ್ಷಾಚರಣೆಗೆ ಕೊಡಗಿನಲ್ಲೂ ಕಟ್ಟೆಚ್ಚರ

ಕೊಡಗು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಇನ ಡೋರ್‌ನಲ್ಲಿ ಮಾತ್ರ ಹೆಚ್ಚಿನ ಸೌಂಡ್‌ ಬಳಸಲು ಅವಕಾಶವಿದೆ.…

14 mins ago

ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು: ಸೀಮಂತ್‌ ಕುಮಾರ್‌ ಹೇಳಿದ್ದಿಷ್ಟು.!

ಬೆಂಗಳೂರು: ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತ ಸೀಮಂತ್‌…

31 mins ago

ಕೋಗಿಲು ಲೇಔಟ್‌ ಒತ್ತುವರಿ ತೆರವು: ಸತ್ಯಶೋಧನಾ ತಂಡ ರಚಿಸಿ ವಿಜಯೇಂದ್ರ ಆದೇಶ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…

40 mins ago

ನನ್ನ ವಿರುದ್ಧ 17 ಕೇಸ್‌ ಇದೆ, ಇನ್ನೂ ಹಾಕೋಕೆ ಹೇಳಿ ಆದ್ರೆ ದಾರಿ ತಪ್ಪಿಸಬೇಡಿ: ಪ್ರತಾಪ್‌ ಸಿಂಹ

ಬೆಂಗಳೂರು: ನನ್ನ ವಿರುದ್ಧ 17 ಕೇಸ್‌ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…

49 mins ago

ಕುಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್‌ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್‌…

1 hour ago