ಚಿರತೆ ಸೆರೆಗೆ 3 ಬೋನ್ ಅಳವಡಿಸಿ ಕಾರ್ಯಾಚರಣೆ
ಮಂಜು ಕೋಟೆ
ಎಚ್.ಡಿ.ಕೋಟೆ: ತಾಲ್ಲೂಕಿನ ಪ್ರವಾಸಿಗರ ತಾಣವಾಗಿರುವ ಕಬಿನಿ ಜಲಾಶಯದಲ್ಲಿ ವಾರದಲ್ಲಿ ನಾಲ್ಕು ಬಾರಿ ಚಿರತೆ ಪ್ರತ್ಯಕ್ಷದಿಂದ ಪ್ರವಾಸಿಗರು ಮತ್ತು ನಿವಾಸಿಗಳು ಆತಂಕದಲ್ಲಿದ್ದಾರೆ.
ಕಬಿನಿ ಜಲಾಶಯದ ಪ್ರಮುಖ 4 ಕ್ರಸ್ಟ್ ಗೇಟ್ಗಳ ಸಮೀಪದಲ್ಲಿ ಬುಧವಾರ ರಾತ್ರಿ ಭಾರೀ ಗಾತ್ರದ ಚಿರತೆ ಜಲಾಶುಂದ ಮುಂಭಾಗದಿಂದ ನಡೆದುಕೊಂಡು ಹೋಗಿ ಗೇಟ್ ಸಮೀಪದ ಜಾಲರಿಯಿಂದ ನೀರಿನ ಮಧ್ಯದಲ್ಲಿ ರಾಜಾರೋಷವಾಗಿ ಹೋಗಿದೆ. ಈ ದೃಶ್ಯಾವಳಿಯನ್ನು ಸಮೀಪದ ಪವರ್ ವಿದ್ಯುತ್ ಘಟಕದಲ್ಲಿರುವ ಸಿಸಿ ಕ್ಯಾಮೆರಾದ ಮೂಲಕ ಸೆರೆಹಿಡಿಲಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಜಲಾಶಯದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ನಡುಕು ಉಂಟಾಗಿದೆ. ಜಲಾಶಯಕ್ಕೆ ಪ್ರತಿನಿತ್ಯ ನೂರಾರು ಪ್ರವಾಸಿಗರು ಬರುತ್ತಿರುವುದರಿಂದ ಮುಂಭಾಗದ ಬೃಂದಾವನದ ಖಾಲಿ ಜಾಗದಲ್ಲಿ ಪೊದೆಗಳು ಬೆಳೆದು ನಿಂತಿದ್ದು, ಇಲ್ಲಿಂದ ಚಿರತೆ ದಾಳಿ ನಡೆಸಿದರೆ ಪರಿಸ್ಥಿತಿ ಏನಾಬಹುದು ಎಂದು ಜನರು ಆತಂಕದಲ್ಲಿದ್ದಾರೆ.
ವಾರಕ್ಕೆ ಮೂರರಿಂದ ನಾಲ್ಕು ಬಾರಿ ರಾತ್ರಿ 8 ಗಂಟೆಯಿಂದ 9 ಗಂಟೆ ಒಳಗೆ ಜಲಾಶಯದ ಮುಂಭಾಗದಲ್ಲಿ ಭಾರಿ ಗಾತ್ರದ ಚಿರತೆ ತನ್ನ ಆರ್ಭಟವನ್ನು ತೋರಿಸುತ್ತಿದೆ. ಇದರ ಸಮಗ್ರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿ ಕೆಲಸ ನಿರ್ವಹಿಸುವವರೆಗೂ ಆತಂಕ ಎದುರಾಗಿದೆ. ಆದ್ದರಿಂದ ಚಿರತೆಯನ್ನು ಬಂಧಿಸುವಂತೆ ಅರಣ್ಯ ಇಲಾಖೆಯವರಿಗೆ ಮನವಿ ಮಾಡಲಾಗಿದೆ.
-ಸಂದೀಪ್ ಕುಮಾರ್, ಸೀನಿಯರ್ ಮ್ಯಾನೇಜರ್ , ಸುಭಾಷ್ ವಿದ್ಯುತ್ ಘಟಕ
ಜಲಾಶಯ ಮುಂಭಾಗದಲ್ಲಿ ಚಿರತೆ ಪ್ರತ್ಯಕ್ಷದ ಬಗ್ಗೆ ನೀರಾವರಿ ಇಲಾಖೆಯವರು ಮತ್ತು ವಿದ್ಯುತ್ ಘಟಕದವರು ವಿಚಾರ ತಿಳಿಸಿದ್ದಾರೆ. ಚಿರತೆಯನ್ನು ಸೆರೆ ಹಿಡಿಯಲು ಮೂರು ಬೋನ್ಗಳನ್ನು ಇಡಲಾಗಿದೆ. ಕಾರ್ಯಾಚರಣೆ ನಡೆಸಲಾಗುವುದು. ಯಾರೂ ಆತಂಕ ಪಡಬಾರದು.
-ಪ್ರಸನ್ನ ಕುಮಾರ್, ಅರಣ್ಯ ಅಧಿಕಾರಿ
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…