ಜಿಲ್ಲೆಗಳು

ಕಬಿನಿ ಡ್ಯಾಂಗೂ ಬಂತು ಚಿರತೆ: 3 ಬೋನ್ ಅಳವಡಿಸಿ ಕಾರ್ಯಾಚರಣೆ

ಚಿರತೆ ಸೆರೆಗೆ 3 ಬೋನ್ ಅಳವಡಿಸಿ ಕಾರ್ಯಾಚರಣೆ

ಮಂಜು ಕೋಟೆ

ಎಚ್.ಡಿ.ಕೋಟೆ: ತಾಲ್ಲೂಕಿನ ಪ್ರವಾಸಿಗರ ತಾಣವಾಗಿರುವ ಕಬಿನಿ ಜಲಾಶಯದಲ್ಲಿ ವಾರದಲ್ಲಿ ನಾಲ್ಕು ಬಾರಿ ಚಿರತೆ ಪ್ರತ್ಯಕ್ಷದಿಂದ ಪ್ರವಾಸಿಗರು ಮತ್ತು ನಿವಾಸಿಗಳು ಆತಂಕದಲ್ಲಿದ್ದಾರೆ.
ಕಬಿನಿ ಜಲಾಶಯದ ಪ್ರಮುಖ 4 ಕ್ರಸ್ಟ್ ಗೇಟ್‌ಗಳ ಸಮೀಪದಲ್ಲಿ ಬುಧವಾರ ರಾತ್ರಿ ಭಾರೀ ಗಾತ್ರದ ಚಿರತೆ ಜಲಾಶುಂದ ಮುಂಭಾಗದಿಂದ ನಡೆದುಕೊಂಡು ಹೋಗಿ ಗೇಟ್ ಸಮೀಪದ ಜಾಲರಿಯಿಂದ ನೀರಿನ ಮಧ್ಯದಲ್ಲಿ ರಾಜಾರೋಷವಾಗಿ ಹೋಗಿದೆ. ಈ ದೃಶ್ಯಾವಳಿಯನ್ನು ಸಮೀಪದ ಪವರ್ ವಿದ್ಯುತ್ ಘಟಕದಲ್ಲಿರುವ ಸಿಸಿ ಕ್ಯಾಮೆರಾದ ಮೂಲಕ ಸೆರೆಹಿಡಿಲಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಜಲಾಶಯದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ನಡುಕು ಉಂಟಾಗಿದೆ. ಜಲಾಶಯಕ್ಕೆ ಪ್ರತಿನಿತ್ಯ ನೂರಾರು ಪ್ರವಾಸಿಗರು ಬರುತ್ತಿರುವುದರಿಂದ ಮುಂಭಾಗದ ಬೃಂದಾವನದ ಖಾಲಿ ಜಾಗದಲ್ಲಿ ಪೊದೆಗಳು ಬೆಳೆದು ನಿಂತಿದ್ದು, ಇಲ್ಲಿಂದ ಚಿರತೆ ದಾಳಿ ನಡೆಸಿದರೆ ಪರಿಸ್ಥಿತಿ ಏನಾಬಹುದು ಎಂದು ಜನರು ಆತಂಕದಲ್ಲಿದ್ದಾರೆ.


ವಾರಕ್ಕೆ ಮೂರರಿಂದ ನಾಲ್ಕು ಬಾರಿ ರಾತ್ರಿ 8 ಗಂಟೆಯಿಂದ 9 ಗಂಟೆ ಒಳಗೆ ಜಲಾಶಯದ ಮುಂಭಾಗದಲ್ಲಿ ಭಾರಿ ಗಾತ್ರದ ಚಿರತೆ ತನ್ನ ಆರ್ಭಟವನ್ನು ತೋರಿಸುತ್ತಿದೆ. ಇದರ ಸಮಗ್ರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿ ಕೆಲಸ ನಿರ್ವಹಿಸುವವರೆಗೂ ಆತಂಕ ಎದುರಾಗಿದೆ. ಆದ್ದರಿಂದ ಚಿರತೆಯನ್ನು ಬಂಧಿಸುವಂತೆ ಅರಣ್ಯ ಇಲಾಖೆಯವರಿಗೆ ಮನವಿ ಮಾಡಲಾಗಿದೆ.

-ಸಂದೀಪ್ ಕುಮಾರ್, ಸೀನಿಯರ್ ಮ್ಯಾನೇಜರ್‌ , ಸುಭಾಷ್ ವಿದ್ಯುತ್ ಘಟಕ


ಜಲಾಶಯ ಮುಂಭಾಗದಲ್ಲಿ ಚಿರತೆ ಪ್ರತ್ಯಕ್ಷದ ಬಗ್ಗೆ ನೀರಾವರಿ ಇಲಾಖೆಯವರು ಮತ್ತು ವಿದ್ಯುತ್ ಘಟಕದವರು ವಿಚಾರ ತಿಳಿಸಿದ್ದಾರೆ. ಚಿರತೆಯನ್ನು ಸೆರೆ ಹಿಡಿಯಲು ಮೂರು ಬೋನ್‌ಗಳನ್ನು ಇಡಲಾಗಿದೆ. ಕಾರ್ಯಾಚರಣೆ ನಡೆಸಲಾಗುವುದು. ಯಾರೂ ಆತಂಕ ಪಡಬಾರದು.
-ಪ್ರಸನ್ನ ಕುಮಾರ್, ಅರಣ್ಯ ಅಧಿಕಾರಿ

 

andolanait

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

49 mins ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

57 mins ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

2 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

3 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

4 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

4 hours ago