ಜಿಲ್ಲೆಗಳು

ಕಬಿನಿ ಡ್ಯಾಂಗೂ ಬಂತು ಚಿರತೆ: 3 ಬೋನ್ ಅಳವಡಿಸಿ ಕಾರ್ಯಾಚರಣೆ

ಚಿರತೆ ಸೆರೆಗೆ 3 ಬೋನ್ ಅಳವಡಿಸಿ ಕಾರ್ಯಾಚರಣೆ

ಮಂಜು ಕೋಟೆ

ಎಚ್.ಡಿ.ಕೋಟೆ: ತಾಲ್ಲೂಕಿನ ಪ್ರವಾಸಿಗರ ತಾಣವಾಗಿರುವ ಕಬಿನಿ ಜಲಾಶಯದಲ್ಲಿ ವಾರದಲ್ಲಿ ನಾಲ್ಕು ಬಾರಿ ಚಿರತೆ ಪ್ರತ್ಯಕ್ಷದಿಂದ ಪ್ರವಾಸಿಗರು ಮತ್ತು ನಿವಾಸಿಗಳು ಆತಂಕದಲ್ಲಿದ್ದಾರೆ.
ಕಬಿನಿ ಜಲಾಶಯದ ಪ್ರಮುಖ 4 ಕ್ರಸ್ಟ್ ಗೇಟ್‌ಗಳ ಸಮೀಪದಲ್ಲಿ ಬುಧವಾರ ರಾತ್ರಿ ಭಾರೀ ಗಾತ್ರದ ಚಿರತೆ ಜಲಾಶುಂದ ಮುಂಭಾಗದಿಂದ ನಡೆದುಕೊಂಡು ಹೋಗಿ ಗೇಟ್ ಸಮೀಪದ ಜಾಲರಿಯಿಂದ ನೀರಿನ ಮಧ್ಯದಲ್ಲಿ ರಾಜಾರೋಷವಾಗಿ ಹೋಗಿದೆ. ಈ ದೃಶ್ಯಾವಳಿಯನ್ನು ಸಮೀಪದ ಪವರ್ ವಿದ್ಯುತ್ ಘಟಕದಲ್ಲಿರುವ ಸಿಸಿ ಕ್ಯಾಮೆರಾದ ಮೂಲಕ ಸೆರೆಹಿಡಿಲಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ಜಲಾಶಯದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ನಡುಕು ಉಂಟಾಗಿದೆ. ಜಲಾಶಯಕ್ಕೆ ಪ್ರತಿನಿತ್ಯ ನೂರಾರು ಪ್ರವಾಸಿಗರು ಬರುತ್ತಿರುವುದರಿಂದ ಮುಂಭಾಗದ ಬೃಂದಾವನದ ಖಾಲಿ ಜಾಗದಲ್ಲಿ ಪೊದೆಗಳು ಬೆಳೆದು ನಿಂತಿದ್ದು, ಇಲ್ಲಿಂದ ಚಿರತೆ ದಾಳಿ ನಡೆಸಿದರೆ ಪರಿಸ್ಥಿತಿ ಏನಾಬಹುದು ಎಂದು ಜನರು ಆತಂಕದಲ್ಲಿದ್ದಾರೆ.


ವಾರಕ್ಕೆ ಮೂರರಿಂದ ನಾಲ್ಕು ಬಾರಿ ರಾತ್ರಿ 8 ಗಂಟೆಯಿಂದ 9 ಗಂಟೆ ಒಳಗೆ ಜಲಾಶಯದ ಮುಂಭಾಗದಲ್ಲಿ ಭಾರಿ ಗಾತ್ರದ ಚಿರತೆ ತನ್ನ ಆರ್ಭಟವನ್ನು ತೋರಿಸುತ್ತಿದೆ. ಇದರ ಸಮಗ್ರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿ ಕೆಲಸ ನಿರ್ವಹಿಸುವವರೆಗೂ ಆತಂಕ ಎದುರಾಗಿದೆ. ಆದ್ದರಿಂದ ಚಿರತೆಯನ್ನು ಬಂಧಿಸುವಂತೆ ಅರಣ್ಯ ಇಲಾಖೆಯವರಿಗೆ ಮನವಿ ಮಾಡಲಾಗಿದೆ.

-ಸಂದೀಪ್ ಕುಮಾರ್, ಸೀನಿಯರ್ ಮ್ಯಾನೇಜರ್‌ , ಸುಭಾಷ್ ವಿದ್ಯುತ್ ಘಟಕ


ಜಲಾಶಯ ಮುಂಭಾಗದಲ್ಲಿ ಚಿರತೆ ಪ್ರತ್ಯಕ್ಷದ ಬಗ್ಗೆ ನೀರಾವರಿ ಇಲಾಖೆಯವರು ಮತ್ತು ವಿದ್ಯುತ್ ಘಟಕದವರು ವಿಚಾರ ತಿಳಿಸಿದ್ದಾರೆ. ಚಿರತೆಯನ್ನು ಸೆರೆ ಹಿಡಿಯಲು ಮೂರು ಬೋನ್‌ಗಳನ್ನು ಇಡಲಾಗಿದೆ. ಕಾರ್ಯಾಚರಣೆ ನಡೆಸಲಾಗುವುದು. ಯಾರೂ ಆತಂಕ ಪಡಬಾರದು.
-ಪ್ರಸನ್ನ ಕುಮಾರ್, ಅರಣ್ಯ ಅಧಿಕಾರಿ

 

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago