ಜಿಲ್ಲೆಗಳು

ಸೋಲಿನ ಭಯದಿಂದ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಕರೆಸಿ ಪ್ರಚಾರ ಮಾಡುತ್ತದೆ: ಸಿದ್ದರಾಮಯ್ಯ

ಕಲಬುರಗಿ :  ಭ್ರಷ್ಟಾಚಾರ ಮಾಡಿ, ಜನ ವಿರೋಧಿ ಆಡಳಿತ ನಡೆಸಿರುವ ಬಿಜೆಪಿಗೆ ವಿಧಾನಸಭೆ ಚುನಾವಣೆ ಎದುರಿಸಲು ಭಯವಾಗಿ, ಪದೇ ಪದೇ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಕರೆಸಿ ಪ್ರಚಾರ ಮಾಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಸಮಾವೇಶಗಳನ್ನು ನೋಡಿ ಕಾಂಗ್ರೆಸ್‍ಗೆ ಯಾವ ಭಯಗಳು ಇಲ್ಲ. ಭಯ ಶುರುವಾಗಿರುವುದು ಬಿಜೆಪಿಯವರಿಗೆ. ಅದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ವಾರಕ್ಕೊಮ್ಮೆ ಕರೆಸುತ್ತಿದ್ದಾರೆ. ಅಮಿತ್ ಶಾ, ಜೆ.ಪಿ.ನಡ್ಡಾರನ್ನು ಪದೇ ಪದೇ ಕರೆಸುತ್ತಿದ್ದಾರೆ. ನಿಜವಾಗಲು ಅವರಿಗೆ ಭಯ ಶುರುವಾಗಿದೆ ಎಂದು
ತಿರುಗೇಟು ನೀಡಿದರು. ಬಿಜೆಪಿ ಸರ್ಕಾರವನ್ನು ಕಿತ್ತೋಗೆಯಬೇಕು ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇವರ ಆಡಳಿತದಲ್ಲಿ ಒಂದು ಮನೆಯನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಈ ರೀತಿಯ ರಾಷ್ಟ್ರೀಯ ನಾಯಕರ ಮೊರೆ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.
ರಾಹುಲ್‍ಗಾಂಧಿ, ಪ್ರಿಯಾಂಕ ಗಾಂಧಿ ಹೋದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಸೋಲುತ್ತಿದೆ. ಅದಕ್ಕಾಗಿ ಬಿಜೆಪಿ ನಾಯಕರು ಬರುವುದನ್ನು ಕಾಂಗ್ರೆಸ್ ಟೀಕಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಬಿಜೆಪಿ ನಾಯಕರು ಹೋದ ಕಡೆಯಲ್ಲೆಲ್ಲಾ ಗೆದ್ದಿದ್ದಾರಾ. ಬಿಜೆಪಿ ಎಷ್ಟು ರಾಜ್ಯಗಳಲ್ಲಿ ಆಡಳಿತದಲ್ಲಿದೆ. ಪಶ್ಚಿಮ ಬಂಗಾಳದಲ್ಲಿ, ದೆಹಲಿ, ಹರ್ಯಾಣ, ಬಿಹಾರ, ರಾಜಸ್ಥಾನ, ತೆಲಂಗಾಣ, ಆಂಧ್ರಪ್ರದೇಶ, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ. ಬಿಜೆಪಿಯಂತೆ ಕಾಂಗ್ರೆಸ್ ಕೂಡ ನಾಲ್ಕೈದು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಅವರ ಟೀಕೆಗಳು ಅರ್ಥ ಹೀನ ಎಂದು ಟೀಕಿಸಿದರು.
ಬಿಜೆಪಿ ದುರಾಡಳಿತದಿಂದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗಾಗಲೇ 10 ಜಿಲ್ಲೆಗಳಲ್ಲಿ ನಾವು ಜಂಟಿ ಪ್ರವಾಸ ಮಾಡಿದ್ದೇವೆ. ಫೆಬ್ರವರಿಯಿಂದ ಬೀದರ್ ಜಿಲ್ಲೆಯಿಂದ ನಾನು ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡುತ್ತೇನೆ. ಡಿ.ಕೆ.ಶಿವಕುಮಾರ್ ಅವರು ದಕ್ಷಿಣ ಕರ್ನಾಟಕ ರಾಜ್ಯಗಳಲ್ಲಿ ಪ್ರವಾಸ ಮಾಡುತ್ತಾರೆ. ಬಳಿಕ ನಾವು ಭೌಗೋಳಿಕವಾಗಿ ಜಿಲ್ಲೆಗಳನ್ನು ಬದಲಾವಣೆ ಮಾಡಿಕೊಳ್ಳುತ್ತೇವೆ ಎಂದರು.
ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿ ಅಪ್ರಸ್ತುತ, ಅವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ನಾನು ಜೆಡಿಎಸ್ ವಿಷಯದಲ್ಲಿ ಮೃಧುವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

andolanait

Recent Posts

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

4 mins ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

14 mins ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

1 hour ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

1 hour ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

1 hour ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

2 hours ago