ಮೈಸೂರು: ಹುಡಾ ತಿನ್ನುತ್ತಿರುವ ಕಾಳಿಂಗ ಸರ್ಪ, ಬೇಟೆಯಾಡಲು ಹೊಂಚು ಹಾಕುತ್ತಿರುವ ವ್ಯಾಘ್ರ, ಜಿಂಕೆಗಳ ಗುಂಪಿನಲ್ಲಿ ರಾಜ ಗಾಂಭೀರ್ಯದಲ್ಲಿ ಸಾಗುತ್ತಿರುವ ಗಜರಾಜ, ತನ್ನ ಮರಿಗೆ ಗುಟುಕು ನೀಡುತ್ತಿರುವ ತಾಯಿ…
ಇದು ವನ್ಯಮೃಗಗಳ ದಿನನಿತ್ಯದ ಜೀವನ ಶೈಲಿಯಾದರೂ ಛಾಯಾಚಿತ್ರಗಾರ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವ ದೃಶ್ಯಗಳ ಒಂದು ತುಣುಕು.
ನಗರದ ಖಾಸಗಿ ಹೋಟೆಲ್ನಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನದ ಲ್ಲಿ ಬಂಡೀಪುರ, ನಾಗರಹೊಳೆ, ಮಧ್ಯಪ್ರದೇಶ, ರಾಜಸ್ಥಾನದ ರಾಯ್ ತಂಬೂರ್, ಮಧುಗಿರಿ, ಹಿಮಾಚಲ ಪ್ರದೇಶ ತಡೋಬಾ, ಪಿಂಕ್ ಟ್ರೈಗರ್ ರಿಸರ್ವ್ ಹಾಗೂ ತಮಿಳುನಾಡಿನ ಮಧು ಮಲೈ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ತೆಗೆದಿರುವ ಹುಲಿ, ಚಿರತೆ, ಆನೆ, ಕಾಡು ನಾಯಿ, ರಣ ಹದ್ದುಗಳ ಚಿತ್ರಗಳನ್ನು ವನ್ಯಜೀವಿ ಪ್ರಿಯರು ತದೇಕ ಚಿತ್ತದಿಂದ ವೀಕ್ಷಿಸಿ ವ್ಹಾವ್ ಎಂದು ಹುಬ್ಬೇರಿಸಿದರು.
ಸುಮಾರು ೧೦೯ ಮಂದಿಯ ೩೫೦ ಛಾಯಾಚಿತ್ರಗಳು ಪ್ರದರ್ಶನಗೊಂಡಿದ್ದವು.
ಬೆಂಗಳೂರಿನ ಎ.ಪಿ.ಸುರೇಶ್ ರಾವ್ ಸೆರೆ ಹಿಡಿದಿರುವ ‘ವಾಮನ್ ಹಾಕ್ ತಬು ಪಕ್ಷಿಗೆ ಎಲ್ಲೋ ಬಿಡ್ ಬ್ಯಾಬ್ಲರ್ ಪಕ್ಷಿ ಆಹಾರ ತಿನ್ನಿಸು ತ್ತಿರುವ ಚಿತ್ರಕ್ಕೆ ಪ್ರಥಮ ಬಹುಮಾನ ದೊರೆಯಿತು. ಮೈಸೂರಿನ ವಿ.ಶೇಷಾದ್ರಿ ಅವರ ‘ಯೂರೇಷಿನ್ ಈಗಲ್ ಹೌಲ್’ ಗರಿ ಬಿಚ್ಚಿ ಹಾರುವ ಚಿತ್ರಕ್ಕೆ ದ್ವಿತೀಯ ಬಹುಮಾನ, ‘ಕಾಡು ಹಸು’ ಒಂದು ಕಣ್ಣನ್ನು ಕೆಕ್ಕರಿಸುವ ನೋಡುವ ದೃಶ್ಯಕ್ಕೆ ತೃತೀಯ ಸ್ಥಾನ ಲಭಿಸಿತು. ಪ್ರಥಮ ಸ್ಥಾನಕ್ಕೆ ೫ ಸಾವಿರ ರೂ., ದ್ವಿತೀಯ ಸ್ಥಾನಕ್ಕೆ ೩ ಸಾವಿರ ರೂ. ಮತ್ತು ತೃತೀಯ ಸ್ಥಾನಕ್ಕೆ ೧ ಸಾವಿರ ರೂ. ನಗದು ಮತ್ತು ಪರಿತೋಷಕ ನೀಡಲಾಯಿತು.
ವನ್ಯಜೀವಿ ಛಾಯಾಚಿತ್ರ ಪ್ರದರ್ಶನಕ್ಕೆ ಗೋಪಾಲಗೌಡ ಶಾಂತವೇರಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಸಂತೃಪ್ತ್ ಚಾಲನೆ ನೀಡಿದರು. ಉರಗ ತಜ್ಞ ಸ್ನೇಕ್ ಶ್ಯಾಮ್, ಉರಗ ಸಂರಕ್ಷಕ ಬಿ.ಶಿವಕುಮಾರ್, ಪ್ರೀತಿ ಗ್ರೂಪ್ಸ್ನ ನಿರ್ದೇಶಕ ಪ್ರಜ್ವಲ್ ರಾಜಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…