ಜಿಲ್ಲೆಗಳು

ಗಮನಸೆಳೆದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ!

ಮೈಸೂರು: ಹುಡಾ ತಿನ್ನುತ್ತಿರುವ ಕಾಳಿಂಗ ಸರ್ಪ, ಬೇಟೆಯಾಡಲು ಹೊಂಚು ಹಾಕುತ್ತಿರುವ ವ್ಯಾಘ್ರ, ಜಿಂಕೆಗಳ ಗುಂಪಿನಲ್ಲಿ ರಾಜ ಗಾಂಭೀರ್ಯದಲ್ಲಿ ಸಾಗುತ್ತಿರುವ ಗಜರಾಜ, ತನ್ನ ಮರಿಗೆ ಗುಟುಕು ನೀಡುತ್ತಿರುವ ತಾಯಿ…

ಇದು ವನ್ಯಮೃಗಗಳ ದಿನನಿತ್ಯದ ಜೀವನ ಶೈಲಿಯಾದರೂ ಛಾಯಾಚಿತ್ರಗಾರ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವ ದೃಶ್ಯಗಳ ಒಂದು ತುಣುಕು.
ನಗರದ ಖಾಸಗಿ ಹೋಟೆಲ್‌ನಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನದ ಲ್ಲಿ ಬಂಡೀಪುರ, ನಾಗರಹೊಳೆ, ಮಧ್ಯಪ್ರದೇಶ, ರಾಜಸ್ಥಾನದ ರಾಯ್ ತಂಬೂರ್, ಮಧುಗಿರಿ, ಹಿಮಾಚಲ ಪ್ರದೇಶ ತಡೋಬಾ, ಪಿಂಕ್ ಟ್ರೈಗರ್ ರಿಸರ್ವ್ ಹಾಗೂ ತಮಿಳುನಾಡಿನ ಮಧು ಮಲೈ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ತೆಗೆದಿರುವ ಹುಲಿ, ಚಿರತೆ, ಆನೆ, ಕಾಡು ನಾಯಿ, ರಣ ಹದ್ದುಗಳ ಚಿತ್ರಗಳನ್ನು ವನ್ಯಜೀವಿ ಪ್ರಿಯರು ತದೇಕ ಚಿತ್ತದಿಂದ ವೀಕ್ಷಿಸಿ ವ್ಹಾವ್ ಎಂದು ಹುಬ್ಬೇರಿಸಿದರು.

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ದಸರಾ ಮಹೋತ್ಸವದ ಅಂಗವಾಗಿ ನಡೆದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನದಲ್ಲಿ ವಿಜೇತರಾದ ಛಾಯಾಚಿತ್ರಗಾರರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಸುಮಾರು ೧೦೯ ಮಂದಿಯ ೩೫೦ ಛಾಯಾಚಿತ್ರಗಳು ಪ್ರದರ್ಶನಗೊಂಡಿದ್ದವು.

ಬೆಂಗಳೂರಿನ ಎ.ಪಿ.ಸುರೇಶ್ ರಾವ್ ಸೆರೆ ಹಿಡಿದಿರುವ ‘ವಾಮನ್ ಹಾಕ್ ತಬು ಪಕ್ಷಿಗೆ ಎಲ್ಲೋ ಬಿಡ್ ಬ್ಯಾಬ್ಲರ್ ಪಕ್ಷಿ ಆಹಾರ ತಿನ್ನಿಸು ತ್ತಿರುವ ಚಿತ್ರಕ್ಕೆ ಪ್ರಥಮ ಬಹುಮಾನ ದೊರೆಯಿತು. ಮೈಸೂರಿನ ವಿ.ಶೇಷಾದ್ರಿ ಅವರ ‘ಯೂರೇಷಿನ್ ಈಗಲ್ ಹೌಲ್’ ಗರಿ ಬಿಚ್ಚಿ ಹಾರುವ ಚಿತ್ರಕ್ಕೆ ದ್ವಿತೀಯ ಬಹುಮಾನ, ‘ಕಾಡು ಹಸು’ ಒಂದು ಕಣ್ಣನ್ನು ಕೆಕ್ಕರಿಸುವ ನೋಡುವ ದೃಶ್ಯಕ್ಕೆ ತೃತೀಯ ಸ್ಥಾನ ಲಭಿಸಿತು. ಪ್ರಥಮ ಸ್ಥಾನಕ್ಕೆ ೫ ಸಾವಿರ ರೂ., ದ್ವಿತೀಯ ಸ್ಥಾನಕ್ಕೆ ೩ ಸಾವಿರ ರೂ. ಮತ್ತು ತೃತೀಯ ಸ್ಥಾನಕ್ಕೆ ೧ ಸಾವಿರ ರೂ. ನಗದು ಮತ್ತು ಪರಿತೋಷಕ ನೀಡಲಾಯಿತು.

ವನ್ಯಜೀವಿ ಛಾಯಾಚಿತ್ರ ಪ್ರದರ್ಶನಕ್ಕೆ ಗೋಪಾಲಗೌಡ ಶಾಂತವೇರಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಸಂತೃಪ್ತ್ ಚಾಲನೆ ನೀಡಿದರು. ಉರಗ ತಜ್ಞ ಸ್ನೇಕ್ ಶ್ಯಾಮ್, ಉರಗ ಸಂರಕ್ಷಕ ಬಿ.ಶಿವಕುಮಾರ್, ಪ್ರೀತಿ ಗ್ರೂಪ್ಸ್‌ನ ನಿರ್ದೇಶಕ ಪ್ರಜ್ವಲ್ ರಾಜಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

andolana

Recent Posts

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

4 mins ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

19 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

2 hours ago

ಮಹದೇಶ್ವರ ಬೆಟ್ಟ| ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…

2 hours ago

ತಮಿಳುನಾಡಿನಲ್ಲಿ ಕನ್ನಡ ಧ್ವಜ ಹಾಕದಂತೆ ಎಚ್ಚರಿಕೆ: ಶಬರಿಮಲೆಗೆ ಹೊರಟಿದ್ದ ವಾಹನ ತಡೆದು ದಬ್ಬಾಳಿಕೆ

ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…

2 hours ago

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್‌…

2 hours ago