ಮೈಸೂರು: ಹುಡಾ ತಿನ್ನುತ್ತಿರುವ ಕಾಳಿಂಗ ಸರ್ಪ, ಬೇಟೆಯಾಡಲು ಹೊಂಚು ಹಾಕುತ್ತಿರುವ ವ್ಯಾಘ್ರ, ಜಿಂಕೆಗಳ ಗುಂಪಿನಲ್ಲಿ ರಾಜ ಗಾಂಭೀರ್ಯದಲ್ಲಿ ಸಾಗುತ್ತಿರುವ ಗಜರಾಜ, ತನ್ನ ಮರಿಗೆ ಗುಟುಕು ನೀಡುತ್ತಿರುವ ತಾಯಿ…
ಇದು ವನ್ಯಮೃಗಗಳ ದಿನನಿತ್ಯದ ಜೀವನ ಶೈಲಿಯಾದರೂ ಛಾಯಾಚಿತ್ರಗಾರ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವ ದೃಶ್ಯಗಳ ಒಂದು ತುಣುಕು.
ನಗರದ ಖಾಸಗಿ ಹೋಟೆಲ್ನಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನದ ಲ್ಲಿ ಬಂಡೀಪುರ, ನಾಗರಹೊಳೆ, ಮಧ್ಯಪ್ರದೇಶ, ರಾಜಸ್ಥಾನದ ರಾಯ್ ತಂಬೂರ್, ಮಧುಗಿರಿ, ಹಿಮಾಚಲ ಪ್ರದೇಶ ತಡೋಬಾ, ಪಿಂಕ್ ಟ್ರೈಗರ್ ರಿಸರ್ವ್ ಹಾಗೂ ತಮಿಳುನಾಡಿನ ಮಧು ಮಲೈ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ತೆಗೆದಿರುವ ಹುಲಿ, ಚಿರತೆ, ಆನೆ, ಕಾಡು ನಾಯಿ, ರಣ ಹದ್ದುಗಳ ಚಿತ್ರಗಳನ್ನು ವನ್ಯಜೀವಿ ಪ್ರಿಯರು ತದೇಕ ಚಿತ್ತದಿಂದ ವೀಕ್ಷಿಸಿ ವ್ಹಾವ್ ಎಂದು ಹುಬ್ಬೇರಿಸಿದರು.
ಸುಮಾರು ೧೦೯ ಮಂದಿಯ ೩೫೦ ಛಾಯಾಚಿತ್ರಗಳು ಪ್ರದರ್ಶನಗೊಂಡಿದ್ದವು.
ಬೆಂಗಳೂರಿನ ಎ.ಪಿ.ಸುರೇಶ್ ರಾವ್ ಸೆರೆ ಹಿಡಿದಿರುವ ‘ವಾಮನ್ ಹಾಕ್ ತಬು ಪಕ್ಷಿಗೆ ಎಲ್ಲೋ ಬಿಡ್ ಬ್ಯಾಬ್ಲರ್ ಪಕ್ಷಿ ಆಹಾರ ತಿನ್ನಿಸು ತ್ತಿರುವ ಚಿತ್ರಕ್ಕೆ ಪ್ರಥಮ ಬಹುಮಾನ ದೊರೆಯಿತು. ಮೈಸೂರಿನ ವಿ.ಶೇಷಾದ್ರಿ ಅವರ ‘ಯೂರೇಷಿನ್ ಈಗಲ್ ಹೌಲ್’ ಗರಿ ಬಿಚ್ಚಿ ಹಾರುವ ಚಿತ್ರಕ್ಕೆ ದ್ವಿತೀಯ ಬಹುಮಾನ, ‘ಕಾಡು ಹಸು’ ಒಂದು ಕಣ್ಣನ್ನು ಕೆಕ್ಕರಿಸುವ ನೋಡುವ ದೃಶ್ಯಕ್ಕೆ ತೃತೀಯ ಸ್ಥಾನ ಲಭಿಸಿತು. ಪ್ರಥಮ ಸ್ಥಾನಕ್ಕೆ ೫ ಸಾವಿರ ರೂ., ದ್ವಿತೀಯ ಸ್ಥಾನಕ್ಕೆ ೩ ಸಾವಿರ ರೂ. ಮತ್ತು ತೃತೀಯ ಸ್ಥಾನಕ್ಕೆ ೧ ಸಾವಿರ ರೂ. ನಗದು ಮತ್ತು ಪರಿತೋಷಕ ನೀಡಲಾಯಿತು.
ವನ್ಯಜೀವಿ ಛಾಯಾಚಿತ್ರ ಪ್ರದರ್ಶನಕ್ಕೆ ಗೋಪಾಲಗೌಡ ಶಾಂತವೇರಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಸಂತೃಪ್ತ್ ಚಾಲನೆ ನೀಡಿದರು. ಉರಗ ತಜ್ಞ ಸ್ನೇಕ್ ಶ್ಯಾಮ್, ಉರಗ ಸಂರಕ್ಷಕ ಬಿ.ಶಿವಕುಮಾರ್, ಪ್ರೀತಿ ಗ್ರೂಪ್ಸ್ನ ನಿರ್ದೇಶಕ ಪ್ರಜ್ವಲ್ ರಾಜಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…