ಜಿಲ್ಲೆಗಳು

ಗಮನಸೆಳೆದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ!

ಮೈಸೂರು: ಹುಡಾ ತಿನ್ನುತ್ತಿರುವ ಕಾಳಿಂಗ ಸರ್ಪ, ಬೇಟೆಯಾಡಲು ಹೊಂಚು ಹಾಕುತ್ತಿರುವ ವ್ಯಾಘ್ರ, ಜಿಂಕೆಗಳ ಗುಂಪಿನಲ್ಲಿ ರಾಜ ಗಾಂಭೀರ್ಯದಲ್ಲಿ ಸಾಗುತ್ತಿರುವ ಗಜರಾಜ, ತನ್ನ ಮರಿಗೆ ಗುಟುಕು ನೀಡುತ್ತಿರುವ ತಾಯಿ…

ಇದು ವನ್ಯಮೃಗಗಳ ದಿನನಿತ್ಯದ ಜೀವನ ಶೈಲಿಯಾದರೂ ಛಾಯಾಚಿತ್ರಗಾರ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವ ದೃಶ್ಯಗಳ ಒಂದು ತುಣುಕು.
ನಗರದ ಖಾಸಗಿ ಹೋಟೆಲ್‌ನಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನದ ಲ್ಲಿ ಬಂಡೀಪುರ, ನಾಗರಹೊಳೆ, ಮಧ್ಯಪ್ರದೇಶ, ರಾಜಸ್ಥಾನದ ರಾಯ್ ತಂಬೂರ್, ಮಧುಗಿರಿ, ಹಿಮಾಚಲ ಪ್ರದೇಶ ತಡೋಬಾ, ಪಿಂಕ್ ಟ್ರೈಗರ್ ರಿಸರ್ವ್ ಹಾಗೂ ತಮಿಳುನಾಡಿನ ಮಧು ಮಲೈ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ತೆಗೆದಿರುವ ಹುಲಿ, ಚಿರತೆ, ಆನೆ, ಕಾಡು ನಾಯಿ, ರಣ ಹದ್ದುಗಳ ಚಿತ್ರಗಳನ್ನು ವನ್ಯಜೀವಿ ಪ್ರಿಯರು ತದೇಕ ಚಿತ್ತದಿಂದ ವೀಕ್ಷಿಸಿ ವ್ಹಾವ್ ಎಂದು ಹುಬ್ಬೇರಿಸಿದರು.

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ದಸರಾ ಮಹೋತ್ಸವದ ಅಂಗವಾಗಿ ನಡೆದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನದಲ್ಲಿ ವಿಜೇತರಾದ ಛಾಯಾಚಿತ್ರಗಾರರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಸುಮಾರು ೧೦೯ ಮಂದಿಯ ೩೫೦ ಛಾಯಾಚಿತ್ರಗಳು ಪ್ರದರ್ಶನಗೊಂಡಿದ್ದವು.

ಬೆಂಗಳೂರಿನ ಎ.ಪಿ.ಸುರೇಶ್ ರಾವ್ ಸೆರೆ ಹಿಡಿದಿರುವ ‘ವಾಮನ್ ಹಾಕ್ ತಬು ಪಕ್ಷಿಗೆ ಎಲ್ಲೋ ಬಿಡ್ ಬ್ಯಾಬ್ಲರ್ ಪಕ್ಷಿ ಆಹಾರ ತಿನ್ನಿಸು ತ್ತಿರುವ ಚಿತ್ರಕ್ಕೆ ಪ್ರಥಮ ಬಹುಮಾನ ದೊರೆಯಿತು. ಮೈಸೂರಿನ ವಿ.ಶೇಷಾದ್ರಿ ಅವರ ‘ಯೂರೇಷಿನ್ ಈಗಲ್ ಹೌಲ್’ ಗರಿ ಬಿಚ್ಚಿ ಹಾರುವ ಚಿತ್ರಕ್ಕೆ ದ್ವಿತೀಯ ಬಹುಮಾನ, ‘ಕಾಡು ಹಸು’ ಒಂದು ಕಣ್ಣನ್ನು ಕೆಕ್ಕರಿಸುವ ನೋಡುವ ದೃಶ್ಯಕ್ಕೆ ತೃತೀಯ ಸ್ಥಾನ ಲಭಿಸಿತು. ಪ್ರಥಮ ಸ್ಥಾನಕ್ಕೆ ೫ ಸಾವಿರ ರೂ., ದ್ವಿತೀಯ ಸ್ಥಾನಕ್ಕೆ ೩ ಸಾವಿರ ರೂ. ಮತ್ತು ತೃತೀಯ ಸ್ಥಾನಕ್ಕೆ ೧ ಸಾವಿರ ರೂ. ನಗದು ಮತ್ತು ಪರಿತೋಷಕ ನೀಡಲಾಯಿತು.

ವನ್ಯಜೀವಿ ಛಾಯಾಚಿತ್ರ ಪ್ರದರ್ಶನಕ್ಕೆ ಗೋಪಾಲಗೌಡ ಶಾಂತವೇರಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಸಂತೃಪ್ತ್ ಚಾಲನೆ ನೀಡಿದರು. ಉರಗ ತಜ್ಞ ಸ್ನೇಕ್ ಶ್ಯಾಮ್, ಉರಗ ಸಂರಕ್ಷಕ ಬಿ.ಶಿವಕುಮಾರ್, ಪ್ರೀತಿ ಗ್ರೂಪ್ಸ್‌ನ ನಿರ್ದೇಶಕ ಪ್ರಜ್ವಲ್ ರಾಜಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

andolana

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

1 hour ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

1 hour ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

2 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

2 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

3 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

11 hours ago