ಜಿಲ್ಲೆಗಳು

ಗಮನಸೆಳೆದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ!

ಮೈಸೂರು: ಹುಡಾ ತಿನ್ನುತ್ತಿರುವ ಕಾಳಿಂಗ ಸರ್ಪ, ಬೇಟೆಯಾಡಲು ಹೊಂಚು ಹಾಕುತ್ತಿರುವ ವ್ಯಾಘ್ರ, ಜಿಂಕೆಗಳ ಗುಂಪಿನಲ್ಲಿ ರಾಜ ಗಾಂಭೀರ್ಯದಲ್ಲಿ ಸಾಗುತ್ತಿರುವ ಗಜರಾಜ, ತನ್ನ ಮರಿಗೆ ಗುಟುಕು ನೀಡುತ್ತಿರುವ ತಾಯಿ…

ಇದು ವನ್ಯಮೃಗಗಳ ದಿನನಿತ್ಯದ ಜೀವನ ಶೈಲಿಯಾದರೂ ಛಾಯಾಚಿತ್ರಗಾರ ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವ ದೃಶ್ಯಗಳ ಒಂದು ತುಣುಕು.
ನಗರದ ಖಾಸಗಿ ಹೋಟೆಲ್‌ನಲ್ಲಿ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ವನ್ಯಜೀವಿಗಳ ಛಾಯಾಚಿತ್ರ ಪ್ರದರ್ಶನದ ಲ್ಲಿ ಬಂಡೀಪುರ, ನಾಗರಹೊಳೆ, ಮಧ್ಯಪ್ರದೇಶ, ರಾಜಸ್ಥಾನದ ರಾಯ್ ತಂಬೂರ್, ಮಧುಗಿರಿ, ಹಿಮಾಚಲ ಪ್ರದೇಶ ತಡೋಬಾ, ಪಿಂಕ್ ಟ್ರೈಗರ್ ರಿಸರ್ವ್ ಹಾಗೂ ತಮಿಳುನಾಡಿನ ಮಧು ಮಲೈ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ ತೆಗೆದಿರುವ ಹುಲಿ, ಚಿರತೆ, ಆನೆ, ಕಾಡು ನಾಯಿ, ರಣ ಹದ್ದುಗಳ ಚಿತ್ರಗಳನ್ನು ವನ್ಯಜೀವಿ ಪ್ರಿಯರು ತದೇಕ ಚಿತ್ತದಿಂದ ವೀಕ್ಷಿಸಿ ವ್ಹಾವ್ ಎಂದು ಹುಬ್ಬೇರಿಸಿದರು.

ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ದಸರಾ ಮಹೋತ್ಸವದ ಅಂಗವಾಗಿ ನಡೆದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನದಲ್ಲಿ ವಿಜೇತರಾದ ಛಾಯಾಚಿತ್ರಗಾರರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಸುಮಾರು ೧೦೯ ಮಂದಿಯ ೩೫೦ ಛಾಯಾಚಿತ್ರಗಳು ಪ್ರದರ್ಶನಗೊಂಡಿದ್ದವು.

ಬೆಂಗಳೂರಿನ ಎ.ಪಿ.ಸುರೇಶ್ ರಾವ್ ಸೆರೆ ಹಿಡಿದಿರುವ ‘ವಾಮನ್ ಹಾಕ್ ತಬು ಪಕ್ಷಿಗೆ ಎಲ್ಲೋ ಬಿಡ್ ಬ್ಯಾಬ್ಲರ್ ಪಕ್ಷಿ ಆಹಾರ ತಿನ್ನಿಸು ತ್ತಿರುವ ಚಿತ್ರಕ್ಕೆ ಪ್ರಥಮ ಬಹುಮಾನ ದೊರೆಯಿತು. ಮೈಸೂರಿನ ವಿ.ಶೇಷಾದ್ರಿ ಅವರ ‘ಯೂರೇಷಿನ್ ಈಗಲ್ ಹೌಲ್’ ಗರಿ ಬಿಚ್ಚಿ ಹಾರುವ ಚಿತ್ರಕ್ಕೆ ದ್ವಿತೀಯ ಬಹುಮಾನ, ‘ಕಾಡು ಹಸು’ ಒಂದು ಕಣ್ಣನ್ನು ಕೆಕ್ಕರಿಸುವ ನೋಡುವ ದೃಶ್ಯಕ್ಕೆ ತೃತೀಯ ಸ್ಥಾನ ಲಭಿಸಿತು. ಪ್ರಥಮ ಸ್ಥಾನಕ್ಕೆ ೫ ಸಾವಿರ ರೂ., ದ್ವಿತೀಯ ಸ್ಥಾನಕ್ಕೆ ೩ ಸಾವಿರ ರೂ. ಮತ್ತು ತೃತೀಯ ಸ್ಥಾನಕ್ಕೆ ೧ ಸಾವಿರ ರೂ. ನಗದು ಮತ್ತು ಪರಿತೋಷಕ ನೀಡಲಾಯಿತು.

ವನ್ಯಜೀವಿ ಛಾಯಾಚಿತ್ರ ಪ್ರದರ್ಶನಕ್ಕೆ ಗೋಪಾಲಗೌಡ ಶಾಂತವೇರಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಸಂತೃಪ್ತ್ ಚಾಲನೆ ನೀಡಿದರು. ಉರಗ ತಜ್ಞ ಸ್ನೇಕ್ ಶ್ಯಾಮ್, ಉರಗ ಸಂರಕ್ಷಕ ಬಿ.ಶಿವಕುಮಾರ್, ಪ್ರೀತಿ ಗ್ರೂಪ್ಸ್‌ನ ನಿರ್ದೇಶಕ ಪ್ರಜ್ವಲ್ ರಾಜಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

 

andolana

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

6 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

6 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago