ಮೈಸೂರು: ಅನ್ನಭಾಗ್ಯ ಹಮಾಲಿ ಕಾರ್ಮಿಕರ ಕೂಲಿ ಹೆಚ್ಚಳ, ಕೆಲಸದ ಭದ್ರತೆ, ಸಾಮಾಜಿಕ ಭದ್ರತೆ ಮತ್ತು ನೇರ ಸಂಬಳ ಪಾವತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ.15 ರಂದು ಬೆಂಗಳೂರು ಚಲೋ ನಡೆಸಲಿದ್ದು, ಫ್ರೀಡಂಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಲೋಡಿಂಗ್ ಅಂಡ್ ಅನ್ ಲೋಡಿಂಗ್ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವರದರಾಜೇಂದ್ರ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ರಾಜ್ಯಾದ್ಯಂತ ಪ್ರಾಣದ ಹಂಗು ತೊರೆದು ಶ್ರಮಿಸಿದ ವರ್ಗ ನಮ್ಮದು. ಅಂಗನವಾಡಿ ಕಾರ್ಯಕರ್ತೆಯರನ್ನು ಗುರುತಿಸುವ ಸರ್ಕಾರಕ್ಕೆ ನಾವು ಕಾಣಿಸುತ್ತಿಲ್ಲ. 2018ರ ನಂತರದಿಂದ ಲೋಡಿಂಗ್, ಅನ್ಲೋಡಿಂಗ್ ಕೂಲಿ ದರವನ್ನು ಹೆಚ್ಚಿಸಿಲ್ಲ. ಎಲ್ಲಾ ವಸ್ತುಗಳ ಬೆಲೆ ಏರಿಕೆ ನಿರಂತರವಾಗಿ ನಡೆಯುತ್ತಿದ್ದು, ಬೆಲೆಯೇರಿಕೆಗನುಗುಣವಾಗಿ ಕೂಲಿ ಹೆಚ್ಚಳ ಮಾಡಬೇಕು, ಕೆಲಸದ ಭದ್ರತೆ, ಸಾಮಾಜಿಕ ಭದ್ರತೆ ಮತ್ತು ನೇರ ಸಂಬಳ ಪಾವತಿ ಸೇರಿದಂತೆ ವಿವಿಧ ಬೇಡಿಕೆಗೆ ಅಗ್ರಹಿಸಿ ಅನಿರ್ದಿಷ್ಟಾವಧಿ ಹೋರಾಟ ಮಾಡಲಾಗುವುದು ಎಂದರು.
ಉಪಾಧ್ಯಕ್ಷ ನರಸಿಂಹಮೂರ್ತಿ, ಜಿಲ್ಲಾಧ್ಯಕ್ಷ ಕರಿನಾಯಕ, ಪದಾಧಿಕಾರಿ ಕೃಷ್ಣಪ್ಪ, ಜಿಲ್ಲಾ ಕಾರ್ಯದರ್ಶಿ ಜಿ.ಮಹದೇವ ಇದ್ದರು.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…