ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ
ಮೈಸೂರು: ಮೈಸೂರು ನಗರದಲ್ಲಿ ಮತ್ತೊಂದು ಹೊರ ವರ್ತುಲ ರಸ್ತೆ(ಪೆರಿಫೆರಲ್) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಟೆಂಡರ್ ಕರೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಮುಂದಿನ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ ಇದೆ.
ಮೈಸೂರು ನಗರವು ವಾಣಜ್ಯ ಕ್ಲಸ್ಟರ್ಗಳಿಂದ ಕೈಗಾರಿಕಾ ಅಭಿವೃದ್ಧಿ ಹೊಂದಲಿದ್ದು, ಸಮಗ್ರ ಬೆಳವಣಿಗೆಗೆ ಅನುಕೂಲಕರವಾಗಿರುತ್ತದೆ. ಮೈಸೂರು ನಗರಪಾಲಿಕೆಯನ್ನು ಬೃಹತ್ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸಲು ಉದ್ದೇಶಿಸಿರುವುದರಿಂದ ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣವು ಅವಶ್ಯಕವಾಗಿರುತ್ತದೆ.
ಪ್ರಸ್ತಾಪಿತ ರಸ್ತೆ ನಿರ್ಮಾಣಕ್ಕೆ ೮೨೪ ಎಕರೆ ಭೂಸ್ವಾಧೀನದ ಅವಶ್ಯಕತೆಯಿದ್ದು, ಭೂಸ್ವಾಧೀನಕ್ಕೆ ೧೨೩೬ ಕೋಟಿ ರೂ., ರಸ್ತೆ ನಿರ್ಮಾಣಕ್ಕೆ ೭೩೫ ಕೋಟಿ ರೂ. ಸೇರಿ ಒಟ್ಟು ೧೯೭೧ ಕೋಟಿ ರೂ.ಗಳ ವೆಚ್ಚವಾಗುತ್ತದೆಂದು ಅಂದಾಜಿಸಿದ್ದು, ಹೀಗಾಗಿ, ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಟೆಂಡರ್ ಕರೆಯಲು ಅನುಮೋದನೆ ಕೊಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಟೆಂಡರ್ ಕರೆದು ಏಜೆನ್ಸಿಯನ್ನು ನಿಯೋಜಿಸಿಕೊಳ್ಳಲು ೯.೮೫ ಕೋಟಿ ರೂ. ಅಗತ್ಯ ಇರಬಹುದೆಂದು ಅಂದಾಜಿಸಿ ಒಪ್ಪಿಗೆ ಕೊಡುವಂತೆ ನಗರಾಭಿವೃದ್ಧಿ ಇಲಾಖೆಗೆ ಕೋರಿತ್ತು. ಇದೀಗ ನಗರಾಭಿವೃದ್ಧಿ ಇಲಾಖೆಯು ಒಪ್ಪಿಗೆ ಸೂಚಿಸಿ ಹಲವಾರು ಅಂಶಗಳನ್ನು ಪಾಲಿಸುವಂತೆ ಹೇಳಿದೆ.
ಡಿಪಿಆರ್ ತಯಾರಿಕೆಗೆ ಮುಡಾದ ಸ್ವಂತ ಸಂಪನ್ಮೂಲ ಭರಿಸುವುದು, ಡಿಪಿಆರ್ ತಯಾರಾದ ನಂತರ ಯೋಜನೆಯನ್ನು ರೂಪಿಸುವ ಸಂದರ್ಭದಲ್ಲಿ ಭಾರತ್ ಮಾಲಾ-ಹಂತ ೨ ಅಥವಾ ತತ್ಸಮಾನ ಯೋಜನೆಯಲ್ಲಿ ಸೇರಿಸುವ ಬಗ್ಗೆ ಪ್ರಾಧಿಕಾರವು ನಿರ್ಣಯಿಸತಕ್ಕದ್ದೆಂದು ಹೇಳಿ ಒಪ್ಪಿಗೆ ಕೊಟ್ಟಿದೆ ಎಂದು ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಹೇಳಿದ್ದಾರೆ.
ಪೆರಿಫೆರಲ್ ರಿಂಗ್ ರಸ್ತೆಗೆ ಡಿಪಿಆರ್ ತಯಾರಿಸಲು ಸರ್ಕಾರ ಒಪ್ಪಿಗೆ ನೀಡಿರುವುದರಿಂದ ಜನವರಿ ಎರಡನೇ ವಾರದೊಳಗೆ ಟೆಂಡರ್ ಕರೆಯುತ್ತೇವೆ. ಈಗಾಗಲೇ ಕಳೆದ ಆಯವ್ಯಯದಲ್ಲಿ ೫ ಕೋಟಿ ರೂ. ಮೀಸಲಿಟ್ಟಿರುವ ಕಾರಣ ಏಜೆನ್ಸಿ ನಿಗದಿಯಾದ ತಕ್ಷಣ ಕಾರ್ಯಪ್ರವೃತ್ತರಾಗುತ್ತೇವೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…