ಜಿಲ್ಲೆಗಳು

ಪೆರಿಫೆರಲ್ ರಿಂಗ್ ರಸ್ತೆ ಡಿಪಿಆರ್ ಟೆಂಡರ್‌ಗೆ ಅನುಮೋದನೆ

ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ

ಮೈಸೂರು: ಮೈಸೂರು ನಗರದಲ್ಲಿ ಮತ್ತೊಂದು ಹೊರ ವರ್ತುಲ ರಸ್ತೆ(ಪೆರಿಫೆರಲ್) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಟೆಂಡರ್ ಕರೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಮುಂದಿನ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ ಇದೆ.

ಮೈಸೂರು ನಗರವು ವಾಣಜ್ಯ ಕ್ಲಸ್ಟರ್‌ಗಳಿಂದ ಕೈಗಾರಿಕಾ ಅಭಿವೃದ್ಧಿ ಹೊಂದಲಿದ್ದು, ಸಮಗ್ರ ಬೆಳವಣಿಗೆಗೆ ಅನುಕೂಲಕರವಾಗಿರುತ್ತದೆ. ಮೈಸೂರು ನಗರಪಾಲಿಕೆಯನ್ನು ಬೃಹತ್ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸಲು ಉದ್ದೇಶಿಸಿರುವುದರಿಂದ ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣವು ಅವಶ್ಯಕವಾಗಿರುತ್ತದೆ.

ಪ್ರಸ್ತಾಪಿತ ರಸ್ತೆ ನಿರ್ಮಾಣಕ್ಕೆ ೮೨೪ ಎಕರೆ ಭೂಸ್ವಾಧೀನದ ಅವಶ್ಯಕತೆಯಿದ್ದು, ಭೂಸ್ವಾಧೀನಕ್ಕೆ ೧೨೩೬ ಕೋಟಿ ರೂ., ರಸ್ತೆ ನಿರ್ಮಾಣಕ್ಕೆ ೭೩೫ ಕೋಟಿ ರೂ. ಸೇರಿ ಒಟ್ಟು ೧೯೭೧ ಕೋಟಿ ರೂ.ಗಳ ವೆಚ್ಚವಾಗುತ್ತದೆಂದು ಅಂದಾಜಿಸಿದ್ದು, ಹೀಗಾಗಿ, ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಟೆಂಡರ್ ಕರೆಯಲು ಅನುಮೋದನೆ ಕೊಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಟೆಂಡರ್ ಕರೆದು ಏಜೆನ್ಸಿಯನ್ನು ನಿಯೋಜಿಸಿಕೊಳ್ಳಲು ೯.೮೫ ಕೋಟಿ ರೂ. ಅಗತ್ಯ ಇರಬಹುದೆಂದು ಅಂದಾಜಿಸಿ ಒಪ್ಪಿಗೆ ಕೊಡುವಂತೆ ನಗರಾಭಿವೃದ್ಧಿ ಇಲಾಖೆಗೆ ಕೋರಿತ್ತು. ಇದೀಗ ನಗರಾಭಿವೃದ್ಧಿ ಇಲಾಖೆಯು ಒಪ್ಪಿಗೆ ಸೂಚಿಸಿ ಹಲವಾರು ಅಂಶಗಳನ್ನು ಪಾಲಿಸುವಂತೆ ಹೇಳಿದೆ.

ಡಿಪಿಆರ್ ತಯಾರಿಕೆಗೆ ಮುಡಾದ ಸ್ವಂತ ಸಂಪನ್ಮೂಲ ಭರಿಸುವುದು, ಡಿಪಿಆರ್ ತಯಾರಾದ ನಂತರ ಯೋಜನೆಯನ್ನು ರೂಪಿಸುವ ಸಂದರ್ಭದಲ್ಲಿ ಭಾರತ್ ಮಾಲಾ-ಹಂತ ೨ ಅಥವಾ ತತ್ಸಮಾನ ಯೋಜನೆಯಲ್ಲಿ ಸೇರಿಸುವ ಬಗ್ಗೆ ಪ್ರಾಧಿಕಾರವು ನಿರ್ಣಯಿಸತಕ್ಕದ್ದೆಂದು ಹೇಳಿ ಒಪ್ಪಿಗೆ ಕೊಟ್ಟಿದೆ ಎಂದು ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಹೇಳಿದ್ದಾರೆ.

ಪೆರಿಫೆರಲ್ ರಿಂಗ್ ರಸ್ತೆಗೆ ಡಿಪಿಆರ್ ತಯಾರಿಸಲು ಸರ್ಕಾರ ಒಪ್ಪಿಗೆ ನೀಡಿರುವುದರಿಂದ ಜನವರಿ ಎರಡನೇ ವಾರದೊಳಗೆ ಟೆಂಡರ್ ಕರೆಯುತ್ತೇವೆ. ಈಗಾಗಲೇ ಕಳೆದ ಆಯವ್ಯಯದಲ್ಲಿ ೫ ಕೋಟಿ ರೂ. ಮೀಸಲಿಟ್ಟಿರುವ ಕಾರಣ ಏಜೆನ್ಸಿ ನಿಗದಿಯಾದ ತಕ್ಷಣ ಕಾರ್ಯಪ್ರವೃತ್ತರಾಗುತ್ತೇವೆ.

andolanait

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

14 mins ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

16 mins ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

19 mins ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

20 mins ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

22 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

25 mins ago