ಜಿಲ್ಲೆಗಳು

ಪೆರಿಫೆರಲ್ ರಿಂಗ್ ರಸ್ತೆ ಡಿಪಿಆರ್ ಟೆಂಡರ್‌ಗೆ ಅನುಮೋದನೆ

ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ

ಮೈಸೂರು: ಮೈಸೂರು ನಗರದಲ್ಲಿ ಮತ್ತೊಂದು ಹೊರ ವರ್ತುಲ ರಸ್ತೆ(ಪೆರಿಫೆರಲ್) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಟೆಂಡರ್ ಕರೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಮುಂದಿನ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ ಇದೆ.

ಮೈಸೂರು ನಗರವು ವಾಣಜ್ಯ ಕ್ಲಸ್ಟರ್‌ಗಳಿಂದ ಕೈಗಾರಿಕಾ ಅಭಿವೃದ್ಧಿ ಹೊಂದಲಿದ್ದು, ಸಮಗ್ರ ಬೆಳವಣಿಗೆಗೆ ಅನುಕೂಲಕರವಾಗಿರುತ್ತದೆ. ಮೈಸೂರು ನಗರಪಾಲಿಕೆಯನ್ನು ಬೃಹತ್ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸಲು ಉದ್ದೇಶಿಸಿರುವುದರಿಂದ ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣವು ಅವಶ್ಯಕವಾಗಿರುತ್ತದೆ.

ಪ್ರಸ್ತಾಪಿತ ರಸ್ತೆ ನಿರ್ಮಾಣಕ್ಕೆ ೮೨೪ ಎಕರೆ ಭೂಸ್ವಾಧೀನದ ಅವಶ್ಯಕತೆಯಿದ್ದು, ಭೂಸ್ವಾಧೀನಕ್ಕೆ ೧೨೩೬ ಕೋಟಿ ರೂ., ರಸ್ತೆ ನಿರ್ಮಾಣಕ್ಕೆ ೭೩೫ ಕೋಟಿ ರೂ. ಸೇರಿ ಒಟ್ಟು ೧೯೭೧ ಕೋಟಿ ರೂ.ಗಳ ವೆಚ್ಚವಾಗುತ್ತದೆಂದು ಅಂದಾಜಿಸಿದ್ದು, ಹೀಗಾಗಿ, ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಟೆಂಡರ್ ಕರೆಯಲು ಅನುಮೋದನೆ ಕೊಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಟೆಂಡರ್ ಕರೆದು ಏಜೆನ್ಸಿಯನ್ನು ನಿಯೋಜಿಸಿಕೊಳ್ಳಲು ೯.೮೫ ಕೋಟಿ ರೂ. ಅಗತ್ಯ ಇರಬಹುದೆಂದು ಅಂದಾಜಿಸಿ ಒಪ್ಪಿಗೆ ಕೊಡುವಂತೆ ನಗರಾಭಿವೃದ್ಧಿ ಇಲಾಖೆಗೆ ಕೋರಿತ್ತು. ಇದೀಗ ನಗರಾಭಿವೃದ್ಧಿ ಇಲಾಖೆಯು ಒಪ್ಪಿಗೆ ಸೂಚಿಸಿ ಹಲವಾರು ಅಂಶಗಳನ್ನು ಪಾಲಿಸುವಂತೆ ಹೇಳಿದೆ.

ಡಿಪಿಆರ್ ತಯಾರಿಕೆಗೆ ಮುಡಾದ ಸ್ವಂತ ಸಂಪನ್ಮೂಲ ಭರಿಸುವುದು, ಡಿಪಿಆರ್ ತಯಾರಾದ ನಂತರ ಯೋಜನೆಯನ್ನು ರೂಪಿಸುವ ಸಂದರ್ಭದಲ್ಲಿ ಭಾರತ್ ಮಾಲಾ-ಹಂತ ೨ ಅಥವಾ ತತ್ಸಮಾನ ಯೋಜನೆಯಲ್ಲಿ ಸೇರಿಸುವ ಬಗ್ಗೆ ಪ್ರಾಧಿಕಾರವು ನಿರ್ಣಯಿಸತಕ್ಕದ್ದೆಂದು ಹೇಳಿ ಒಪ್ಪಿಗೆ ಕೊಟ್ಟಿದೆ ಎಂದು ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಹೇಳಿದ್ದಾರೆ.

ಪೆರಿಫೆರಲ್ ರಿಂಗ್ ರಸ್ತೆಗೆ ಡಿಪಿಆರ್ ತಯಾರಿಸಲು ಸರ್ಕಾರ ಒಪ್ಪಿಗೆ ನೀಡಿರುವುದರಿಂದ ಜನವರಿ ಎರಡನೇ ವಾರದೊಳಗೆ ಟೆಂಡರ್ ಕರೆಯುತ್ತೇವೆ. ಈಗಾಗಲೇ ಕಳೆದ ಆಯವ್ಯಯದಲ್ಲಿ ೫ ಕೋಟಿ ರೂ. ಮೀಸಲಿಟ್ಟಿರುವ ಕಾರಣ ಏಜೆನ್ಸಿ ನಿಗದಿಯಾದ ತಕ್ಷಣ ಕಾರ್ಯಪ್ರವೃತ್ತರಾಗುತ್ತೇವೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

9 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago