ಜಿಲ್ಲೆಗಳು

ಪೆರಿಫೆರಲ್ ರಿಂಗ್ ರಸ್ತೆ ಡಿಪಿಆರ್ ಟೆಂಡರ್‌ಗೆ ಅನುಮೋದನೆ

ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ

ಮೈಸೂರು: ಮೈಸೂರು ನಗರದಲ್ಲಿ ಮತ್ತೊಂದು ಹೊರ ವರ್ತುಲ ರಸ್ತೆ(ಪೆರಿಫೆರಲ್) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಟೆಂಡರ್ ಕರೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಮುಂದಿನ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ ಇದೆ.

ಮೈಸೂರು ನಗರವು ವಾಣಜ್ಯ ಕ್ಲಸ್ಟರ್‌ಗಳಿಂದ ಕೈಗಾರಿಕಾ ಅಭಿವೃದ್ಧಿ ಹೊಂದಲಿದ್ದು, ಸಮಗ್ರ ಬೆಳವಣಿಗೆಗೆ ಅನುಕೂಲಕರವಾಗಿರುತ್ತದೆ. ಮೈಸೂರು ನಗರಪಾಲಿಕೆಯನ್ನು ಬೃಹತ್ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸಲು ಉದ್ದೇಶಿಸಿರುವುದರಿಂದ ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣವು ಅವಶ್ಯಕವಾಗಿರುತ್ತದೆ.

ಪ್ರಸ್ತಾಪಿತ ರಸ್ತೆ ನಿರ್ಮಾಣಕ್ಕೆ ೮೨೪ ಎಕರೆ ಭೂಸ್ವಾಧೀನದ ಅವಶ್ಯಕತೆಯಿದ್ದು, ಭೂಸ್ವಾಧೀನಕ್ಕೆ ೧೨೩೬ ಕೋಟಿ ರೂ., ರಸ್ತೆ ನಿರ್ಮಾಣಕ್ಕೆ ೭೩೫ ಕೋಟಿ ರೂ. ಸೇರಿ ಒಟ್ಟು ೧೯೭೧ ಕೋಟಿ ರೂ.ಗಳ ವೆಚ್ಚವಾಗುತ್ತದೆಂದು ಅಂದಾಜಿಸಿದ್ದು, ಹೀಗಾಗಿ, ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಟೆಂಡರ್ ಕರೆಯಲು ಅನುಮೋದನೆ ಕೊಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಟೆಂಡರ್ ಕರೆದು ಏಜೆನ್ಸಿಯನ್ನು ನಿಯೋಜಿಸಿಕೊಳ್ಳಲು ೯.೮೫ ಕೋಟಿ ರೂ. ಅಗತ್ಯ ಇರಬಹುದೆಂದು ಅಂದಾಜಿಸಿ ಒಪ್ಪಿಗೆ ಕೊಡುವಂತೆ ನಗರಾಭಿವೃದ್ಧಿ ಇಲಾಖೆಗೆ ಕೋರಿತ್ತು. ಇದೀಗ ನಗರಾಭಿವೃದ್ಧಿ ಇಲಾಖೆಯು ಒಪ್ಪಿಗೆ ಸೂಚಿಸಿ ಹಲವಾರು ಅಂಶಗಳನ್ನು ಪಾಲಿಸುವಂತೆ ಹೇಳಿದೆ.

ಡಿಪಿಆರ್ ತಯಾರಿಕೆಗೆ ಮುಡಾದ ಸ್ವಂತ ಸಂಪನ್ಮೂಲ ಭರಿಸುವುದು, ಡಿಪಿಆರ್ ತಯಾರಾದ ನಂತರ ಯೋಜನೆಯನ್ನು ರೂಪಿಸುವ ಸಂದರ್ಭದಲ್ಲಿ ಭಾರತ್ ಮಾಲಾ-ಹಂತ ೨ ಅಥವಾ ತತ್ಸಮಾನ ಯೋಜನೆಯಲ್ಲಿ ಸೇರಿಸುವ ಬಗ್ಗೆ ಪ್ರಾಧಿಕಾರವು ನಿರ್ಣಯಿಸತಕ್ಕದ್ದೆಂದು ಹೇಳಿ ಒಪ್ಪಿಗೆ ಕೊಟ್ಟಿದೆ ಎಂದು ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಹೇಳಿದ್ದಾರೆ.

ಪೆರಿಫೆರಲ್ ರಿಂಗ್ ರಸ್ತೆಗೆ ಡಿಪಿಆರ್ ತಯಾರಿಸಲು ಸರ್ಕಾರ ಒಪ್ಪಿಗೆ ನೀಡಿರುವುದರಿಂದ ಜನವರಿ ಎರಡನೇ ವಾರದೊಳಗೆ ಟೆಂಡರ್ ಕರೆಯುತ್ತೇವೆ. ಈಗಾಗಲೇ ಕಳೆದ ಆಯವ್ಯಯದಲ್ಲಿ ೫ ಕೋಟಿ ರೂ. ಮೀಸಲಿಟ್ಟಿರುವ ಕಾರಣ ಏಜೆನ್ಸಿ ನಿಗದಿಯಾದ ತಕ್ಷಣ ಕಾರ್ಯಪ್ರವೃತ್ತರಾಗುತ್ತೇವೆ.

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

3 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

6 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

8 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

8 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

8 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

12 hours ago