ಜಿಲ್ಲೆಗಳು

ಪೆರಿಫೆರಲ್ ರಿಂಗ್ ರಸ್ತೆ ಡಿಪಿಆರ್ ಟೆಂಡರ್‌ಗೆ ಅನುಮೋದನೆ

ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ

ಮೈಸೂರು: ಮೈಸೂರು ನಗರದಲ್ಲಿ ಮತ್ತೊಂದು ಹೊರ ವರ್ತುಲ ರಸ್ತೆ(ಪೆರಿಫೆರಲ್) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಟೆಂಡರ್ ಕರೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಮುಂದಿನ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ ಇದೆ.

ಮೈಸೂರು ನಗರವು ವಾಣಜ್ಯ ಕ್ಲಸ್ಟರ್‌ಗಳಿಂದ ಕೈಗಾರಿಕಾ ಅಭಿವೃದ್ಧಿ ಹೊಂದಲಿದ್ದು, ಸಮಗ್ರ ಬೆಳವಣಿಗೆಗೆ ಅನುಕೂಲಕರವಾಗಿರುತ್ತದೆ. ಮೈಸೂರು ನಗರಪಾಲಿಕೆಯನ್ನು ಬೃಹತ್ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸಲು ಉದ್ದೇಶಿಸಿರುವುದರಿಂದ ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣವು ಅವಶ್ಯಕವಾಗಿರುತ್ತದೆ.

ಪ್ರಸ್ತಾಪಿತ ರಸ್ತೆ ನಿರ್ಮಾಣಕ್ಕೆ ೮೨೪ ಎಕರೆ ಭೂಸ್ವಾಧೀನದ ಅವಶ್ಯಕತೆಯಿದ್ದು, ಭೂಸ್ವಾಧೀನಕ್ಕೆ ೧೨೩೬ ಕೋಟಿ ರೂ., ರಸ್ತೆ ನಿರ್ಮಾಣಕ್ಕೆ ೭೩೫ ಕೋಟಿ ರೂ. ಸೇರಿ ಒಟ್ಟು ೧೯೭೧ ಕೋಟಿ ರೂ.ಗಳ ವೆಚ್ಚವಾಗುತ್ತದೆಂದು ಅಂದಾಜಿಸಿದ್ದು, ಹೀಗಾಗಿ, ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಟೆಂಡರ್ ಕರೆಯಲು ಅನುಮೋದನೆ ಕೊಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಟೆಂಡರ್ ಕರೆದು ಏಜೆನ್ಸಿಯನ್ನು ನಿಯೋಜಿಸಿಕೊಳ್ಳಲು ೯.೮೫ ಕೋಟಿ ರೂ. ಅಗತ್ಯ ಇರಬಹುದೆಂದು ಅಂದಾಜಿಸಿ ಒಪ್ಪಿಗೆ ಕೊಡುವಂತೆ ನಗರಾಭಿವೃದ್ಧಿ ಇಲಾಖೆಗೆ ಕೋರಿತ್ತು. ಇದೀಗ ನಗರಾಭಿವೃದ್ಧಿ ಇಲಾಖೆಯು ಒಪ್ಪಿಗೆ ಸೂಚಿಸಿ ಹಲವಾರು ಅಂಶಗಳನ್ನು ಪಾಲಿಸುವಂತೆ ಹೇಳಿದೆ.

ಡಿಪಿಆರ್ ತಯಾರಿಕೆಗೆ ಮುಡಾದ ಸ್ವಂತ ಸಂಪನ್ಮೂಲ ಭರಿಸುವುದು, ಡಿಪಿಆರ್ ತಯಾರಾದ ನಂತರ ಯೋಜನೆಯನ್ನು ರೂಪಿಸುವ ಸಂದರ್ಭದಲ್ಲಿ ಭಾರತ್ ಮಾಲಾ-ಹಂತ ೨ ಅಥವಾ ತತ್ಸಮಾನ ಯೋಜನೆಯಲ್ಲಿ ಸೇರಿಸುವ ಬಗ್ಗೆ ಪ್ರಾಧಿಕಾರವು ನಿರ್ಣಯಿಸತಕ್ಕದ್ದೆಂದು ಹೇಳಿ ಒಪ್ಪಿಗೆ ಕೊಟ್ಟಿದೆ ಎಂದು ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಹೇಳಿದ್ದಾರೆ.

ಪೆರಿಫೆರಲ್ ರಿಂಗ್ ರಸ್ತೆಗೆ ಡಿಪಿಆರ್ ತಯಾರಿಸಲು ಸರ್ಕಾರ ಒಪ್ಪಿಗೆ ನೀಡಿರುವುದರಿಂದ ಜನವರಿ ಎರಡನೇ ವಾರದೊಳಗೆ ಟೆಂಡರ್ ಕರೆಯುತ್ತೇವೆ. ಈಗಾಗಲೇ ಕಳೆದ ಆಯವ್ಯಯದಲ್ಲಿ ೫ ಕೋಟಿ ರೂ. ಮೀಸಲಿಟ್ಟಿರುವ ಕಾರಣ ಏಜೆನ್ಸಿ ನಿಗದಿಯಾದ ತಕ್ಷಣ ಕಾರ್ಯಪ್ರವೃತ್ತರಾಗುತ್ತೇವೆ.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago