ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ
ಮೈಸೂರು: ಮೈಸೂರು ನಗರದಲ್ಲಿ ಮತ್ತೊಂದು ಹೊರ ವರ್ತುಲ ರಸ್ತೆ(ಪೆರಿಫೆರಲ್) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಟೆಂಡರ್ ಕರೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಮುಂದಿನ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ ಇದೆ.
ಮೈಸೂರು ನಗರವು ವಾಣಜ್ಯ ಕ್ಲಸ್ಟರ್ಗಳಿಂದ ಕೈಗಾರಿಕಾ ಅಭಿವೃದ್ಧಿ ಹೊಂದಲಿದ್ದು, ಸಮಗ್ರ ಬೆಳವಣಿಗೆಗೆ ಅನುಕೂಲಕರವಾಗಿರುತ್ತದೆ. ಮೈಸೂರು ನಗರಪಾಲಿಕೆಯನ್ನು ಬೃಹತ್ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸಲು ಉದ್ದೇಶಿಸಿರುವುದರಿಂದ ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣವು ಅವಶ್ಯಕವಾಗಿರುತ್ತದೆ.
ಪ್ರಸ್ತಾಪಿತ ರಸ್ತೆ ನಿರ್ಮಾಣಕ್ಕೆ ೮೨೪ ಎಕರೆ ಭೂಸ್ವಾಧೀನದ ಅವಶ್ಯಕತೆಯಿದ್ದು, ಭೂಸ್ವಾಧೀನಕ್ಕೆ ೧೨೩೬ ಕೋಟಿ ರೂ., ರಸ್ತೆ ನಿರ್ಮಾಣಕ್ಕೆ ೭೩೫ ಕೋಟಿ ರೂ. ಸೇರಿ ಒಟ್ಟು ೧೯೭೧ ಕೋಟಿ ರೂ.ಗಳ ವೆಚ್ಚವಾಗುತ್ತದೆಂದು ಅಂದಾಜಿಸಿದ್ದು, ಹೀಗಾಗಿ, ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಟೆಂಡರ್ ಕರೆಯಲು ಅನುಮೋದನೆ ಕೊಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಟೆಂಡರ್ ಕರೆದು ಏಜೆನ್ಸಿಯನ್ನು ನಿಯೋಜಿಸಿಕೊಳ್ಳಲು ೯.೮೫ ಕೋಟಿ ರೂ. ಅಗತ್ಯ ಇರಬಹುದೆಂದು ಅಂದಾಜಿಸಿ ಒಪ್ಪಿಗೆ ಕೊಡುವಂತೆ ನಗರಾಭಿವೃದ್ಧಿ ಇಲಾಖೆಗೆ ಕೋರಿತ್ತು. ಇದೀಗ ನಗರಾಭಿವೃದ್ಧಿ ಇಲಾಖೆಯು ಒಪ್ಪಿಗೆ ಸೂಚಿಸಿ ಹಲವಾರು ಅಂಶಗಳನ್ನು ಪಾಲಿಸುವಂತೆ ಹೇಳಿದೆ.
ಡಿಪಿಆರ್ ತಯಾರಿಕೆಗೆ ಮುಡಾದ ಸ್ವಂತ ಸಂಪನ್ಮೂಲ ಭರಿಸುವುದು, ಡಿಪಿಆರ್ ತಯಾರಾದ ನಂತರ ಯೋಜನೆಯನ್ನು ರೂಪಿಸುವ ಸಂದರ್ಭದಲ್ಲಿ ಭಾರತ್ ಮಾಲಾ-ಹಂತ ೨ ಅಥವಾ ತತ್ಸಮಾನ ಯೋಜನೆಯಲ್ಲಿ ಸೇರಿಸುವ ಬಗ್ಗೆ ಪ್ರಾಧಿಕಾರವು ನಿರ್ಣಯಿಸತಕ್ಕದ್ದೆಂದು ಹೇಳಿ ಒಪ್ಪಿಗೆ ಕೊಟ್ಟಿದೆ ಎಂದು ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಹೇಳಿದ್ದಾರೆ.
ಪೆರಿಫೆರಲ್ ರಿಂಗ್ ರಸ್ತೆಗೆ ಡಿಪಿಆರ್ ತಯಾರಿಸಲು ಸರ್ಕಾರ ಒಪ್ಪಿಗೆ ನೀಡಿರುವುದರಿಂದ ಜನವರಿ ಎರಡನೇ ವಾರದೊಳಗೆ ಟೆಂಡರ್ ಕರೆಯುತ್ತೇವೆ. ಈಗಾಗಲೇ ಕಳೆದ ಆಯವ್ಯಯದಲ್ಲಿ ೫ ಕೋಟಿ ರೂ. ಮೀಸಲಿಟ್ಟಿರುವ ಕಾರಣ ಏಜೆನ್ಸಿ ನಿಗದಿಯಾದ ತಕ್ಷಣ ಕಾರ್ಯಪ್ರವೃತ್ತರಾಗುತ್ತೇವೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…