ಜಿಲ್ಲೆಗಳು

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಖಂಡನೆ

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಸದಸ್ಯರ ಪ್ರತಿಭಟನೆ
ಮೈಸೂರು: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ(ಎಐಎಂಎಸ್‌ಎಸ್) ಮೈಸೂರಿನ ಚಿಕ್ಕಗಡಿಯಾರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಗಡಿಯಾರ ಎದುರು ಜಮಾಯಿಸಿದ ಪ್ರತಿಭಟನಾಕಾರರು ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವರದಕ್ಷಿಣೆಗಾಗಿ ಕೊಲೆ, ಮರ್ಯಾದೆ ಹತ್ಯೆಗಳು, ಆ್ಯಸಿಡ್ ದಾಳಿ, ಸಾಮೂಹಿತ ಅತ್ಯಾಚಾರ… ಹೀಗೆ ಭ್ರೂಣಾವಸ್ಥೆಯಿಂದ ಹಿಡಿದು ಮಸಣ ಸೇರುವವರೆಗೂ ಹಲವು ಬಗೆಯ ಅನಾದಾರ, ಅಗೌರವ ಕ್ರೌರ್ಯಗಳಿಗೆ ಮಹಿಳೆ ತುತ್ತಾಗುತ್ತಿದ್ದಾಳೆ. ಹಸುಗೂಸಿನಿಂದ ಹಿಡಿದು ಎಲ್ಲಾ ವಯೋಮಾನದ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
೨೦೨೨ರ ವರದಿಯ ಪ್ರಕಾರ ರಾಜ್ಯದಲ್ಲಿ ಲಿಂಗಾನುಪಾತ ಕುಸಿಯುತ್ತಿದೆ. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ ಪ್ರಕಾರ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಮಹಿಳೆಯರ ಮೇಲೆ ಮೃಗೀಯ ದಾಳಿಗಳು ಮುಂದುವರಿಯಲು ಪುರುಷ ಪ್ರಧಾನ ಧೋರಣೆ ಕಾರಣ. ಅಶ್ಲೀಲತೆ, ಕ್ರೌರ್ಯದ ಪ್ರಸಾರ ಮತ್ತು ಮದ್ಯ, ಮಾದಕ ವಸ್ತುಗಳ ಹಾವಳಿಗಳಿಂದ ವಿಕೃತ ಲೈಂಗಿಕತೆಗಳೂ ಬೆಳೆಯುತ್ತಿದ್ದು, ಪಾತಕಿ ಆಯಾಮವನ್ನೂ ತಳೆಯುತ್ತಿವೆ ಎಂದು ಅವರು ಆರೋಪಿಸಿದರು.
ಮಹಿಳೆ ಪುರುಷನ ತೃಷೆಯನ್ನು ತೀರಿಸುವ ವಸ್ತು ಎಂದು ಕಾಣುವ ಪ್ರವೃತ್ತಿ ಎಲ್ಲಿಯವರೆಗೆ ಸಮಾಜದಲ್ಲಿ ನೆಲೆಸಿರುತ್ತದೆಯೋ, ನ್ಯಾಯಾಂಗ ಮತ್ತು ಆಡಳಿತಾಂಗ ಎಲ್ಲಿಯವರೆಗೆ ನ್ಯಾಯಪ್ರಜ್ಞೆ, ಸೂಕ್ಷ್ಮ ಸಂವೇದನೆ ಕಳೆದುಕೊಂಡಿರುತ್ತದೆಯೋ ಅಲ್ಲಿಯವರೆಗೆ ಮಹಿಳೆಯರ ಮೇಲಿನ ಪಾತಕಗಳು ಸಮಾಜದಲ್ಲಿ ಹೆಚ್ಚುತ್ತಲೇ ಹೋಗುತ್ತದೆ. ಇಂತಹ ಅಮಾನವೀಯ ಘಟನೆಗಳಿಗೆ ಕೊನೆ ಹಾಕಲು ನಾವೆಲ್ಲ ಸಜ್ಜಾಗಬೇಕಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಸೂಕ್ತಿ ಮತ್ತು ಛಾಯಾಚಿತ್ರ ಪ್ರದರ್ಶನವನ್ನು ಎಐಎಂಎಸ್‌ಎಸ್ ರಾಜ್ಯ ಸೆಕ್ರೆಟರಿಯೇಟ್ ಸದಸ್ಯೆ ಶಾಂತ ಉದ್ಘಾಟಿಸಿದರು. ಎಐಎಂಎಸ್‌ಎಸ್ ಜಿಲ್ಲಾ ಕಾರ್ಯದರ್ಶಿ ಜಿ.ಎಸ್. ಸೀವಾ, ಮುಖಂಡರಾದ ನಳಿನ, ಅಭಿಲಾಷ, ಪುಟ್ಟರಾಜು, ಬಸವರಾಜು ಮೊದಲಾದವರು ಹಾಜರಿದ್ದರು.

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

2 hours ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

2 hours ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

2 hours ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

2 hours ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

2 hours ago