ಜಿಲ್ಲೆಗಳು

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಖಂಡನೆ

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಸದಸ್ಯರ ಪ್ರತಿಭಟನೆ
ಮೈಸೂರು: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ(ಎಐಎಂಎಸ್‌ಎಸ್) ಮೈಸೂರಿನ ಚಿಕ್ಕಗಡಿಯಾರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಗಡಿಯಾರ ಎದುರು ಜಮಾಯಿಸಿದ ಪ್ರತಿಭಟನಾಕಾರರು ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವರದಕ್ಷಿಣೆಗಾಗಿ ಕೊಲೆ, ಮರ್ಯಾದೆ ಹತ್ಯೆಗಳು, ಆ್ಯಸಿಡ್ ದಾಳಿ, ಸಾಮೂಹಿತ ಅತ್ಯಾಚಾರ… ಹೀಗೆ ಭ್ರೂಣಾವಸ್ಥೆಯಿಂದ ಹಿಡಿದು ಮಸಣ ಸೇರುವವರೆಗೂ ಹಲವು ಬಗೆಯ ಅನಾದಾರ, ಅಗೌರವ ಕ್ರೌರ್ಯಗಳಿಗೆ ಮಹಿಳೆ ತುತ್ತಾಗುತ್ತಿದ್ದಾಳೆ. ಹಸುಗೂಸಿನಿಂದ ಹಿಡಿದು ಎಲ್ಲಾ ವಯೋಮಾನದ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
೨೦೨೨ರ ವರದಿಯ ಪ್ರಕಾರ ರಾಜ್ಯದಲ್ಲಿ ಲಿಂಗಾನುಪಾತ ಕುಸಿಯುತ್ತಿದೆ. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ ಪ್ರಕಾರ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಮಹಿಳೆಯರ ಮೇಲೆ ಮೃಗೀಯ ದಾಳಿಗಳು ಮುಂದುವರಿಯಲು ಪುರುಷ ಪ್ರಧಾನ ಧೋರಣೆ ಕಾರಣ. ಅಶ್ಲೀಲತೆ, ಕ್ರೌರ್ಯದ ಪ್ರಸಾರ ಮತ್ತು ಮದ್ಯ, ಮಾದಕ ವಸ್ತುಗಳ ಹಾವಳಿಗಳಿಂದ ವಿಕೃತ ಲೈಂಗಿಕತೆಗಳೂ ಬೆಳೆಯುತ್ತಿದ್ದು, ಪಾತಕಿ ಆಯಾಮವನ್ನೂ ತಳೆಯುತ್ತಿವೆ ಎಂದು ಅವರು ಆರೋಪಿಸಿದರು.
ಮಹಿಳೆ ಪುರುಷನ ತೃಷೆಯನ್ನು ತೀರಿಸುವ ವಸ್ತು ಎಂದು ಕಾಣುವ ಪ್ರವೃತ್ತಿ ಎಲ್ಲಿಯವರೆಗೆ ಸಮಾಜದಲ್ಲಿ ನೆಲೆಸಿರುತ್ತದೆಯೋ, ನ್ಯಾಯಾಂಗ ಮತ್ತು ಆಡಳಿತಾಂಗ ಎಲ್ಲಿಯವರೆಗೆ ನ್ಯಾಯಪ್ರಜ್ಞೆ, ಸೂಕ್ಷ್ಮ ಸಂವೇದನೆ ಕಳೆದುಕೊಂಡಿರುತ್ತದೆಯೋ ಅಲ್ಲಿಯವರೆಗೆ ಮಹಿಳೆಯರ ಮೇಲಿನ ಪಾತಕಗಳು ಸಮಾಜದಲ್ಲಿ ಹೆಚ್ಚುತ್ತಲೇ ಹೋಗುತ್ತದೆ. ಇಂತಹ ಅಮಾನವೀಯ ಘಟನೆಗಳಿಗೆ ಕೊನೆ ಹಾಕಲು ನಾವೆಲ್ಲ ಸಜ್ಜಾಗಬೇಕಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಸೂಕ್ತಿ ಮತ್ತು ಛಾಯಾಚಿತ್ರ ಪ್ರದರ್ಶನವನ್ನು ಎಐಎಂಎಸ್‌ಎಸ್ ರಾಜ್ಯ ಸೆಕ್ರೆಟರಿಯೇಟ್ ಸದಸ್ಯೆ ಶಾಂತ ಉದ್ಘಾಟಿಸಿದರು. ಎಐಎಂಎಸ್‌ಎಸ್ ಜಿಲ್ಲಾ ಕಾರ್ಯದರ್ಶಿ ಜಿ.ಎಸ್. ಸೀವಾ, ಮುಖಂಡರಾದ ನಳಿನ, ಅಭಿಲಾಷ, ಪುಟ್ಟರಾಜು, ಬಸವರಾಜು ಮೊದಲಾದವರು ಹಾಜರಿದ್ದರು.

andolanait

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

2 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

5 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

9 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

13 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

13 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

13 hours ago