ಜಿಲ್ಲೆಗಳು

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಖಂಡನೆ

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಸದಸ್ಯರ ಪ್ರತಿಭಟನೆ
ಮೈಸೂರು: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ(ಎಐಎಂಎಸ್‌ಎಸ್) ಮೈಸೂರಿನ ಚಿಕ್ಕಗಡಿಯಾರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಗಡಿಯಾರ ಎದುರು ಜಮಾಯಿಸಿದ ಪ್ರತಿಭಟನಾಕಾರರು ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವರದಕ್ಷಿಣೆಗಾಗಿ ಕೊಲೆ, ಮರ್ಯಾದೆ ಹತ್ಯೆಗಳು, ಆ್ಯಸಿಡ್ ದಾಳಿ, ಸಾಮೂಹಿತ ಅತ್ಯಾಚಾರ… ಹೀಗೆ ಭ್ರೂಣಾವಸ್ಥೆಯಿಂದ ಹಿಡಿದು ಮಸಣ ಸೇರುವವರೆಗೂ ಹಲವು ಬಗೆಯ ಅನಾದಾರ, ಅಗೌರವ ಕ್ರೌರ್ಯಗಳಿಗೆ ಮಹಿಳೆ ತುತ್ತಾಗುತ್ತಿದ್ದಾಳೆ. ಹಸುಗೂಸಿನಿಂದ ಹಿಡಿದು ಎಲ್ಲಾ ವಯೋಮಾನದ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.
೨೦೨೨ರ ವರದಿಯ ಪ್ರಕಾರ ರಾಜ್ಯದಲ್ಲಿ ಲಿಂಗಾನುಪಾತ ಕುಸಿಯುತ್ತಿದೆ. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ ಪ್ರಕಾರ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಮಹಿಳೆಯರ ಮೇಲೆ ಮೃಗೀಯ ದಾಳಿಗಳು ಮುಂದುವರಿಯಲು ಪುರುಷ ಪ್ರಧಾನ ಧೋರಣೆ ಕಾರಣ. ಅಶ್ಲೀಲತೆ, ಕ್ರೌರ್ಯದ ಪ್ರಸಾರ ಮತ್ತು ಮದ್ಯ, ಮಾದಕ ವಸ್ತುಗಳ ಹಾವಳಿಗಳಿಂದ ವಿಕೃತ ಲೈಂಗಿಕತೆಗಳೂ ಬೆಳೆಯುತ್ತಿದ್ದು, ಪಾತಕಿ ಆಯಾಮವನ್ನೂ ತಳೆಯುತ್ತಿವೆ ಎಂದು ಅವರು ಆರೋಪಿಸಿದರು.
ಮಹಿಳೆ ಪುರುಷನ ತೃಷೆಯನ್ನು ತೀರಿಸುವ ವಸ್ತು ಎಂದು ಕಾಣುವ ಪ್ರವೃತ್ತಿ ಎಲ್ಲಿಯವರೆಗೆ ಸಮಾಜದಲ್ಲಿ ನೆಲೆಸಿರುತ್ತದೆಯೋ, ನ್ಯಾಯಾಂಗ ಮತ್ತು ಆಡಳಿತಾಂಗ ಎಲ್ಲಿಯವರೆಗೆ ನ್ಯಾಯಪ್ರಜ್ಞೆ, ಸೂಕ್ಷ್ಮ ಸಂವೇದನೆ ಕಳೆದುಕೊಂಡಿರುತ್ತದೆಯೋ ಅಲ್ಲಿಯವರೆಗೆ ಮಹಿಳೆಯರ ಮೇಲಿನ ಪಾತಕಗಳು ಸಮಾಜದಲ್ಲಿ ಹೆಚ್ಚುತ್ತಲೇ ಹೋಗುತ್ತದೆ. ಇಂತಹ ಅಮಾನವೀಯ ಘಟನೆಗಳಿಗೆ ಕೊನೆ ಹಾಕಲು ನಾವೆಲ್ಲ ಸಜ್ಜಾಗಬೇಕಿದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಸೂಕ್ತಿ ಮತ್ತು ಛಾಯಾಚಿತ್ರ ಪ್ರದರ್ಶನವನ್ನು ಎಐಎಂಎಸ್‌ಎಸ್ ರಾಜ್ಯ ಸೆಕ್ರೆಟರಿಯೇಟ್ ಸದಸ್ಯೆ ಶಾಂತ ಉದ್ಘಾಟಿಸಿದರು. ಎಐಎಂಎಸ್‌ಎಸ್ ಜಿಲ್ಲಾ ಕಾರ್ಯದರ್ಶಿ ಜಿ.ಎಸ್. ಸೀವಾ, ಮುಖಂಡರಾದ ನಳಿನ, ಅಭಿಲಾಷ, ಪುಟ್ಟರಾಜು, ಬಸವರಾಜು ಮೊದಲಾದವರು ಹಾಜರಿದ್ದರು.

andolanait

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

2 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

3 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

4 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

6 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

6 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

6 hours ago