ಹನೂರು: ಜಿಲ್ಲೆಯಲ್ಲಿಯೇ ಹನೂರು ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಮಹಿಳಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಘನ ತ್ಯಾಜ್ಯ ವಿಲೇವಾರಿ ಕಾರ್ಯದಲ್ಲಿ ಕಾರ್ಯನಿರ್ವಹಿಸಲು ವಾಹನ ಚಾಲನೆ ತರಬೇತಿ ಪಡೆಯಲು ಮುಂದೆ ಬಂದಿರುವುದು ಶ್ಲಾಘನೆ ವಿಚಾರ ಎಂದು ಜಿಪಂ ಸಿಇಒ ಕೆ.ಎಂ. ಗಾಯತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ ಚಾಮರಾಜನಗರ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಎನ್.ಆರ್.ಎಲ್.ಎಂ.) ಮತ್ತು ಸ್ವಚ್ಛ ಭಾರತ್ ಮಿಷನ್ (ಗ್ರಾ) ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಾಹನ ಚಾಲನೆ ತರಬೇತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಚ್ಛ ಭಾರತ್ ಮಿಷನ್ ಯೋಜನೆ ಗುರಿ ಉದ್ದೇಶಗಳು ಸಾಕಾರಗೊಳ್ಳುವುದರ ಜೊತೆಗೆ ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಈ ಕಾರ್ಯಕ್ರಮ ಪೂರಕವಾಗಿದೆ. ಈಗಾಗಲೇ ಜಿಲ್ಲೆಯ 55 ಗ್ರಾಮ ಪಂಚಾಯಿತಿಗಳಲ್ಲಿ ತರಬೇತಿ ನೀಡಲಾಗಿದೆ. 90 ಗ್ರಾಮ ಪಂಚಾಯಿತಿಗಳಿಗೆ ತರಬೇತಿ ನೀಡಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಪ್ರಾಯೋಗಿಕವಾಗಿ ಮಾಹಿತಿ ನೀಡಲಾಗುವುದರಿಂದ ತರಬೇತಿ ಪಡೆದವರು ಸಾರ್ವಜನಿಕರಿಗೂ ಅರಿವು ಮೂಡಲು ಸಹಕಾರಿಯಾಗಿದೆ ಎಂದರು.
ಒಟ್ಟಾರೆ ಸರ್ಕಾರದ ಯೋಜನೆಗಳು ಕಾರ್ಯರೂಪಕ್ಕೆ ಬರಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಅಭಿಪ್ರಾಯ ಪಟ್ಟ ಅವರು ಮುಖ್ಯಮಂತ್ರಿ ಅವರು ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಈ ಕಾರ್ಯಕ್ರಮದ ಯೋಜನೆಯ ಅನುಷ್ಠಾನದ ಬಗ್ಗೆ ಮಾಹಿತಿ ನೀಡಲಾಗುವುದು. ಈ ವೇಳೆ ತರಬೇತಿ ಪಡೆಯುವ ಸದಸ್ಯರುಗಳು ಜಿಲ್ಲಾ ಕೇಂದ್ರಕ್ಕೆ ಆಗಮಿಸಿ. ಹನೂರು ತಾಲೂಕಿನ ಸ್ವಸಹಾಯ ಸಂಘಗಳ ಸದಸ್ಯರುಗಳು ವಾಹನ ಚಾಲನೆ ತರಬೇತಿ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜಿಲ್ಲೆ ಮತ್ತು ರಾಜ್ಯಕ್ಕೆ ಮಾದರಿಯಾಗಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ತಾಲೂಕು ಕಾರ್ಯನಿರ್ವಾಹಣಧಿಕಾರಿ ಶ್ರೀನಿವಾಸ್, ಎಡಿ ರವೀಂದ್ರ, ಕೆ ಎಸ್ ಆರ್ ಟಿ ಸಿ ಚಾಲನಾ ವಿಭಾಗದ ಮಂಜುನಾಥ್, ಎನ್ ಆರ್ ಎಲ್ ಎಂ ಸಂಯೋಜಕಿ ಸ್ಟೇಲ್ಲಾ ಕುಮಾರಿ, ವಿವಿಧ ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ತಾಲೂಕು ಪಂಚಾಯತಿ ಸಿಬ್ಬಂದಿಗಳಾದ ರಾಜೇಶ್, ಮಹೇಶ್, ರಾಜು, ಮಹಿಳಾ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…