ಜಿಲ್ಲೆಗಳು

ಮಹಿಳಾ ಸ್ವಸಹಾಯ ಸಂಘದ ಪದಾಧಿಕಾರಿಗಳಿಗೆ ಚಾಲನಾ ತರಬೇತಿ

ಹನೂರು: ಜಿಲ್ಲೆಯಲ್ಲಿಯೇ ಹನೂರು ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಮಹಿಳಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಘನ ತ್ಯಾಜ್ಯ ವಿಲೇವಾರಿ ಕಾರ್ಯದಲ್ಲಿ ಕಾರ್ಯನಿರ್ವಹಿಸಲು ವಾಹನ ಚಾಲನೆ ತರಬೇತಿ ಪಡೆಯಲು ಮುಂದೆ ಬಂದಿರುವುದು ಶ್ಲಾಘನೆ ವಿಚಾರ ಎಂದು ಜಿಪಂ ಸಿಇಒ ಕೆ.ಎಂ. ಗಾಯತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ ಚಾಮರಾಜನಗರ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಎನ್.ಆರ್.ಎಲ್.ಎಂ.) ಮತ್ತು ಸ್ವಚ್ಛ ಭಾರತ್ ಮಿಷನ್ (ಗ್ರಾ) ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಾಹನ ಚಾಲನೆ ತರಬೇತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಚ್ಛ ಭಾರತ್ ಮಿಷನ್ ಯೋಜನೆ ಗುರಿ ಉದ್ದೇಶಗಳು ಸಾಕಾರಗೊಳ್ಳುವುದರ ಜೊತೆಗೆ ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಈ ಕಾರ್ಯಕ್ರಮ ಪೂರಕವಾಗಿದೆ. ಈಗಾಗಲೇ ಜಿಲ್ಲೆಯ 55 ಗ್ರಾಮ ಪಂಚಾಯಿತಿಗಳಲ್ಲಿ ತರಬೇತಿ ನೀಡಲಾಗಿದೆ. 90 ಗ್ರಾಮ ಪಂಚಾಯಿತಿಗಳಿಗೆ ತರಬೇತಿ ನೀಡಲಾಗುತ್ತಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಪ್ರಾಯೋಗಿಕವಾಗಿ ಮಾಹಿತಿ ನೀಡಲಾಗುವುದರಿಂದ ತರಬೇತಿ ಪಡೆದವರು ಸಾರ್ವಜನಿಕರಿಗೂ ಅರಿವು ಮೂಡಲು ಸಹಕಾರಿಯಾಗಿದೆ ಎಂದರು.

ಒಟ್ಟಾರೆ ಸರ್ಕಾರದ ಯೋಜನೆಗಳು ಕಾರ್ಯರೂಪಕ್ಕೆ ಬರಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಅಭಿಪ್ರಾಯ ಪಟ್ಟ ಅವರು ಮುಖ್ಯಮಂತ್ರಿ ಅವರು ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ಈ ಕಾರ್ಯಕ್ರಮದ ಯೋಜನೆಯ ಅನುಷ್ಠಾನದ ಬಗ್ಗೆ ಮಾಹಿತಿ ನೀಡಲಾಗುವುದು. ಈ ವೇಳೆ ತರಬೇತಿ ಪಡೆಯುವ ಸದಸ್ಯರುಗಳು ಜಿಲ್ಲಾ ಕೇಂದ್ರಕ್ಕೆ ಆಗಮಿಸಿ. ಹನೂರು ತಾಲೂಕಿನ ಸ್ವಸಹಾಯ ಸಂಘಗಳ ಸದಸ್ಯರುಗಳು ವಾಹನ ಚಾಲನೆ ತರಬೇತಿ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಜಿಲ್ಲೆ ಮತ್ತು ರಾಜ್ಯಕ್ಕೆ ಮಾದರಿಯಾಗಿ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ತಾಲೂಕು ಕಾರ್ಯನಿರ್ವಾಹಣಧಿಕಾರಿ ಶ್ರೀನಿವಾಸ್, ಎಡಿ ರವೀಂದ್ರ, ಕೆ ಎಸ್ ಆರ್ ಟಿ ಸಿ ಚಾಲನಾ ವಿಭಾಗದ ಮಂಜುನಾಥ್, ಎನ್ ಆರ್ ಎಲ್ ಎಂ ಸಂಯೋಜಕಿ ಸ್ಟೇಲ್ಲಾ ಕುಮಾರಿ, ವಿವಿಧ ಸ್ವಸಹಾಯ ಸಂಘಗಳ ಪದಾಧಿಕಾರಿಗಳು, ತಾಲೂಕು ಪಂಚಾಯತಿ ಸಿಬ್ಬಂದಿಗಳಾದ ರಾಜೇಶ್, ಮಹೇಶ್, ರಾಜು, ಮಹಿಳಾ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago