ಜಿಲ್ಲೆಗಳು

ಮಹಿಳೆಯರು ಆರ್ಥಿಕ ಸ್ವಾವಲಂಬಿಳಾಗುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು : ಜನದ್ವನಿ ಬಿ. ವೆಂಕಟೇಶ್

ಹನೂರು: ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಜಿಲ್ಲಾ ಬಿಜೆಪಿ ಒಬಿಸಿ ಜಿಲ್ಲಾ ಸಂಯೋಜಕ ಜನದ್ವನಿ ಬಿ ವೆಂಕಟೇಶ್ ತಿಳಿಸಿದರು.

ಪಟ್ಟಣದ ಆರ್.ಎಸ್. ದೊಡ್ಡಿಯ ವೆಂಕಟೇಶ್ ರವರ ಕಚೇರಿ ಮುಂಭಾಗ ಕುರುವಿಲ್ ಕ್ರಿಯೇಷನ್ ವತಿಯಿಂದ ಆಯೋಜಿಸಿದ್ದ ಮಹಿಳಾ ಸ್ವಯಂ ಉದ್ಯೋಗ ಕಲ್ಪಿಸುವ ಅರಿವು ಮತ್ತು ಚಿಂತನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಬೇಕು ಎಂಬ ಉದ್ದೇಶದಿಂದ ಹನೂರು ಭಾಗದ ಮಹಿಳೆಯರಿಗೆ ಕರಕುಶಲ ವಸ್ತುಗಳ ತಯಾರಿ ಮತ್ತು ಮಾರುಕಟ್ಟೆ ಮಾಡುವ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ನಿಮ್ಮ ಸಮಯ ಮತ್ತು ಶ್ರಮ ಜೊತೆಗೆ ಇಚ್ಛಾಶಕ್ತಿ ಅಗತ್ಯವಿದೆ.ಪ್ರಕೃತಿಗೆ ಅನುಗುಣವಾಗಿ ಆರ್ಥಿಕ ಅಭಿವೃದ್ಧಿ ಮಾಡಿಕೊಳ್ಳಲು ನರೇಂದ್ರ ಮೋದಿಯವರ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಭಾರತೀಯ ಮಹಿಳಾ ಬ್ಯಾಂಕ್ ಮತ್ತು ಮುದ್ರಾ ಯೋಜನೆಯಲ್ಲಿ ಶಿಶು ಸಾಲ ಯೋಜನೆ ಅಡಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ 50,000 ಸಾಲ ನೀಡುತ್ತಾರೆ. ಇಂತಹ ಯೋಜನೆಗಳನ್ನು ಬಳಸಿಕೊಂಡು ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಬೇಕು ಎಂದು ತಿಳಿಸಿದರು.
ಕುರುವಿಲ್ ಸಂಸ್ಥೆಯ ಪಿ.ಎಂ ಕುಮಾರ್ ಅವರು ಕರಕುಶಲ ಉತ್ಪನ್ನಗಳಾದ ತಾಂಬೂಲ ಬ್ಯಾಗ್. ಗಿಫ್ಟ್ ಬಾಕ್ಸ್, ಜುವೆಲ್ಲರಿ ಬಾಕ್ಸ್, ಹ್ಯಾಂಡ್ ಕಾಪ್ಟ್, ಕಾಲಂಕರಿ ಬ್ಯಾಗ್, ಯೋಗ ಮ್ಯಾಟ್. ತಯಾರಿಕೆ ಮತ್ತು ಬಳಕೆ ವಿಧಾನಗಳ ಬಗ್ಗೆ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಧಾ ಮಲ್ಲಣ್ಣ, ಮಹದೇಶ್ವರ ಮಂಡಲ ಮಹಿಳಾ ಅಧ್ಯಕ್ಷೆ ಮೀನಾ, ಜಿಲ್ಲಾ ಮಹಿಳಾ ಪ್ರಭಾರಿ ಮಂಗಳಮ್ಮ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜಯಶೀಲ, ಪ್ರಿಯದರ್ಶಿನಿ ಕೃಷ್ಣ ರಾಜೇಶ್ವರಿ ಅಂಬಿಕಾ ಮತ್ತು ರಾಮಾಪುರ ಕೌದಳ್ಳಿ ಹೂಗ್ಯಂ ಭಾಗದ ಮಹಿಳೆಯರು ಹಾಜರಿದ್ದರು.

andolanait

Recent Posts

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

18 mins ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

19 mins ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

60 mins ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

1 hour ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

1 hour ago

ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್‌ ಘೋಷಣೆ ಮಾಡಿದೆ. ವಿಶೇಷವಾಗಿ…

2 hours ago