ಮೈಸೂರು: ನಗರದಲ್ಲಿ ಕಳೆದ ಎರಡು ವರ್ಷದಿಂದ ಮೈಸೂರಿನ ಎರಡು ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಚೆನೈ ವೈದ್ಯ ಸೇರಿದಂತೆ ೮ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮೈಸೂರು ಮೂಲದ ವೈದ್ಯ ನಾಪತ್ತೆಯಾಗಿದ್ದಾನೆ. ತನಿಖೆ ವೇಳೆ ಎರಡು ವರ್ಷದಲ್ಲಿ ೯೦೦ ಭ್ರೂಣ ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಸಬ್ ಇಂಸ್ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ಅಕ್ಟೋನರ್ ೧೫ರಂದು ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಸ್ಪದವಾಗಿ ಕಂಡುಬಂದ ಕಾರೊಂದನ್ನು ತಪಾಸಣೆ ಮಾಡಿದ ವೇಳೆ ಶಿವಲಿಂಗೆಗೌಡ ಮತ್ತು ನಯನ್ಕುಮಾರ್ ಎಂಬುವವರನ್ನು ವಿಚಾರಣೆ ಮಾಡಿದ್ದಾರೆ. ಈ ವೇಳೆ ಭ್ರೂಣ ಹತ್ಯೆ ಜಾಲದ ಬಗ್ಗೆ ತಿಳಿದು ಬಂದಿದೆ.
ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಂಗಳೂರು ಪೊಲೀಸರು ಚೆನೈ ವೈದ್ಯ ಡಾ.ತುಳಸಿರಾಮ(೪೧), ಮೈಸೂರಿನ ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆಯ ವೈದ್ಯ ಡಾ.ಚಂದನ್ ಬಲ್ಲಾಳ್ ಪತ್ನಿಯೂ ಆದ ಈ ಆಸ್ಪತ್ರೆಯ ವ್ಯವಸ್ಥಾಪಕಿ ಸಿ.ಎಂ.ಮೀನಾ(೩೮) ಮಂಡಿ ಮೊಹಲ್ಲಾ ನಿವಾಸಿ ರಿಜ್ಮಾಖಾನುಮ್(೩೮)ಲ್ಯಾಬ್ ಟೆಕ್ನೀಶಿಯನ್ ನಿಸಾರ್ ಮತ್ತು ಮಧ್ಯವರ್ತಿಗಳಾದ ಶಿವಲಿಂಗೇಗೌಡ, ನಯನ್ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ.
ಈ ಗುಂಪು ತಿಂಗಳಿಗೆ ೨೫ ರಿಂದ ೩೦ ಭ್ರೂಣಹತ್ಯೆ ಮಾಡುತ್ತಿದ್ದರು ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಭ್ರೂಣ ಲಿಂಗ ಪತ್ತೆಗೆ ೨೫ ರಿಂದ ೩೦ ಸಾವಿರ ರೂ ಮತ್ತು ಭ್ರೂಣಹತ್ಯೆಗೆ ೫೦ಸಾವಿರ ರೂ ತಂಡ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…
ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…