ಜಿಲ್ಲೆಗಳು

ಮೈಸೂರಿನಲ್ಲಿ ಭ್ರೂಣ ಹತ್ಯೆ ಜಾಲ ಪತ್ತೆ : ೨ವರ್ಷದಲ್ಲಿ ೯೦೦ ಭ್ರೂಣಗಳ ಹತ್ಯೆ

ಮೈಸೂರು: ನಗರದಲ್ಲಿ ಕಳೆದ ಎರಡು ವರ್ಷದಿಂದ ಮೈಸೂರಿನ ಎರಡು ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪೊಂದನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಚೆನೈ ವೈದ್ಯ ಸೇರಿದಂತೆ ೮ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮೈಸೂರು ಮೂಲದ ವೈದ್ಯ ನಾಪತ್ತೆಯಾಗಿದ್ದಾನೆ. ತನಿಖೆ ವೇಳೆ ಎರಡು ವರ್ಷದಲ್ಲಿ ೯೦೦ ಭ್ರೂಣ ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆಯ ಸಬ್‌ ಇಂಸ್ಪೆಕ್ಟರ್‌ ಮಂಜುನಾಥ್‌ ಹಾಗೂ ಸಿಬ್ಬಂದಿ ಅಕ್ಟೋನರ್‌ ೧೫ರಂದು ಬೆಂಗಳೂರಿನ ಹಳೆ ಮದ್ರಾಸ್‌ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಸ್ಪದವಾಗಿ ಕಂಡುಬಂದ ಕಾರೊಂದನ್ನು ತಪಾಸಣೆ ಮಾಡಿದ ವೇಳೆ ಶಿವಲಿಂಗೆಗೌಡ ಮತ್ತು ನಯನ್‌ಕುಮಾರ್‌ ಎಂಬುವವರನ್ನು ವಿಚಾರಣೆ ಮಾಡಿದ್ದಾರೆ. ಈ ವೇಳೆ ಭ್ರೂಣ ಹತ್ಯೆ ಜಾಲದ ಬಗ್ಗೆ ತಿಳಿದು ಬಂದಿದೆ.

ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಂಗಳೂರು ಪೊಲೀಸರು ಚೆನೈ ವೈದ್ಯ ಡಾ.ತುಳಸಿರಾಮ(೪೧), ಮೈಸೂರಿನ ಉದಯಗಿರಿಯಲ್ಲಿರುವ ಮಾತಾ ಆಸ್ಪತ್ರೆಯ ವೈದ್ಯ ಡಾ.ಚಂದನ್‌ ಬಲ್ಲಾಳ್‌ ಪತ್ನಿಯೂ ಆದ ಈ ಆಸ್ಪತ್ರೆಯ ವ್ಯವಸ್ಥಾಪಕಿ ಸಿ.ಎಂ.ಮೀನಾ(೩೮) ಮಂಡಿ ಮೊಹಲ್ಲಾ ನಿವಾಸಿ ರಿಜ್ಮಾಖಾನುಮ್‌(೩೮)ಲ್ಯಾಬ್‌ ಟೆಕ್ನೀಶಿಯನ್‌ ನಿಸಾರ್‌ ಮತ್ತು ಮಧ್ಯವರ್ತಿಗಳಾದ ಶಿವಲಿಂಗೇಗೌಡ, ನಯನ್‌ಕುಮಾರ್‌ ಬಂಧಿತ ಆರೋಪಿಗಳಾಗಿದ್ದಾರೆ.

ಈ ಗುಂಪು ತಿಂಗಳಿಗೆ ೨೫ ರಿಂದ ೩೦ ಭ್ರೂಣಹತ್ಯೆ ಮಾಡುತ್ತಿದ್ದರು ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಭ್ರೂಣ ಲಿಂಗ ಪತ್ತೆಗೆ ೨೫ ರಿಂದ ೩೦ ಸಾವಿರ ರೂ ಮತ್ತು ಭ್ರೂಣಹತ್ಯೆಗೆ ೫೦ಸಾವಿರ ರೂ ತಂಡ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

andolanait

Recent Posts

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

16 mins ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

48 mins ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

1 hour ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

1 hour ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

2 hours ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

2 hours ago