ಜಿಲ್ಲೆಗಳು

ಕೊನೆಗೂ ಕೋಟೆ ತಾಪಂ ನೂತನ ಕಚೇರಿ ಕಟ್ಟಡ ನಿರ್ಮಾಣ

3 ವರ್ಷಗಳಿಂದ ನಡೆಯದೆ ಸ್ಥಗಿತಗೊಂಡಿದ್ದ ಕಾಮಗಾರಿ; ಶಾಸಕರ ಸೂಚನೆ ಮೇರೆಗೆ ಕಟ್ಟಡ ಪೂರ್ಣ

ಮಂಜು ಕೋಟೆ

ಎಚ್.ಡಿ.ಕೋಟೆ: ಹಳೆಯ ಕಟ್ಟಡದಲ್ಲಿ ಪ್ರಾಣಭಯದಿಂದ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿ ಮತ್ತು ನೌಕರರಿಗೆ ಕೊನೆಗೂ ಒಂದೂವರೆ ಕೋಟಿ ರೂ. ವೆಚ್ಚದ ನೂತನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಕಟ್ಟಡ ನಿರ್ಮಾಣ ಮಾಡುವಲ್ಲಿ ಜನಪ್ರತಿನಿಧಿಗಳು ಮತ್ತು ಗುತ್ತಿಗೆದಾರರು ಮುಂದಾಗಿದ್ದಾರೆ.
ತಾಲ್ಲೂಕಿನ ಕೇಂದ್ರ ಸ್ಥಾನದ ಪಟ್ಟಣದಲ್ಲಿ ದುಸ್ಥಿತಿಯಲ್ಲಿರುವ ಹಳೆ ತಾಪಂ ಕಚೇರಿಯ ಕಟ್ಟಡದಲ್ಲಿ ಅಧಿಕಾರಿ ಮತ್ತು ನೌಕರ ವರ್ಗದವರು ಹಲವಾರು ವರ್ಷಗಳಿಂದ ಪ್ರಾಣ ಭಯದಿಂದ ಕೆಲಸ ನಿರ್ವಹಿಸುತ್ತಿದ್ದರು. ೨೦೧೮ಮತ್ತು ೨೦೧೯ನೇ ಸಾಲಿನಲ್ಲಿ ಈ ಭಾಗದ ಜಿಲ್ಲಾ ಪಂಚಾಯಿತಿ ಸದಸ್ಯರು ನೂತನ ಕಾರ್ಯಾಲಯದ ಕಟ್ಟಡ ಮತ್ತು ಇನ್ನಿತರ ಕೊಠಡಿ ನಿರ್ಮಾಣಕ್ಕೆ ೨ ಕೋಟಿ ರೂ. ಅನುದಾನವನ್ನು ನೀಡಲಾಗಿತ್ತು. ನಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ.ಸೋಮಣ್ಣ ಮತ್ತು ಶಾಸಕ ಅನಿಲ್ ಚಿಕ್ಕಮಾದು, ಜಿಪಂ ಸಿಇಒ ರಾಮಲಿಂಗಯ್ಯ ಮತ್ತಿತರರು ನೂತನ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಿದ್ದರು.
ಲ್ಯಾಂಡ್ ಆರ್ಮಿಯ ಮೂಲಕ ಕಾಮಗಾರಿ ಪಡೆದ ಮೈಸೂರಿನ ಗುತ್ತಿಗೆದಾರ ಬಸವರಾಜು ೩ ವರ್ಷಗಳಾದರೂ ಸಕ್ರಿಯವಾಗಿ ಕಾಮಗಾರಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ೩ ತಿಂಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೆಂಡಾಮಂಡಲರಾದ ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿ ಮತ್ತು ಲ್ಯಾಂಡ್ ಆರ್ಮಿಯವರನ್ನು ತರಾಟೆಗೆ ತೆಗೆದುಕೊಂಡು ಹಳೆ ಕಟ್ಟಡದಲ್ಲಿ ಅಧಿಕಾರಿಗಳು ಪ್ರಾಣ ಭಯದಿಂದ ಕೆಲಸ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ನೂತನ ಕಟ್ಟಡ ಕಾಮಗಾರಿ ಇನ್ನೂ ಪೂರ್ಣಗೊಳಿಸಿಲ್ಲ. ಗುತ್ತಿಗೆದಾರರನ್ನು ತೆಗೆದು ಹಾಕಿ ಬೇರೆಯವರಿಗೆ ನೀಡಿ ಎಂದು ಹೇಳಿ ಅಲ್ಲೇ ಇದ್ದ ಕೃಷ್ಣಾಪುರದ ಪ್ರಥಮ ದರ್ಜೆ ಗುತ್ತಿಗೆದಾರ ಪರಶಿವಮೂರ್ತಿ ಅವರಿಗೆ ನೀವೇ ೨ ತಿಂಗಳೊಳಗಾಗಿ ನೂತನ ಕಟ್ಟಡ ನಿರ್ಮಾಣ ಮಾಡಿ ಎಂದು ಹೇಳಿ ಅಧಿಕಾರಿಗಳಿಗೂ ಸೂಚಿಸಿದ್ದರು.
ಅಂದಿನ  ಕ್ರೀಯಾಯೋಜನೆಯಂತೆ  ಪರಶಿವಮೂರ್ತಿ ಅವರು ಶಾಸಕರ ನಿರ್ದೇಶನದಂತೆ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಆಗಿ ಮೀಟಿಂಗ್ ಹಾಲ್ ಸೇರಿ ಬೃಹತ್ ೪ ಕೊಠಡಿಗಳನ್ನು ಒಳಗೊಂಡ ತಾಪಂ ನೂತನ ಕಾರ್ಯಾಲಯದ ಕಟ್ಟಡ ನಿರ್ಮಾಣ ಮಾಡಿದ್ದು, ಈಗ ಉದ್ಘಾಟನೆಗೆ ಸಿದ್ಧಗೊಂಡಿದೆ.


ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ತಾಪಂ ಕಚೇರಿ ಕಟ್ಟಡ ಉತ್ತಮವಾಗಿ ನಿರ್ಮಾಣಗೊಂಡಿದೆ. ಸರಕಾರದಿಂದ ೧.೪೦ ಕೋಟಿ ರೂ. ಬಿಡುಗಡೆಯಾಗಿದ್ದು, ಉಳಿಕೆ ಅನುದಾನಕ್ಕೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನೂತನ ಸಮುದಾಯ ಭವನದ ಪಕ್ಕದಲ್ಲಿ ೪೦ ಲಕ್ಷ ರೂ. ವೆಚ್ಚದಲ್ಲಿ ರೆಕಾರ್ಡ್ ರೂಂ ಸಹ ನಿರ್ಮಾಣಗೊಳ್ಳಲಿದೆ.
-ಪ್ರಮೋದ್, ಎಇಇ, ಲ್ಯಾಂಡ್ ಆರ್ಮಿ


೨೦೧೮-೧೯ನೇ ಸಾಲಿನ ಎಸ್‌ಆರ್ ದರದಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದೇನೆ. ನನಗೆ ನಷ್ಟವಾಗಿದ್ದರೂ ಶಾಸಕರ ಮತ್ತು ತಾಲ್ಲೂಕಿನಲ್ಲಿ ಹಿತದೃಷ್ಟಿಯಿಂದ ಅನುದಾನದ ಕೊರತೆ ಇದ್ದರೂ ತಾಪಂ ನೂತನ ಕಾರ್ಯಾಲಯದ ಕಟ್ಟಡ ಕ್ರಿಯಾ ೋಂಜನೆಯಂತೆ ನಿರ್ಮಾಣ ಮಾಡಿಸಲಾಗಿದೆ. ಪೂರ್ಣಗೊಂಡಿರುವ ಕಟ್ಟಡವನ್ನು ಶಾಸಕರು ಬಂದು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿ ಶೀಘ್ರದಲ್ಲೇ ಉದ್ಘಾಟನೆ ಮಾಡಲಾಗುವುದು ಎಂದಿದ್ದಾರೆ.
-ಪರಶಿವಮೂರ್ತಿ ಕೃಷ್ಣಾಪುರ, ಪ್ರಥಮ ದರ್ಜೆ ಗುತ್ತಿಗೆದಾರ.

andolanait

Recent Posts

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…

37 mins ago

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…

54 mins ago

ಒಳಚರಂಡಿ ನೀರು ಕಾಲುವೆ ಸೇರಿದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ : ಶಾಸಕ ಜಿಟಿಡಿ ಸೂಚನೆ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…

1 hour ago

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

1 hour ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

2 hours ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

3 hours ago