ಜಿಲ್ಲೆಗಳು

ಕೊನೆಗೂ ಕೋಟೆ ತಾಪಂ ನೂತನ ಕಚೇರಿ ಕಟ್ಟಡ ನಿರ್ಮಾಣ

3 ವರ್ಷಗಳಿಂದ ನಡೆಯದೆ ಸ್ಥಗಿತಗೊಂಡಿದ್ದ ಕಾಮಗಾರಿ; ಶಾಸಕರ ಸೂಚನೆ ಮೇರೆಗೆ ಕಟ್ಟಡ ಪೂರ್ಣ

ಮಂಜು ಕೋಟೆ

ಎಚ್.ಡಿ.ಕೋಟೆ: ಹಳೆಯ ಕಟ್ಟಡದಲ್ಲಿ ಪ್ರಾಣಭಯದಿಂದ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿ ಮತ್ತು ನೌಕರರಿಗೆ ಕೊನೆಗೂ ಒಂದೂವರೆ ಕೋಟಿ ರೂ. ವೆಚ್ಚದ ನೂತನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಕಟ್ಟಡ ನಿರ್ಮಾಣ ಮಾಡುವಲ್ಲಿ ಜನಪ್ರತಿನಿಧಿಗಳು ಮತ್ತು ಗುತ್ತಿಗೆದಾರರು ಮುಂದಾಗಿದ್ದಾರೆ.
ತಾಲ್ಲೂಕಿನ ಕೇಂದ್ರ ಸ್ಥಾನದ ಪಟ್ಟಣದಲ್ಲಿ ದುಸ್ಥಿತಿಯಲ್ಲಿರುವ ಹಳೆ ತಾಪಂ ಕಚೇರಿಯ ಕಟ್ಟಡದಲ್ಲಿ ಅಧಿಕಾರಿ ಮತ್ತು ನೌಕರ ವರ್ಗದವರು ಹಲವಾರು ವರ್ಷಗಳಿಂದ ಪ್ರಾಣ ಭಯದಿಂದ ಕೆಲಸ ನಿರ್ವಹಿಸುತ್ತಿದ್ದರು. ೨೦೧೮ಮತ್ತು ೨೦೧೯ನೇ ಸಾಲಿನಲ್ಲಿ ಈ ಭಾಗದ ಜಿಲ್ಲಾ ಪಂಚಾಯಿತಿ ಸದಸ್ಯರು ನೂತನ ಕಾರ್ಯಾಲಯದ ಕಟ್ಟಡ ಮತ್ತು ಇನ್ನಿತರ ಕೊಠಡಿ ನಿರ್ಮಾಣಕ್ಕೆ ೨ ಕೋಟಿ ರೂ. ಅನುದಾನವನ್ನು ನೀಡಲಾಗಿತ್ತು. ನಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ.ಸೋಮಣ್ಣ ಮತ್ತು ಶಾಸಕ ಅನಿಲ್ ಚಿಕ್ಕಮಾದು, ಜಿಪಂ ಸಿಇಒ ರಾಮಲಿಂಗಯ್ಯ ಮತ್ತಿತರರು ನೂತನ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಿದ್ದರು.
ಲ್ಯಾಂಡ್ ಆರ್ಮಿಯ ಮೂಲಕ ಕಾಮಗಾರಿ ಪಡೆದ ಮೈಸೂರಿನ ಗುತ್ತಿಗೆದಾರ ಬಸವರಾಜು ೩ ವರ್ಷಗಳಾದರೂ ಸಕ್ರಿಯವಾಗಿ ಕಾಮಗಾರಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ೩ ತಿಂಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೆಂಡಾಮಂಡಲರಾದ ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿ ಮತ್ತು ಲ್ಯಾಂಡ್ ಆರ್ಮಿಯವರನ್ನು ತರಾಟೆಗೆ ತೆಗೆದುಕೊಂಡು ಹಳೆ ಕಟ್ಟಡದಲ್ಲಿ ಅಧಿಕಾರಿಗಳು ಪ್ರಾಣ ಭಯದಿಂದ ಕೆಲಸ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ನೂತನ ಕಟ್ಟಡ ಕಾಮಗಾರಿ ಇನ್ನೂ ಪೂರ್ಣಗೊಳಿಸಿಲ್ಲ. ಗುತ್ತಿಗೆದಾರರನ್ನು ತೆಗೆದು ಹಾಕಿ ಬೇರೆಯವರಿಗೆ ನೀಡಿ ಎಂದು ಹೇಳಿ ಅಲ್ಲೇ ಇದ್ದ ಕೃಷ್ಣಾಪುರದ ಪ್ರಥಮ ದರ್ಜೆ ಗುತ್ತಿಗೆದಾರ ಪರಶಿವಮೂರ್ತಿ ಅವರಿಗೆ ನೀವೇ ೨ ತಿಂಗಳೊಳಗಾಗಿ ನೂತನ ಕಟ್ಟಡ ನಿರ್ಮಾಣ ಮಾಡಿ ಎಂದು ಹೇಳಿ ಅಧಿಕಾರಿಗಳಿಗೂ ಸೂಚಿಸಿದ್ದರು.
ಅಂದಿನ  ಕ್ರೀಯಾಯೋಜನೆಯಂತೆ  ಪರಶಿವಮೂರ್ತಿ ಅವರು ಶಾಸಕರ ನಿರ್ದೇಶನದಂತೆ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಆಗಿ ಮೀಟಿಂಗ್ ಹಾಲ್ ಸೇರಿ ಬೃಹತ್ ೪ ಕೊಠಡಿಗಳನ್ನು ಒಳಗೊಂಡ ತಾಪಂ ನೂತನ ಕಾರ್ಯಾಲಯದ ಕಟ್ಟಡ ನಿರ್ಮಾಣ ಮಾಡಿದ್ದು, ಈಗ ಉದ್ಘಾಟನೆಗೆ ಸಿದ್ಧಗೊಂಡಿದೆ.


ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ತಾಪಂ ಕಚೇರಿ ಕಟ್ಟಡ ಉತ್ತಮವಾಗಿ ನಿರ್ಮಾಣಗೊಂಡಿದೆ. ಸರಕಾರದಿಂದ ೧.೪೦ ಕೋಟಿ ರೂ. ಬಿಡುಗಡೆಯಾಗಿದ್ದು, ಉಳಿಕೆ ಅನುದಾನಕ್ಕೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನೂತನ ಸಮುದಾಯ ಭವನದ ಪಕ್ಕದಲ್ಲಿ ೪೦ ಲಕ್ಷ ರೂ. ವೆಚ್ಚದಲ್ಲಿ ರೆಕಾರ್ಡ್ ರೂಂ ಸಹ ನಿರ್ಮಾಣಗೊಳ್ಳಲಿದೆ.
-ಪ್ರಮೋದ್, ಎಇಇ, ಲ್ಯಾಂಡ್ ಆರ್ಮಿ


೨೦೧೮-೧೯ನೇ ಸಾಲಿನ ಎಸ್‌ಆರ್ ದರದಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದೇನೆ. ನನಗೆ ನಷ್ಟವಾಗಿದ್ದರೂ ಶಾಸಕರ ಮತ್ತು ತಾಲ್ಲೂಕಿನಲ್ಲಿ ಹಿತದೃಷ್ಟಿಯಿಂದ ಅನುದಾನದ ಕೊರತೆ ಇದ್ದರೂ ತಾಪಂ ನೂತನ ಕಾರ್ಯಾಲಯದ ಕಟ್ಟಡ ಕ್ರಿಯಾ ೋಂಜನೆಯಂತೆ ನಿರ್ಮಾಣ ಮಾಡಿಸಲಾಗಿದೆ. ಪೂರ್ಣಗೊಂಡಿರುವ ಕಟ್ಟಡವನ್ನು ಶಾಸಕರು ಬಂದು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿ ಶೀಘ್ರದಲ್ಲೇ ಉದ್ಘಾಟನೆ ಮಾಡಲಾಗುವುದು ಎಂದಿದ್ದಾರೆ.
-ಪರಶಿವಮೂರ್ತಿ ಕೃಷ್ಣಾಪುರ, ಪ್ರಥಮ ದರ್ಜೆ ಗುತ್ತಿಗೆದಾರ.

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

4 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

6 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

6 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

7 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

8 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

9 hours ago