ಜಿಲ್ಲೆಗಳು

ಕೊನೆಗೂ ಪ್ರಾರಂಭವಾದ ಕೆಆರ್‌ಎಸ್ ಬೃಂದಾವನ

ಚಿರತೆ ನುಸುಳದಂತೆ ಎಲ್ಲ ರೀತಿಯ ಮುಂಜಾಗ್ರತೆ: ಈಯ್ ಫಾರೂಕ್ ಅಬು

ಮಂಡ್ಯ: ಒಂದು ತಿಂಗಳಿನಿಂದ ಮುಚ್ಚಲಾಗಿದ್ದ ಪ್ರಸಿದ್ಧ ಕೆಆರ್‌ಎಸ್ ಬೃಂದಾವನವನ್ನು ಬುಧವಾರ ಸಂಜೆ ಪ್ರವಾಸಿಗರಿಗಾಗಿ ತೆರೆಯಲಾಗಿದೆ.

ಬೃಂದಾವನದ ಉತ್ತರ ಭಾಗದ ಚಿರತೆ ಸಂಚಾರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯ ವೈರಲ್ ಆಗುತ್ತಿರುವ ಸುರಕ್ಷತೆಯ ದೃಷ್ಟಿಯಿಂದ ಜಾರಿಗೊಳಿಸಲಾಗಿದೆ. ಅದಾಗಿ ಸುಮಾರು ೩೦ ದಿನ ಕಳೆಯುವಷ್ಟರಲ್ಲಿ ಅರಣ್ಯ ಇಲಾಖೆ ಹತ್ತಾರು ರೀತಿಯ ಪ್ರಯತ್ನ ನಡೆಸಿ ಚಿರತೆ ಸೆರೆ ಹಿಡಿಯಲು ಕಸರತ್ತು ನಡೆಸಿದರೂ ಫಲ ನೀಡಿಲ್ಲ.

8 ಬೋನುಗಳನ್ನು ಆಯಕಟ್ಟಿನ ಪ್ರದೇಶದಲ್ಲಿ ಇರಿಸಿದ್ದಲ್ಲದೆ, ಕಾಂಬಿಂಗ್ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಇಡೀ ಉತ್ತರ ಬೃಂದಾವನವನ್ನು ಜಾಲಾಡಿದರೂ ಚಿರತೆಯ ಸುಳಿವು ಆಗಲಿಲ್ಲ. ಇದೀಗ ಹುಲಿ ಟ್ಯಾಂಕ್ ಅನುಸರಿಸಿ ಹೆಚ್ಚಿನ ಸಿಬ್ಬಂದಿಯೊಂದಿಗೆ ಉತ್ತರ ಬೃಂದಾವನದಲ್ಲಿ ಚಿರತೆ ಸೆರೆಗೆ ಇಡೀ ಅರಣ್ಯ ಸಿಬ್ಬಂದಿ ಕಾರ್ಯೋನ್ಮುಖವಾಗಿದೆ.

ಈ ಬೃಂದಾವನ ಪ್ರವೇಶ ಶುಲ್ಕದಿಂದ ಬರುತ್ತಿದ್ದ ಆದಾಯ ಮತ್ತು ವ್ಯಾಪಾರ ವಹಿವಾಟಿನಿಂದ ಬದುಕು ಕಂಡುಕೊಂಡಿದ್ದ ವ್ಯಾಪಾರಿಗಳ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಂಡು 8 ಬೋನ್ಗಳನ್ನಿಟ್ಟು, ಬೃಂದಾವನದ ಗೇಟ್‌ಗಳಲ್ಲಿ ಅರಣ್ಯ ಇಲಾಖೆ ಮತ್ತು ಕೆಆರ್‌ಎಸ್‌ನ ಸಿಬ್ಬಂದಿಯನ್ನು ನಿಗದಿಪಡಿಸಲಾಗಿದೆ.

ಚಿರತೆ ಪ್ರತಿನಿಧಿಗಳು ಮುಂಜಾಗ್ರತಾ ಕ್ರಮವಾಗಿ ಒಂದು ವಾರದ ಮಟ್ಟಿಗೆ ಗಾರ್ಡನ್ ಬಂದ್ ಮಾಡಿ ಜನರು, ಪ್ರವೇಶ ತಡೆದಿದ್ದರು. ಆದರೆ, ನಂತರದಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಂಡಿಲ್ಲ, ಮುಳ್ಳು ಹಂದಿ ಜತೆ ಹೋರಾಟ ನಡೆಸಿದ ದೃಶ್ಯಗಳು ಚಿರತೆ ಇಲ್ಲೇ ಎಲ್ಲೋ ಅಡಗಿದೆ ಎಂಬ ಆತಂಕಕ್ಕೆ ಕಾರಣವಾಗಿತ್ತು. ನಾರ್ತ್ ಬ್ಯಾಂಕ್ ಪ್ರದೇಶದ ನಿವಾಸಿಗಳು ಕತ್ತಲೆಯಾಗುತ್ತಲೇ ಮನೆ ಸೇರಿಕೊಳ್ಳುವ ಬೆಳವಣಿಗೆ ಕಂಡುಬಂತು. ಬೃಂದಾವನಕ್ಕೆ ಪ್ರವೇಶ ನಿಷೇಧಿಸಲಾಗಿದೆ ಪ್ರವಾಸಿ ಸ್ಥಳವನ್ನು ಜೀವನೋಪಾಯಕ್ಕಾಗಿ ನಂಬಿಕೊಆಡಿದ್ದ ವ್ಯಾಪಾರಸ್ಥರು ಕಣ್ಣೀರು ಹಾಕುತ್ತಾರೆ.

ಚಿರತೆ ಹಿಡಿಯಲಾಗದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರವೇಶ ಶುಲ್ಕದಿಂದ 90 ಲಕ್ಷ ನಷ್ಟ:

ಬೃಂದಾವನದ ಸೊಬಗನ್ನು ನೋಡಲು ದೇಶದ ವಿವಿಧೆಡೆಯಿಂದ ಬರುವ ಪ್ರವಾಸಿಗ ವಯಸ್ಕರಿಗೆ 50 ರೂ., ಮಕ್ಕಳಿಗೆ 10 ರೂ., ವಿದೇಶಿಯರಿಗೆ 200 ರೂ.ಪ್ರವೇಶ ಶುಲ್ಕ ವಿಧಿಸಲಾಗುತ್ತಿದೆ. ಇಲ್ಲದ ಪ್ರತಿ ದಿನ ಸುಮಾರು ೨.೫ ರಿಂದ ೩ ಲಕ್ಷ ರೂ. ಪ್ರವೇಶ ಶುಲ್ಕದಿಂದಲೇ ವಸೂಲಾಗುತ್ತಿತ್ತು. ಶನಿವಾರ ಭಾನುವಾರ ಸೇರಿದಂತೆ ಸರ್ಕಾರಿ ರಜಾ ದಿನಗಳಲ್ಲಿ ಹೆಚ್ಚಿನ ಸಂದರ್ಭಗಳಲ್ಲಿ ಆಗಮಿಸುವುದು ವಾಡಿಕೆ, ೩೦ ದಿನಗಳಿಂದ ಆಗಿರುವ ನಷ್ಟವನ್ನು ಕಾಣಬಹುದು. ಇದಲ್ಲದೆ, ಪಾರ್ಕಿಂಗ್ ಶುಲ್ಕ, ಬೋಟಿಂಗ್, ಗಾರ್ಡನ್ ಒಳಗೆ ಅಂಗಡಿ ಮುಂಗಟ್ಟುಗಳ ವ್ಯಾಪಾರ ವಹಿವಾಟು, ಮೀನು ಹೋಟೆಲ್‌ಗಳು ಸೇರಿದಂತೆ ಎಲ್ಲ ಬಗೆಯ ಆರ್ಥಿಕ ಚಟುವಟಿಕೆಗಳೂ ಬಂದ್ ಆಗಿದ್ದರಿಅದು ಇನ್ನೂ ಹೆಚ್ಚಿನ ನಷ್ಟವಾಗಿದೆ ಎನ್ನುತ್ತಾರೆ ಕೆಆರ್‌ಎಸ್‌ನ ಇಐಐ ಫಾರೂಕ್ ಅಬು.

andolana

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

7 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

8 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

8 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

8 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

8 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

8 hours ago